ಆ್ಯಪ್ನಗರ

ವೃತ್ತಿಪರ ಕೋರ್ಸ್‌ಗೆ ಪ್ರತ್ಯೇಕ ಅರ್ಜಿ ಸಲ್ಲಿಕೆಯೇ ಇರಲಿ: ದಸಂಸ ಪ್ರತಿಭಟನೆ

ವೃತ್ತಿಪರ ಕೋರ್ಸ್‌ ತರಬೇತಿಗೆ ಪ್ರತ್ಯೇಕವಾಗಿ ಅರ್ಜಿ ಆಹ್ವಾನಿಸುವ ಪದ್ಧತಿ ದಿಢೀರನೆ ರದ್ದುಗೊಳಿಸಿರುವುದನ್ನು ಖಂಡಿಸಿ ದಲಿತ ಸಂಘರ್ಷ ಸಮಿತಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

Vijaya Karnataka 12 Sep 2019, 5:00 am
ಮೈಸೂರು : ವೃತ್ತಿಪರ ಕೋರ್ಸ್‌ ತರಬೇತಿಗೆ ಪ್ರತ್ಯೇಕವಾಗಿ ಅರ್ಜಿ ಆಹ್ವಾನಿಸುವ ಪದ್ಧತಿ ದಿಢೀರನೆ ರದ್ದುಗೊಳಿಸಿರುವುದನ್ನು ಖಂಡಿಸಿ ದಲಿತ ಸಂಘರ್ಷ ಸಮಿತಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
Vijaya Karnataka Web separate application for a professional course is required
ವೃತ್ತಿಪರ ಕೋರ್ಸ್‌ಗೆ ಪ್ರತ್ಯೇಕ ಅರ್ಜಿ ಸಲ್ಲಿಕೆಯೇ ಇರಲಿ: ದಸಂಸ ಪ್ರತಿಭಟನೆ


ಜಿಲ್ಲಾಧಿಕಾರಿ ಕಚೇರಿ ಬಳಿ ಬುಧವಾರ ಜಮಾವಣೆಗೊಂಡ ಪ್ರತಿಭಟನಾಕಾರರು, ಧಿಕ್ಕಾರದ ಘೋಷಣೆಗಳನ್ನು ಕೂಗಿದರು.

''ಸಮಾಜ ಕಲ್ಯಾಣ ಇಲಾಖೆ ಮೂಲಕ ಪ.ಜಾತಿ, ಪಂಗಡಕ್ಕೆ ಸೇರಿರುವ ವಿದ್ಯಾರ್ಥಿಗಳು ವೃತ್ತಿಪರ ಶಿಕ್ಷಣ ಪಡೆದು ಬದುಕು ಕಟ್ಟಿಕೊಳ್ಳುತ್ತಿದ್ದರು. ಜಿಎನ್‌ಎಂ, ಬಿಎಸ್ಸಿ, ಪಿಬಿಎಸ್ಸಿ, ಎಂಎಸ್ಸಿ, ನರ್ಸಿಂಗ್‌ ಮತ್ತು ಪ್ಯಾರಾ ಮೆಡಿಕಲ್‌ ನಂತಹ ಕೋರ್ಸ್‌ಗಳಿಗೆ ವಿದ್ಯಾರ್ಥಿಗಳಿಂದ ಪ್ರತ್ಯೇಕ ಅರ್ಜಿ ಆಹ್ವಾನಿಸಿ ಆಯ್ಕೆಯಾದವರನ್ನು ಆಯ್ದ ಕಾಲೇಜುಗಳಿಗೆ ನಿಯೋಜಿಸಿ ತರಬೇತಿ ನೀಡಲಾಗುತ್ತಿತ್ತು. ನಿಯಮಾನುಸಾರ ಕೋರ್ಸ್‌ಗಳಿಗೆ ತಗಲುವ ಸಂಪೂರ್ಣ ವೆಚ್ಚವನ್ನು ಭರಿಸುವುದರ ಜತೆಗೆ ಸಮಾಜ ಕಲ್ಯಾಣ ಇಲಾಖೆ ವಿದ್ಯಾರ್ಥಿಗಳಿಗೆ ಬೆನ್ನೆಲುಬಾಗಿ ನಿಂತು ಪೋಷಕ ಸ್ಥಾನ ತುಂಬಿತ್ತು. ಆದರೆ, ಇಂದಿನ ಸರಕಾರ ಪ್ರತ್ಯೇಕವಾಗಿ ಅರ್ಜಿ ಆಹ್ವಾನಿಸುವ ಪದ್ಧತಿಯನ್ನು ರದ್ದುಗೊಳಿಸಿದೆ,'' ಎಂದು ಆಕ್ರೋಶ ವ್ಯಕ್ತಪಡಿಸಿದರು.

''ಪ್ರಸಕ್ತ ಸಾಲಿನಿಂದ ಈ ಎಲ್ಲಕೋರ್ಸ್‌ಗಳಿಗೆ ಪ್ರವೇಶ ಬಯಸುವ ಪ.ಜಾತಿ, ಪ.ಪಂಗಡದ ಹಾಗೂ ಎಲ್ಲಾವರ್ಗದ ವಿದ್ಯಾರ್ಥಿಗಳಿಗೂ ಒಟ್ಟಾಗಿ ಅರ್ಜಿಯನ್ನು ಆಹ್ವಾನಿಸುವ ಕರ್ನಾಟಕ ರಾಜ್ಯ ಶುಶ್ರೂಷ ಪರೀಕ್ಷಾ ಮಂಡಳಿ ಮತ್ತು ಪ್ಯಾರಾ ಮೆಡಿಕಲ್‌ ಬೋರ್ಡ್‌ಗಳಿಗೆ ಅರ್ಜಿ ಸಲ್ಲಿಸುವಂತೆ ತಿಳಿಸಿರುವುದು ಖಂಡನೀಯ. ಈ ಕೋರ್ಸ್‌ಗಳಿಗಾಗಿ ಜಾರಿ ಮಾಡಿರುವ ಹೊಸ ಆಯ್ಕೆ ಪದ್ಧತಿಯನ್ನು ಕೈಬಿಟ್ಟು ಇದುವರೆಗೂ ಜಾರಿಯಲ್ಲಿದ್ದ ಪದ್ಧತಿಯನ್ನೇ ಮುಂದುವರಿಸಿಕೊಂಡು ಹೋಗಬೇಕೆಂದು,'' ಒತ್ತಾಯಿಸಿದರು.

ಪ್ರತಿಭಟನೆಯಲ್ಲಿಚೋರನಹಳ್ಳಿ ಶಿವಣ್ಣ, ಹಾರೋಹಳ್ಳಿ ನಟರಾಜು, ನಂಜನಗೂಡು ಶಿವು, ಬಿಳಿಗೆರೆ ದೇವರಾಜು, ಯಡದೊರೆ ಮಹದೇವಯ್ಯ, ಕಿರಂಗೂರು ಸ್ವಾಮಿ ಸೇರಿದಂತೆ ಹಲವರು ಭಾಗವಹಿಸಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ