ಆ್ಯಪ್ನಗರ

ನಂಜನಗೂಡಿನಲ್ಲಿ ವಾಲಿಬಾಲ್‌ ಆಟವಾಡಿ ಸಂಭ್ರಮಿಸಿದ ಸಿದ್ದರಾಮಯ್ಯ

ಅ. 2ರಂದು ನಂಜನಗೂಡು ತಾಲೂಕಿನ ಬದನವಾಳಿನಲ್ಲಿ ನಡೆಯಲಿರುವ ಗಾಂಧಿ ಜಯಂತಿ ಕಾರ‍್ಯಕ್ರಮದಲ್ಲಿ ಭಾಗಿಯಾಗಲಿದ್ದು, ಈ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬುಧವಾರ ಬದನವಾಳು ಗ್ರಾಮದ ಖಾದಿ ಕೇಂದ್ರಕ್ಕೆ ಭೇಟಿ ನೀಡಿ ಸಿದ್ಧತೆಗಳನ್ನು ಪರಿಶೀಲಿಸಿದರು. ಪಕ್ಷದ ಮುಖಂಡರೊಂದಿಗೆ ಬದನವಾಳು ಗ್ರಾಮದಲ್ಲಿ ಸುತ್ತು ಹಾಕಿದರು. ಈ ಸಂದರ್ಭ ಸ್ಥಳೀಯ ಯುವಕರೊಡನೆ ವಾಲಿಬಾಲ್‌ ಆಟವಾಡುವ ಮೂಲಕ ಉತ್ಸಾಹ ತುಂಬಿದರು. ರಾಜಕೀಯ ಜಂಜಾಟದ ಒತ್ತಡದಲ್ಲೇ ಇರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಗ್ರಾಮದ ಯುವಕರು ವಾಲಿಬಾಲ್‌ ಆಡುತ್ತಿರುವುದನ್ನು ಗಮನಿಸಿ ಕುತೂಹಲದಿಂದ ಅವರ ಸಮೀಪಕ್ಕೆ ತೆರಳಿ ತಾವೂ ವಾಲಿಬಾಲ್ ಆಡಿದರು.

Edited byಚೇತನ್ ಓ.ಆರ್. | Vijaya Karnataka Web 29 Sep 2022, 11:00 am
ನಂಜನಗೂಡು: ಭಾರತ್‌ ಐಕ್ಯತಾ ಪಾದಯಾತ್ರೆಯಲ್ಲಿ ಆಗಮಿಸುವ ಕಾಂಗ್ರೆಸ್‌ ವರಿಷ್ಠ ರಾಹುಲ್‌ ಗಾಂಧಿ ಅ. 2ರಂದು ನಂಜನಗೂಡು ತಾಲೂಕಿನ ಬದನವಾಳಿನಲ್ಲಿ ನಡೆಯಲಿರುವ ಗಾಂಧಿ ಜಯಂತಿ ಕಾರ‍್ಯಕ್ರಮದಲ್ಲಿ ಭಾಗಿಯಾಗಲಿದ್ದು, ಈ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬುಧವಾರ ಬದನವಾಳು ಗ್ರಾಮದ ಖಾದಿ ಕೇಂದ್ರಕ್ಕೆ ಭೇಟಿ ನೀಡಿ ಸಿದ್ಧತೆಗಳನ್ನು ಪರಿಶೀಲಿಸಿದರು.
Vijaya Karnataka Web siddaramaiah plays volleyball in Nanjangudu.
ಮಾಜಿ ಸಿಎಂ ಸಿದ್ದರಾಮಯ್ಯ (ಸಂಗ್ರಹ ಚಿತ್ರ)



ಬಳಿಕ ಸಿದ್ದರಾಮಯ್ಯ ಪಕ್ಷದ ಮುಖಂಡರೊಂದಿಗೆ ಬದನವಾಳು ಗ್ರಾಮದಲ್ಲಿ ಸುತ್ತು ಹಾಕಿದರು. ಈ ಸಂದರ್ಭ ಸ್ಥಳೀಯ ಯುವಕರೊಡನೆ ವಾಲಿಬಾಲ್‌ ಆಟವಾಡುವ ಮೂಲಕ ಉತ್ಸಾಹ ತುಂಬಿದರು. ರಾಜಕೀಯ ಜಂಜಾಟದ ಒತ್ತಡದಲ್ಲೇ ಇರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಗ್ರಾಮದ ಯುವಕರು ವಾಲಿಬಾಲ್‌ ಆಡುತ್ತಿರುವುದನ್ನು ಗಮನಿಸಿ ಕುತೂಹಲದಿಂದ ಅವರ ಸಮೀಪಕ್ಕೆ ತೆರಳಿದರು.

ಈ ವೇಳೆ ಜೊತೆಯಲ್ಲಿದ್ದವರ ಒತ್ತಡಕ್ಕೆ ಮಣಿದು ವಾಲಿಬಾಲ್‌ ಅನ್ನು ಎರಡು ಬಾರಿ ಸವ್‌ರ್‍ ಮಾಡುವ ಮೂಲಕ ಆಟಗಾರರಿಗೆ ಉತ್ಸಾಹ ತುಂಬಿದರು. ಈ ವೇಳೆ ಸ್ಥಳೀಯರು ಚಪ್ಪಾಳೆ ಹಾಗೂ ಶಿಳ್ಳೆಯ ಮೂಲಕ ಹುರಿದುಂಬಿಸಿದರು. ಜತೆಯಲ್ಲಿದ್ದ ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್‌.ಧ್ರುವನಾರಾಯಣ ಅವರೂ ವಾಲಿಬಾಲ್‌ ಸವ್‌ರ್‍ ಮಾಡುವ ಮೂಲಕ ಗಮನ ಸೆಳೆದರು.


ಈ ಸಂದರ್ಭ ಮಾಜಿ ಸಚಿವ ಎಚ್‌.ಸಿ.ಮಹದೇವಪ್ಪ, ವರುಣಾ ಕ್ಷೇತ್ರದ ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ, ಮಾಜಿ ಶಾಸಕ ಕಳಲೆ ಎನ್‌.ಕೇಶವಮೂರ್ತಿ, ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ಡಾ.ಬಿ.ಜೆ.ವಿಜಯಕುಮಾರ್‌ ಸೇರಿದಂತೆ ಇತರರಿದ್ದರು.
ಲೇಖಕರ ಬಗ್ಗೆ
ಚೇತನ್ ಓ.ಆರ್.
ಪ್ರಸ್ತುತ, ವಿಜಯ ಕರ್ನಾಟಕ ವೆಬ್ ನಲ್ಲಿ ಪತ್ರಕರ್ತನಾಗಿ 2022ರಿಂದ ಪತ್ರಕರ್ತನಾಗಿ ಸೇವೆ ಸಲ್ಲಿಸುತ್ತಿದ್ದಾರೆ. 2007ರಲ್ಲಿ ತುಮಕೂರು ವಿವಿಯಿಂದ ಪತ್ರಿಕೋದ್ಯಮದಲ್ಲಿ 5ನೇ ರ‍್ಯಾಂಕ್ ನೊಂದಿಗೆ ಸ್ನಾತಕೋತ್ತರ ಪದವಿ ಪಡೆದಿರುವ ಇವರು ಮೈಸೂರು ವಿವಿಯಿಂದ ಪತ್ರಿಕೋದ್ಯಮದಲ್ಲಿ ಪಿಎಚ್ ಡಿ ಪದವಿ ಪಡೆದಿದ್ದಾರೆ. ಜಿಲ್ಲಾ ಸುದ್ದಿಗಳಿಂದ ಹಿಡಿದು ಕ್ರೀಡೆ, ದೇಶ- ವಿದೇಶ, ಸಿನಿಮಾ, ವಿಜ್ಞಾನ- ತಂತ್ರಜ್ಞಾನ ಇತ್ಯಾದಿ ವೈವಿಧ್ಯಯಮ ವಿಷಯಗಳ ಬಗ್ಗೆ ಬರೆಯುವ ಇವರಿಗೆ, ನಾನಾ ಪ್ರತಿಷ್ಠಿತ ಸಂಸ್ಥೆಗಳಲ್ಲಿ ಈವರೆಗೆ 16 ವರ್ಷ ಕೆಲಸ ಮಾಡಿದ ಅನುಭವವಿದೆ. ಫೋಟೋಗ್ರಫಿ ಇವರ ಅಚ್ಚುಮೆಚ್ಚಿನ ಹವ್ಯಾಸ. ಸಿನಿಮಾ, ಸಾಕ್ಷ್ಯಚಿತ್ರ, ಸಾಹಿತ್ಯ, ವಿಡಿಯೋ ಸಂಕಲನ, ಪತ್ರಿಕೆ ಪುಟ ವಿನ್ಯಾಸ, ಹಾಡುಗಾರಿಕೆ, ಚಿತ್ರಕಲೆ, ಅನಿಮೇಶನ್, ಸಂಗೀತದಲ್ಲಿಯೂ ಆಸಕ್ತಿಯಿದೆ.... ಇನ್ನಷ್ಟು ಓದಿ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ