ಆ್ಯಪ್ನಗರ

ಬಿಎಸ್‌ವೈ ಹೇಳಿಕೆಯಿಂದ ದೇಶದಲ್ಲಿ ಬಿಜೆಪಿ ಬಗ್ಗೆ ಸಂಶಯ: ಸಿದ್ದರಾಮಯ್ಯ

ಬಿಜೆಪಿಯವರು ದೇಶದ ರಕ್ಷಣೆ ವಿಚಾರವನ್ನು ರಾಜಕೀಯಕ್ಕೆ ಬಳಸಿಕೊಳ್ಳುತ್ತಿದ್ದಾರೆ ಎಂದು ನಾನು ಹೇಳುವುದಿಲ್ಲ. ಆದರೆ, ಗಡಿಯಲ್ಲಿ ಪ್ರಾಣವನ್ನೂ ಲೆಕ್ಕಿಸದೆ ದೇಶ ಕಾಯುವ ಯೋಧರ ವಿಚಾರದಲ್ಲಿ ರಾಜಕೀಯ ಮಾಡಬಾರದು ಎಂದು ಕಿವಿಮಾತು ಹೇಳಿದರು.

Vijaya Karnataka Web 1 Mar 2019, 2:15 pm
ಮೈಸೂರು: ದೇಶದ ಭದ್ರತೆ ವಿಚಾರದಲ್ಲಿ ಯಾರೂ ರಾಜಕೀಯ ಮಾಡಬಾರದು‌. ಆದರೆ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಹೇಳಿಕೆಯಿಂದ ದೇಶದಲ್ಲಿ ಬಿಜೆಪಿ ಬಗ್ಗೆ ಸಂಶಯ ಮೂಡಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದರು.
Vijaya Karnataka Web siddaramaiah


ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ದೇಶದ ರಕ್ಷಣೆ ವಿಚಾರವನ್ನು ರಾಜಕೀಯಕ್ಕೆ ಬಳಸಿಕೊಳ್ಳುತ್ತಿದ್ದಾರೆ ಎಂದು ನಾನು ಹೇಳುವುದಿಲ್ಲ. ಆದರೆ, ಗಡಿಯಲ್ಲಿ ಪ್ರಾಣವನ್ನೂ ಲೆಕ್ಕಿಸದೆ ದೇಶ ಕಾಯುವ ಯೋಧರ ವಿಚಾರದಲ್ಲಿ ರಾಜಕೀಯ ಮಾಡಬಾರದು ಎಂದು ಕಿವಿಮಾತು ಹೇಳಿದರು.

ಯಡಿಯೂರಪ್ಪ ಅವರು ದೇಶದ ಗಡಿಯಲ್ಲಿ ಆಗಿರುವ ಬೆಳವಣಿಗೆಗಳಿಂದ ರಾಜ್ಯದಲ್ಲಿ ಬಿಜೆಪಿಗೆ 22 ಸೀಟು ಗೆಲ್ಲಲು ಅನುಕೂಲವಾಗಲಿದೆ ಎಂದು ಹೇಳಿದ್ದಾರೆ. ಒಬ್ಬ ಮಾಜಿ ಮುಖ್ಯಮಂತ್ರಿ ಮತ್ತು ಬಿಜೆಪಿ ರಾಜ್ಯಾಧ್ಯಕ್ಷರಾಗಿ ಆ ಮಾತು ಆಡಬಾರದು.
ಅವರ ಹೇಳಿಕೆಯನ್ನು ಪಾಕಿಸ್ತಾನವೂ ಉಲ್ಲೇಖಿಸಿದೆ. ಬಿಎಸ್‌ವೈ ಹೇಳಿಕೆಯಿಂದ ದೇಶಾದ್ಯಂತ ಬಿಜೆಪಿ ಬಗ್ಗೆ ಸಂಶಯ ಶುರುವಾಗಿದೆ ಎಂದರು.

ವಿಂಗ್ ಕಮಾಂಡರ್ ಅಭಿನಂದನ್ ಅವರನ್ನು ಬಿಡುಗಡೆ ಮಾಡಲೇಬೇಕು. ಒಂದು ವೇಳೆ ಬಿಡುಗಡೆ ಮಾಡದೇ ಇದ್ದರೆ, ದುಷ್ಪರಿಣಾಮ ಬೀರುತ್ತದೆ. ಅದಕ್ಕಾಗಿ ಪಾಕಿಸ್ತಾನ, ಅಭಿನಂದನ್ ಅವರನ್ನು ಬಿಡುಗಡೆ ಮಾಡುತ್ತಿದೆ. ಪಾಕ್‌ನ ಈ ನಡೆಯನ್ನು ಸ್ವಾಗತಿಸುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಇಂದಿರಾ ಗಾಂಧಿ ಪ್ರಧಾನಿಯಾಗಿದ್ದ ಸಂದರ್ಭದಲ್ಲಿಯೂ ಯುದ್ಧಗಳು ನಡೆದಿವೆ. 1971ರಲ್ಲಿ ಪಾಕಿಸ್ತಾನ ವಿರುದ್ಧ ಯುದ್ಧ ನಡೆದಿತ್ತು. ಆಗ ಪಾಕ್ ಸೋತು ಶರಣಾಯಿತು. ಆದ್ದರಿಂದ ದೇಶದ ವಿಚಾರದಲ್ಲಿ ರಾಜಕೀಯ ಮಾಡುವುದು ಸರಿಯಲ್ಲ ಎಂದು ಹೇಳಿದರು

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ