ಆ್ಯಪ್ನಗರ

ವಿಷ್ಣು ಸ್ಮಾರಕ ನಿರ್ಮಾಣಕ್ಕೆ ಒತ್ತಾಯಿಸಿ ಸತ್ಯಾಗ್ರಹ

ವಿಷ್ಣು ಸ್ಮಾರಕ ನಿರ್ಮಾಣಕ್ಕೆ ಒತ್ತಾಯಿಸಿ ಸತ್ಯಾಗ್ರಹ -26ರಿಂದ ಬೆಂಗಳೂರು, ಮೈಸೂರಿನಲ್ಲಿ ಅನಿರ್ದಿಷ್ಟಾವಧಿ ಉಪವಾಸ ವಿಕ ಸುದ್ದಿಲೋಕ ಮೈಸೂರು ಆದಷ್ಟು ಬೇಗ ಸರಕಾರ ...

Vijaya Karnataka 23 Dec 2018, 5:00 am
-26ರಿಂದ ಬೆಂಗಳೂರು, ಮೈಸೂರಿನಲ್ಲಿ ಅನಿರ್ದಿಷ್ಟಾವಧಿ ಉಪವಾಸ
Vijaya Karnataka Web satyagraha demanding construction of vishnu memorial
ವಿಷ್ಣು ಸ್ಮಾರಕ ನಿರ್ಮಾಣಕ್ಕೆ ಒತ್ತಾಯಿಸಿ ಸತ್ಯಾಗ್ರಹ


ಮೈಸೂರು: ಆದಷ್ಟು ಬೇಗ ಸರಕಾರ ವಿಷ್ಣುವರ್ಧನ್‌ ಅವರ ಸ್ಮಾರಕ ನಿರ್ಮಾಣ ಮಾಡಬೇಕೆಂದು ಒತ್ತಾಯಿಸಿ ಡಿ.26ರಿಂದ ಬೆಂಗಳೂರು ಮತ್ತು ಮೈಸೂರಿನಲ್ಲಿ ಏಕಕಾಲದಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಹಮ್ಮಿಕೊಳ್ಳಲಾಗಿದೆ ಎಂದು ವಿಎಸ್‌ಎಸ್‌ ವಿಷ್ಣು ಸೇನಾ ಸಂಘಟನೆಯ ರಾಜ್ಯಾಧ್ಯಕ್ಷ ರಾಜುಗೌಡ ತಿಳಿಸಿದರು.

ಅಭಿಮಾನ್‌ ಸ್ಟುಡಿಯೋ ಮಾಲೀಕರು ಹಾಗೂ ಮೈಸೂರು ಸ್ಮಾರಕದ ಭೂಮಿ ಒಡೆಯರು ಈಗಾಗಲೇ ಒಪ್ಪಂದಕ್ಕೆ ಮುಂದಾಗಿದ್ದು, ಸರಕಾರ ಕೂಡಲೇ ಮಾತುಕತೆ ನಡೆಸಬೇಕು,'' ಎಂದು ಸುದ್ದಿಗೋಷ್ಠಿಯಲ್ಲಿ ಒತ್ತಾಯಿಸಿದರು.

''ಸರಕಾರ ಅಭಿಮಾನ ಸ್ಟುಡಿಯೊ ಮೇಲೆ ಹೂಡಿರುವ ಮೊಕದ್ದಮೆಗಳನ್ನು ಹಿಂಪಡೆಯಬೇಕು. ಜತೆಗೆ ಶೀಘ್ರವೇ ಮೈಸೂರಿನಲ್ಲಿ ವಿಷ್ಣು ಸ್ಮಾರಕ ನಿರ್ಮಾಣವಾಗಬೇಕು,'' ಎಂದರು.

ರಾಜ್ಯ ಸಂಘಟನಾ ಕಾರ್ಯದರ್ಶಿ ಟಿ.ಎಸ್‌.ಶ್ರೀಕಂಠ ಮಾತನಾಡಿ, ''ಸಾಹಸ ಸಿಂಹ ವಿಷ್ಣುವರ್ಧನ್‌ ಅವರ ಸ್ಮಾರಕ ನಿರ್ಮಿಸಲು ಸರಕಾರ ಅಗತ್ಯ ಕ್ರಮಗಳನ್ನು ಕೈಗೊಂಡಿಲ್ಲ. ಕಳೆದ ಒಂಬತ್ತು ವರ್ಷದಿಂದ ಎಷ್ಟೆಲ್ಲಾ ಮುಖ್ಯಮಂತ್ರಿ, ಸರಕಾರಗಳು ಬಂದರೂ ಸ್ಮಾರಕದ ಕೆಲಸ ಮಾತ್ರ ಆಗಿಲ್ಲ,'' ಎಂದು ಬೇಸರ ವ್ಯಕ್ತಪಡಿಸಿದರು.

ರಾಜ್ಯ ಪ್ರಧಾನ ಕಾರ್ಯದರ್ಶಿ ಹರೀಶ್‌ ಗೌಡ, ಮೈಸೂರು ಜಿಲ್ಲಾಧ್ಯಕ್ಷ ಎನ್‌.ಸುರೇಶ್‌, ಚಾಮರಾಜನಗರ ಜಿಲ್ಲಾಧ್ಯಕ್ಷ ಸುರೇಶ್‌, ಮಂಡ್ಯ ಜಿಲ್ಲೆ ಗೌರವಾಧ್ಯಕ್ಷ ಬೆಟ್ಟಸ್ವಾಮಿಗೌಡ, ಮೈಸೂರು ಕೆ.ಆರ್‌.ಕ್ಷೇತ್ರದ ಚಂದ್ರು ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ