ಆ್ಯಪ್ನಗರ

ರೇವಣ್ಣಗೆ ಅಧಿಕಾರದ ಮದ: ಟೀಕೆ

ಅರಕಲಗೂಡಿನ ರಾಮನಾಥಪುರದಲ್ಲಿ ಪ್ರವಾಹದಿಂದ ನಿರಾಶ್ರಿತರ ಕೇಂದ್ರದಲ್ಲಿ ಆಶ್ರಯ ಪಡೆದಿರುವ ಸಂತ್ರಸ್ತರಿಗೆ ಸಚಿವ ಎಚ್‌.ಡಿ.ರೇವಣ್ಣ, ಬಿಸ್ಕೆಟ್‌ ಎಸೆದಿರುವ ವರ್ತನೆಯನ್ನು ರಾಜ್ಯ ರೈತ ಸಂಘ ತೀವ್ರವಾಗಿ ಖಂಡಿಸಿದೆ.

Vijaya Karnataka 22 Aug 2018, 5:00 am
ಮೈಸೂರು : ಅರಕಲಗೂಡಿನ ರಾಮನಾಥಪುರದಲ್ಲಿ ಪ್ರವಾಹದಿಂದ ನಿರಾಶ್ರಿತರ ಕೇಂದ್ರದಲ್ಲಿ ಆಶ್ರಯ ಪಡೆದಿರುವ ಸಂತ್ರಸ್ತರಿಗೆ ಸಚಿವ ಎಚ್‌.ಡಿ.ರೇವಣ್ಣ, ಬಿಸ್ಕೆಟ್‌ ಎಸೆದಿರುವ ವರ್ತನೆಯನ್ನು ರಾಜ್ಯ ರೈತ ಸಂಘ ತೀವ್ರವಾಗಿ ಖಂಡಿಸಿದೆ.
Vijaya Karnataka Web revival of power criticism
ರೇವಣ್ಣಗೆ ಅಧಿಕಾರದ ಮದ: ಟೀಕೆ


''ಸಚಿವ ಎಚ್‌.ಡಿ.ರೇವಣ್ಣ ಅವರಿಗೆ ಅಧಿಕಾರದ ಮದವೇರಿದೆ, ಅವರು ನಡೆದುಕೊಂಡ ರೀತಿ ಸಂಸ್ಕಾರ ರಹಿತವಾದ ಮನಸ್ಥಿತಿಯ ವರ್ತನೆಯಾಗಿದೆ,'' ಎಂದು ರೈತ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಬಡಗಲಪುರ ನಾಗೇಂದ್ರ ಸುದ್ದಿಗೋಷ್ಠಿಯಲ್ಲಿ ದೂರಿದರು. ''ಸಚಿವರು ಜನರಿಗೆ ಮಾನವೀಯ ನೆಲೆಗಟ್ಟಿನಲ್ಲಿ ನೆರವಾಗಬೇಕು, ಇಂತಹ ವರ್ತನೆ ತೋರುವುದು ಸರಿಯಲ್ಲ,'' ಎಂದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ