ಆ್ಯಪ್ನಗರ

ಕಾಂಗ್ರೆಸ್‌-ಜೆಡಿಎಸ್‌ ಭಿನ್ನಮತ ಒಪ್ಪಿಕೊಂಡ ಸಿದ್ದರಾಮಯ್ಯ

ಬಿಜೆಪಿಯವರು ಸರ್ಕಾರ ಅಸ್ಥಿರಗೊಳಿಸುವ ಪ್ರಯತ್ನದಲ್ಲಿ ಅವರೇ ಅಸ್ಥಿರವಾಗ್ತಿದ್ದಾರೆ. 5 ಕ್ಷೇತ್ರದಲ್ಲಿ ಮೈತ್ರಿ ಪಕ್ಷದ ಅಭ್ಯರ್ಥಿಗಳೇ ಗೆಲ್ಲಲಿದ್ದಾರೆ.

Vijaya Karnataka Web 24 Oct 2018, 3:52 pm
ಮೈಸೂರು: ಬಹಳ ವರ್ಷಗಳಿಂದ ಎದುರಾಳಿಯಾಗಿ ಹೋರಾಟ ಮಾಡಿಕೊಂಡು ಬಂದವರು, ಏಕಾಏಕಿ ಜೊತೆಯಲ್ಲಿ ಕೆಲಸ ಮಾಡಲು ಇರಿಸು-ಮುರಿಸು ಉಂಟಾಗುತ್ತೆ, ಎನ್ನುವುದರ ಮೂಲಕ ಜೆಡಿಎಸ್ ಮತ್ತು ಕಾಂಗ್ರೆಸ್ ನಡುವೆ ಭಿನ್ನಾಭಿಪ್ರಾಯ ಇದೆ ಎಂದು ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಒಪ್ಪಿಕೊಂಡಿದ್ದಾರೆ.
Vijaya Karnataka Web Siddaramaiah


ಚುನಾವಣಾ ಪ್ರಚಾರದಲ್ಲಿ ಮಾತನಾಡುತ್ತ ಮೈತ್ರಿ ಪಕ್ಷಗಳ ನಡುವಿನ ಭಿನ್ನಾಭಿಪ್ರಾಯವನ್ನು ಒಪ್ಪಿಕೊಂಡ ಮಾಜಿ ಸಿಎಂ, ಬಿಜೆಪಿಯವರು ಸರ್ಕಾರ ಅಸ್ಥಿರಗೊಳಿಸುವ ಪ್ರಯತ್ನದಲ್ಲಿ ಅವರೇ ಅಸ್ಥಿರವಾಗ್ತಿದ್ದಾರೆ. 5 ಕ್ಷೇತ್ರದಲ್ಲಿ ಮೈತ್ರಿ ಪಕ್ಷದ ಅಭ್ಯರ್ಥಿಗಳೇ ಗೆಲ್ಲಲಿದ್ದಾರೆ ಎಂದು ಭವಿಷ್ಯ ನುಡಿದರು.

ನಮ್ಮ ನಾಯಕರು ಜೆಡಿಎಸ್ ಅವರೊಂದಿಗೆ ಒಟ್ಟಾಗಿ ಕೆಲಸ ಮಾಡುತ್ತಾರೆ. ನಮ್ಮ ಎದುರಾಳಿ ಬಿಜೆಪಿ ಆಗಿರೋದ್ರಿಂದ ಕೆಲಸ ಮಾಡಲೇಬೇಕು. ನಾನು ಈಗ ಮಂಡ್ಯಕ್ಕೆ ಹೋಗ್ತೇನೆ, ಎಲ್ಲರ ಜೊತೆ ಮಾತಾಡುತ್ತೇನೆ ಎಂದು ಮೈಸೂರಿನಲ್ಲಿ ಮಾಜಿ‌ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಮೇಯರ್ ಆಕಾಂಕ್ಷಿಗಳಿಗೆ ಜೆಡಿಎಸ್‌ಗೆ ಶಾಕ್


ಮೈಸೂರಿನ ಜೆಡಿಎಸ್ ಮೇಯರ್ ಆಕಾಂಕ್ಷಿಗಳಿಗೆ ಮಾಜಿ ಸಿಎಂ ಶಾಕ್ ನೀಡಿದ್ದು ನಮಗೆ ಮೇಯರ್ ಸ್ಥಾನ ಬೇಕು ಎಂದಿದ್ದಾರೆ.

ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ಮೈಸೂರು ಪಾಲಿಕೆಯಲ್ಲಿ ನಾವೇ ಹೆಚ್ಚು ಸಂಖ್ಯೆಯಲ್ಲಿ ಗೆದ್ದಿದ್ದೇವೆ. ಹೀಗಾಗಿಯೇ ನಾವು ಮೇಯರ್ ಸ್ಥಾನವನ್ನು ಕೇಳುತ್ತಿದ್ದೇವೆ. ನಮಗೆ ಮೇಯರ್ ಸ್ಥಾನ ಬೇಕು ಎಂದು ಕಡ್ಡಿಮುರಿದಂತೆ ಹೇಳಿದ್ದಾರೆ.

ಮೈಸೂರು ಎಪಿಎಂಸಿ ಅಧ್ಯಕ್ಷರ ಚುನಾವಣೆ ಮೈತ್ರಿ ವಿಚಾರದ ಬಗ್ಗೆ ಪ್ರಸ್ತಾಪಿಸಲಾಗಿ ಆ ಬಗ್ಗೆ ನನಗೇನೂ ಗೊತ್ತಿಲ್ಲ ಎಂದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ