ಆ್ಯಪ್ನಗರ

ಮಧ್ಯಂತರ ಚುನಾವಣೆ ಬಗ್ಗೆ ಮಾತನಾಡುವುದು ಸಿದ್ದರಾಮಯ್ಯ ಮಾತ್ರ: ಬಿಎಸ್ ವೈ

ಮಧ್ಯಂತರ ಚುನಾವಣೆ ಬಗ್ಗೆ ಮಾತನಾಡೋದು ಸಿದ್ದರಾಮಯ್ಯ ಮಾತ್ರ ಅವರ ಹೇಳಿಕೆಗಳಿಗೆ ಕವಡೆ ಕಾಸಿನ ಕಿಮ್ಮತ್ತಿಲ್ಲ ನಮಗೆ ಸಿದ್ದರಾಮಯ್ಯನವರೇ ಮೂರು ವರ್ಷ ವಿಪಕ್ಷ ನಾಯಕನಾಗಿಯೇ ಇರಬೇಕೆಂಬ ಆಸೆ ಎಂದು ಬಿಎಸ್‌ವೈ ಹೇಳಿದ್ದಾರೆ.

Vijaya Karnataka Web 26 Nov 2019, 1:58 pm
ಮೈಸೂರು: ಈ ಬಾರಿಯ ಉಪಚುನಾವಣೆಯಲ್ಲಿ 15ಕ್ಕೆ 15 ಸ್ಥಾನಗಳನ್ನು ನಾವೇ ಗೆಲ್ಲುತ್ತೇವೆ. ನಾನು ಇದನ್ನು ಪ್ರಚಾರಕ್ಕೆ ಹೇಳುತ್ತಿಲ್ಲ, ಎಲ್ಲವನ್ನು ಸರಿಯಾಗಿ ಲೆಕ್ಕಾ ಹಾಕಿಯೇ ಹೇಳುತ್ತಿದ್ದೇನೆ ಎಂದು ಸಿಎಂ ಯಡಿಯೂರಪ್ಪ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಧ್ಯಂತರ ಚುನಾವಣೆ ಬಗ್ಗೆ ಯಾವಾಗಲೂ ಸಿದ್ದರಾಮಯ್ಯ ಮಾತನಾಡುತ್ತಾರೆ. ರಾಜ್ಯದ ಜನರಿಗೆ ಚುನಾವಣೆ ಬೇಡವಾಗಿದೆ. ಸಿದ್ದರಾಮಯ್ಯ ಅವರ ಹೇಳಿಕೆಗಳಿಗೆ ಕವಡೆ ಕಾಸಿನ ಕಿಮ್ಮತ್ತಿಲ್ಲ. ನಮಗೆ ಸಿದ್ದರಾಮಯ್ಯನವರೇ ಮೂರು ವರ್ಷ ವಿಪಕ್ಷ ನಾಯಕನಾಗಿಯೇ ಇರಬೇಕು. ಬಿಜೆಪಿ ಈ ಬಾರಿ ಉಪ ಚುನಾವಣೆಯಲ್ಲಿ ಎಲ್ಲಾ ಕ್ಷೇತ್ರದಲ್ಲೂ ಗೆಲುವು ಸಾಧಿಸಲಿದೆ ಎಂದರು.

ಇನ್ನು ವಿಧಾನ ಪರಿಷತ್ ಚುನಾವಣೆಯಲ್ಲಿ ಶಿಕ್ಷಕರ ಕ್ಷೇತ್ರದಿಂದ ಪುಟ್ಟಣ್ಣನವರ ಹೆಸರು ಕೇಳಿ ಬಂದ ವಿಚಾರಕ್ಕೆ ಪ್ರತಿಕ್ರಿಯಿಸಿ, ಪರಿಷತ್ ಚುನಾವಣೆಗೆ ಪುಟ್ಟಣ್ಣನವರೇ ಬಿಜೆಪಿಯ ಅಭ್ಯರ್ಥಿ. ಪುಟ್ಟಣ್ಣ 3 ಬಾರಿ ಜೆಡಿಎಸ್ ಪಕ್ಷದಿಂದ ಪ್ರತಿಸಿಧಿಸಿದ್ದರು. ಅವರು ಗೆಲ್ಲುವ ಅಭ್ಯರ್ಥಿ. ಹೀಗಾಗಿ ಘೋಷಣೆ ಮಾಡಿದ್ದೇನೆ ಎಂದರು. ಪುಟ್ಟಣ್ಣ ಅವರನ್ನು ಈಗಾಗಲೇ ಜೆಡಿಎಸ್ ನಿಂದ ಉಚ್ಛಾಟನೆ ಮಾಡಲಾಗಿದ್ದು, ಅವರು ಶೀಘ್ರವೇ ಬಿಜೆಪಿ ಸೇರ್ಪಡೆಯಾಗಲಿದ್ದಾರೆ ಎಂದರು.

ಮಿಸ್ಟರ್‌ ಯಡಿಯೂರಪ್ಪ.. ನಿಮ್ಮದೇನಪ್ಪ...?

ಬೆಂಗಳೂರು ಹುಳಿಮಾವು ಕೆರೆ ಕೋಡಿ ಒಡೆದ ಪ್ರಕರಣಕ್ಕೆ ಪ್ರತಿಕ್ರಿಯಿಸಿ,ನಾನು ಇಂದು ಹೋಗಿ ಸ್ಥಳವನ್ನು ಪರಿಶೀಲಿಸುತ್ತೇನೆ. ಪ್ರಕರಣದಲ್ಲಿ ಅಧಿಕಾರಿಗಳ ನಿರ್ಲಕ್ಷ್ಯ ಎದ್ದು ಕಾಣುತ್ತಿದೆ. ಇದರ ಬಗ್ಗೆ ಸಮಗ್ರವಾಗಿ ಪರಿಶೀಲಿಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುತ್ತೇನೆ. ಕೆರೆಗಳು ತುಂಬಿದಾಗ ಅದನ್ನು ಪರಿಶೀಲಿಸಿ ನಡೆಸುವುದು ಅಧಿಕಾರಿಗಳ ಕರ್ತವ್ಯ. ಆ ಕರ್ತವ್ಯದಲ್ಲಿ ಲೋಪ ಉಂಟಾದಂತೆ ಕಾಣುತ್ತಿದೆ. ನಾನು ಸ್ಥಳ ಪರಿಶೀಲನೆ ಮಾಡಿ ನಂತರ ತಿಳಿಸುತ್ತೇನೆ ಎಂದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ