ಆ್ಯಪ್ನಗರ

ಶ್ರೀನಿವಾಸ ಪ್ರಸಾದ್ ಹಿತೈಷಿಗಳ ಸ್ವಾಭಿಮಾನಿ ಸಮಾವೇಶ ಇಂದು

ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಮಾಜಿ ಸಚಿವ ವಿ.ಶ್ರೀನಿವಾಸ ಪ್ರಸಾದ್ ಮೊದಲ ಬಾರಿಗೆ ನಗರದಲ್ಲಿ ಸ್ವಾಭಿಮಾನಿ ಸಮಾವೇಶವನ್ನು ನ. 8ರಂದು ಆಯೋಜಿಸಿದ್ದು, ಸುಮಾರು 8 ಸಾವಿರ ಜನರು ಆಗಮಿಸುವ ನಿರೀಕ್ಷೆ ಹಿನ್ನೆಲೆ ಆಸನ ವ್ಯವಸ್ಥೆ ಮಾಡಲಾಗಿದೆ.

ವಿಕ ಸುದ್ದಿಲೋಕ 8 Nov 2016, 5:15 am
ನಂಜನಗೂಡು: ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಮಾಜಿ ಸಚಿವ ವಿ.ಶ್ರೀನಿವಾಸ ಪ್ರಸಾದ್ ಮೊದಲ ಬಾರಿಗೆ ನಗರದಲ್ಲಿ ಸ್ವಾಭಿಮಾನಿ ಸಮಾವೇಶವನ್ನು ನ. 8ರಂದು ಆಯೋಜಿಸಿದ್ದು, ಸುಮಾರು 8 ಸಾವಿರ ಜನರು ಆಗಮಿಸುವ ನಿರೀಕ್ಷೆ ಹಿನ್ನೆಲೆ ಆಸನ ವ್ಯವಸ್ಥೆ ಮಾಡಲಾಗಿದೆ.
Vijaya Karnataka Web self respect conference today srinivasa prasad wishers
ಶ್ರೀನಿವಾಸ ಪ್ರಸಾದ್ ಹಿತೈಷಿಗಳ ಸ್ವಾಭಿಮಾನಿ ಸಮಾವೇಶ ಇಂದು


ಬೆಳಗ್ಗೆ 11ಕ್ಕೆ ನಗರದ ರಾಷ್ಟ್ರೀಯ ಹೆದ್ದಾರಿ 212ಕ್ಕೆ ಹೊಂದಿಕೊಂಡಂತಿರುವ ವಿದ್ಯಾವರ್ಧಕ ಮೈದಾನದಲ್ಲಿ ಸ್ವಾಭಿಮಾನಿ ಸಮಾವೇಶ ನಡೆಯಲಿದ್ದು, ಈಗಾಗಲೇ ವೇದಿಕೆ ನಿರ್ಮಾಣ ಕಾರ‌್ಯ ಪೂರ್ಣಗೊಂಡಿದೆ.

ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಬೇಕಾದ ಅನಿವಾರ್ಯತೆಯನ್ನು ಮತದಾರರಿಗೆ ಮನದಟ್ಟು ಮಾಡಿ ಕೊಡುವ ಜತೆಗೆ ಜನರ ಕ್ಷಮೆಯನ್ನೂ ಕೇಳುವುದಾಗಿ ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ಈಗಾಗಲೇ ತಿಳಿಸಿದ್ದಾರೆ. ವಿ.ಶ್ರೀನಿವಾಸ ಪ್ರಸಾದ್ ಬೆಂಬಲಿಗರು ಹಾಗೂ ಹಿತೈಷಿಗಳು ಕೂಡ ತಮ್ಮ ಅನಿಸಿಕೆ ಹಂಚಿಕೊಳ್ಳಲಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ 15 ದಿನಗಳ ಹಿಂದೆ ಆಯೋಜಿಸಿದ್ದ ಕಾಂಗ್ರೆಸ್ ಸಮಾವೇಶಕ್ಕೆ ಗೈರು ಹಾಜ ರಾಗಿದ್ದ ತಾಲೂಕು ಪಂಚಾಯತಿಯ 10 ಕಾಂಗ್ರೆಸ್ ಸದಸ್ಯರು ಪಕ್ಷದ ಸಭೆಗಳಿಗೂ ಗೈರು ಹಾಜರಾಗಿದ್ದರು.
ಆದರೆ ಮಂಗಳವಾರ ನಡೆಯಲಿರುವ ಸ್ವಾಭಿಮಾನಿ ಸಮಾವೇಶದಲ್ಲಿ ಈ ಎಲ್ಲ ತಾಲೂಕು ಪಂಚಾಯಿತಿ ಸದಸ್ಯರು ಹಾಜರಾಗುವ ನಿರೀಕ್ಷೆ ಇದೆ. ಜತೆಗೆ ಈಗಾಗಲೇ ಪ್ರಸಾದ್ ಪರ ಗುರುತಿಸಿ ಕೊಂಡಿರುವ ಇಬ್ಬರು ನಗರಸಭೆ ಸದಸ್ಯರೊಂದಿಗೆ ಇನ್ನೂ ಮೂವರು ಸಮಾರಂಭಕ್ಕೆ ಹಾಜರಾಗಲಿ ದ್ದಾರೆ ಎಂದೂ ಪ್ರಸಾದ್ ಬೆಂಬಲಿಗರು ತಿಳಿಸಿದ್ದಾರೆ.

ಸಮಾವೇಶಕ್ಕೆ ಹಾಜರಾಗುವ ಜನರಿಗೆ ಭೋಜನ ವ್ಯವಸ್ಥೆ ಮಾಡಲಾಗಿದೆ. ಸಮಾವೇಶ ಆಯೋಜಿಸಲಾಗಿರುವ ಸ್ಥಳಕ್ಕೆ ಹೊಂದಿ ಕೊಂಡಂತಿ ರುವ ಶಿವರಾತ್ರೀಶ್ವರ ಮಂಗಳ ಮಂಟಪದಲ್ಲಿ ಸಮಾವೇಶಕ್ಕೆ ಬರುವವರ ಊಟಕ್ಕಾಗಿ 10 ಸಾವಿರ ಜನರಿಗೆ ಹೋಳಿಗೆ ಬಡಿಸಲು ಸಿದ್ಧತೆ ಮಾಡಲಾಗಿದೆ. ಕಾರ‌್ಯಕ್ರಮಕ್ಕೆ ಪೂರ್ವ ಭಾವಿ ಯಾಗಿ ಕ್ಷೇತ್ರ ವ್ಯಾಪ್ತಿಯ ಗ್ರಾಮೀಣ ಪ್ರದೇಶಗಳಲ್ಲಿ ವ್ಯಾಪಕ ಪ್ರಚಾರ ನಡೆಸಲಾಗಿದ್ದು, ನೆರೆಯ ಗುಂಡ್ಲುಪೇಟೆ, ಚಾಮರಾಜನಗರ, ಮೈಸೂರು, ಹಾಸನ ಸೇರಿದಂತೆ ವಿವಿಧ ಭಾಗಗಳಿಂ ದೂ ಶ್ರೀನಿವಾಸ್ ಪ್ರಸಾದ್ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಲಿದ್ದಾರೆ ಎಂದು ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಕುಂಬರಳ್ಳಿ ಸುಬ್ಬಣ್ಣ ತಿಳಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ