ಆ್ಯಪ್ನಗರ

Rahul Gandhi | ರಾಹುಲ್ ಗಾಂಧಿ ಭೇಟಿಯಿಂದ ಸಂಭ್ರಮದಲ್ಲಿ ತೇಲಿದ ಬಾಲಕಿ

Rahul Gandhi in Mysuru: ಪಾದಯಾತ್ರೆಯ (Bharat Jodo Yatra) ಸಂದರ್ಭದಲ್ಲಿ ರಾಹುಲ್ ಗಾಂಧಿ 9ನೇ ತರಗತಿ ವಿದ್ಯಾರ್ಥಿನಿ ದಾಲಿಯಾ ಜೊತೆಗೆ ಮಾತನಾಡಿದರು. ಯಾವ ತರಗತಿಯಲ್ಲಿ ಓದುತ್ತಿ? ಏನು ಗುರಿ ಇದೆ ಎಂದು ಕೇಳಿ ತಿಳಿದುಕೊಂಡರು‌. ಬೇಗೂರಿನಲ್ಲಿ ಮಧ್ಯಾಹ್ನದ ವಿರಾಮದ ಬಳಿಕ ಮತ್ತೆ ಸಂಜೆ 4 ಗಂಟೆಗೆ ಆರಂಭಗೊಂಡಿತು. ಮಧ್ಯಾಹ್ನದ ವಿರಾಮದ ಬಳಿಕ ಡಿಕೆಶಿ ಪಾದಯಾತ್ರೆಯಲ್ಲಿ ನಡೆದುಕೊಂಡು‌ ಬಂದರೆ ಸಿದ್ದರಾಮಯ್ಯ ಕಾರಲ್ಲಿ ತೆರಳಿದರು. ಕೆಲವು ಸಮಯದ ಬಳಿಕ ಮತ್ತೆ ಸಿದ್ದರಾಮಯ್ಯ ಕಾಲ್ನಡಿಗೆಯಲ್ಲಿ ಜೊತೆಯಾದರು.

Edited byಹೇಮಂತ್ ಕುಮಾರ್ ಎಸ್ | Reported byಇರ್ಷಾದ್ ಉಪ್ಪಿನಂಗಡಿ | Vijaya Karnataka Web 30 Sep 2022, 7:05 pm

ಹೈಲೈಟ್ಸ್‌:

  • ರಾಹುಲ್ ಗಾಂಧಿ ಭೇಟಿ ಮಾಡಿದ 9ನೇ ತರಗತಿ ವಿದ್ಯಾರ್ಥಿನಿ ದಾಲಿಯಾ
  • ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ ಡ್ರೋನ್ ಒಂದು ಗೊಂದಲ ಸೃಷ್ಟಿಗೆ ಕಾರಣವಾಯಿತು
  • ಪಾದಯಾತ್ರೆಯಲ್ಲಿ ಗಮನ ಸೆಳೆದ ಪುನೀತ್ ರಾಜ್‌ಕುಮಾರ್ ಫೋಟೋ
ಹೈಲೈಟ್ಸ್‌ ಮಾತ್ರವೇ ಓದಲು ಆ್ಯಪ್‌ ಡೌನ್‌ಲೋಡ್‌ ಮಾಡಿ
Vijaya Karnataka Web Girl Who meet Rahul Gandhi in Mysuru
ರಾಹುಲ್ ಗಾಂಧಿ ಭೇಟಿ ಮಾಡಿದ 9ನೇ ತರಗತಿ ವಿದ್ಯಾರ್ಥಿನಿ ದಾಲಿಯಾ
ಮೈಸೂರು: ಭಾರತ್ ಜೋಡೋ ಪಾದಯಾತ್ರೆಯ (Bharat Jodo Yatra) ಸಂದರ್ಭದಲ್ಲಿ ರಾಹುಲ್ ಗಾಂಧಿ (Rahul Gandhi) ಜೊತೆಗೆ ಮಾತನಾಡಲು ಅವಕಾಶ ಸಿಕ್ಕಿದ್ದಕ್ಕೆ ಬಾಲಕಿ ದಾಲಿಯಾ ಸಂಭ್ರಮದಲ್ಲಿದ್ದಾಳೆ.
ಪಾದಯಾತ್ರೆಯ ಸಂದರ್ಭದಲ್ಲಿ ರಾಹುಲ್ ಗಾಂಧಿ 9ನೇ ತರಗತಿ ವಿದ್ಯಾರ್ಥಿನಿ ದಾಲಿಯಾ ಜೊತೆಗೆ ಮಾತನಾಡಿದರು. ಯಾವ ತರಗತಿಯಲ್ಲಿ ಓದುತ್ತಿ? ಏನು ಗುರಿ ಇದೆ ಎಂದು ಕೇಳಿ ತಿಳಿದುಕೊಂಡರು‌.
Rahul Gandhi | ಚಾಮರಾಜನಗರ ಆಕ್ಸಿಜನ್ ದುರಂತದಲ್ಲಿ ಮೃತಪಟ್ಟವರ ಕುಟುಂಬದವರೊಂದಿಗೆ ರಾಹುಲ್ ಗಾಂಧಿ ಸಂವಾದ
ಬೇಗೂರಿನಲ್ಲಿ ಮಧ್ಯಾಹ್ನದ ವಿರಾಮದ ಬಳಿಕ ಮತ್ತೆ ಸಂಜೆ 4 ಗಂಟೆಗೆ ಆರಂಭಗೊಂಡಿತು. ಮಧ್ಯಾಹ್ನದ ವಿರಾಮದ ಬಳಿಕ ಡಿಕೆಶಿ ಪಾದಯಾತ್ರೆಯಲ್ಲಿ ನಡೆದುಕೊಂಡು‌ ಬಂದರೆ ಸಿದ್ದರಾಮಯ್ಯ ಕಾರಲ್ಲಿ ತೆರಳಿದರು. ಕೆಲವು ಸಮಯದ ಬಳಿಕ ಮತ್ತೆ ಸಿದ್ದರಾಮಯ್ಯ ಕಾಲ್ನಡಿಗೆಯಲ್ಲಿ ಜೊತೆಯಾದರು.

ಡ್ರೋನ್ ಸೃಷ್ಟಿಸಿದ ಅವಾಂತರ


ರಾಹುಲ್ ಗಾಂಧಿ ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ ಡ್ರೋನ್ ಒಂದು ಗೊಂದಲ ಸೃಷ್ಟಿಗೆ ಕಾರಣವಾಯಿತು.
ಡಿ.ಕೆ.ಶಿವಕುಮಾರ್ ಮಾನಸಿಕ ಅಸ್ವಸ್ಥರಂತೆ ಮಾತನಾಡುತ್ತಾರೆ: ಡಾ.ಅಶ್ವತ್ಥ್ ನಾರಾಯಣ
ಗುಂಡ್ಲುಪೇಟೆಯಿಂದ ಮಧ್ಯಾಹ್ನದ ವಿರಾಮದ ಬಳಿಕ ಪಾದಯಾತ್ರೆ ಆರಂಭಗೊಂಡಿತು. ಮಾದಾಪಟ್ಟಣ ಬಳಿ ಹಾರಾಡುತ್ತಿದ್ದ ಡ್ರೋನ್ ಬಗ್ಗೆ ರಾಹುಲ್‌ ಭದ್ರತಾ ಸಿಬ್ಬಂದಿ ಆಕ್ಷೇಪ ವ್ಯಕ್ತಪಡಿಸಿದರು. ಆದರೆ ಡ್ರೋನ್ ಯಾರು ಆಪರೇಟ್ ಮಾಡುತ್ತಿದ್ದಾರೆ ಎಂಬುದು ಗೊಂದಲಕ್ಕೆ ಕಾರಣವಾಗಿತ್ತು. ಬಳಿಕ ಭದ್ರತಾ ಸಿಬ್ಬಂದಿ ಡ್ರೋನ್ ಪತ್ತೆ ಹಚ್ಚಿ ವಶಕ್ಕೆ ಪಡೆದುಕೊಂಡರು.

ಭಾರತ್ ಜೋಡೋ ಪಾದಯಾತ್ರೆಯಲ್ಲಿ ಪುನೀತ್ ರಾಜ್‌ಕುಮಾರ್ ಫೋಟೋ
Siddaramaiah | ಬದನವಾಳು: ಜಾಲಿ ಮೂಡ್‌ನಲ್ಲಿದ್ದ ಸಿದ್ದರಾಮಯ್ಯ ವಾಲಿಬಾಲ್‌ ಆಟವಾಡಿ ಸಂಭ್ರಮ

ರಾಹುಲ್ ಗಾಂಧಿ ಪಾದಯಾತ್ರೆಯಲ್ಲಿ ದಿವಂಗತ ನಟ ಪುನೀತ್ ರಾಜ್‌ಕುಮಾರ್ ಪೋಟೋ ಗಮನಸೆಳೆಯಿತು. ಕರ್ನಹಳ್ಳಿಯಲ್ಲಿ ಪಾದಯಾತ್ರೆ ಸಂದರ್ಭದಲ್ಲಿ ಯುವಕರು ಪುನೀತ್ ರಾಜ್‌ಕುಮಾರ್ ಫೋಟೋ ಹಿಡಿದುಕೊಂಡು ಗಮನಸೆಳೆದರು.
ಲೇಖಕರ ಬಗ್ಗೆ
ಹೇಮಂತ್ ಕುಮಾರ್ ಎಸ್
ವಿಜಯ ಕರ್ನಾಟಕ ಡಿಜಿಟಲ್‌ ವಿಭಾಗದಲ್ಲಿ ಪತ್ರಕರ್ತನಾಗಿ 2022ರಿಂದ ಕಾರ್ಯನಿರ್ವಹಿಸುತ್ತಿರುವ ಹೇಮಂತ್ ಮಾಧ್ಯಮ ರಂಗಕ್ಕೆ ಅಧಿಕೃತ ಪ್ರವೇಶ ಆಗಿದ್ದು 2011ರಲ್ಲಿ ನ್ಯೂಸ್ ಚಾನೆಲ್ ಮೂಲಕ. ಅದಕ್ಕೂ ಹಿಂದಿನಿಂದ ವಾರಪತ್ರಿಕೆಗಳಿಗೆ ಪ್ರಚಲಿತ ವಿಜ್ಞಾನ-ತಂತ್ರಜ್ಞಾನಕ್ಕೆ ಸಂಬಂಧಿಸಿದ ಲೇಖನಗಳ ಬರವಣಿಗೆಯಿಂದ ಬರಹದ ನಂಟು ಬೆಳೆಸಿಕೊಂಡಿದ್ದರು. ಸಿನಿಮಾ, ಕ್ರೈಂ, ರಾಜಕೀಯ, ಮೆಟ್ರೊ, ಕನ್ನಡ ಮತ್ತು ಸಂಸ್ಕೃತಿ, ಶಿಕ್ಷಣ, ರಾಷ್ಟ್ರ-ಅಂತಾರಾಷ್ಟ್ರೀಯ ವಿದ್ಯಮಾನಗಳು ಹಾಗೂ ಜಿಲ್ಲೆಗಳಲ್ಲಿನ ಬೆಳವಣಿಗೆಗಳ ಬಗ್ಗೆ ಆಸಕ್ತಿ ವಿಸ್ತರಿಸಿಕೊಂಡಿದ್ದಾರೆ. ಟಿವಿ, ಪತ್ರಿಕೆ, ಡಿಜಿಟಲ್‌/ ವೆಬ್‌, ಕೆಲ ಸಮಯ ರೇಡಿಯೊ ಚಾನೆಲ್‌ನಲ್ಲೂ ತೊಡಗಿಸಿಕೊಂಡ ಅನುಭವಿರುವ ಇವರ ಮಂತ್ರ 'ಬದುಕು ನಿರಂತರ'. ಚಾರಣ, ರಂಗಭೂಮಿ, ಪ್ರವಾಸ, ಓದು,...ಹೀಗೆ ಒಂದಷ್ಟು ಅಭ್ಯಾಸ-ಹವ್ಯಾಸಗಳು ಜೊತೆಗಿವೆ.... ಇನ್ನಷ್ಟು ಓದಿ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ