ಮೈಸೂರು: ಎಸ್ಎಸ್ಎಲ್ಸಿಎಪರೀಕ್ಷೆ ಮೊದಲ ದಿನ ಯಾವುದೇ ಅಹಿತಕರ ಘಟನೆ ಇಲ್ಲದೆ ಸುಗಮವಾಗಿ ನಡೆದಿದ್ದು, 1,321 ಮಕ್ಕಳು ಗೈರಾಗಿದ್ದಾರೆ.
ಗುರುವಾರ ಪ್ರಥಮ ಭಾಷೆಯಾದ ಸಂಸ್ಕೃತ, ಕನ್ನಡ, ಇಂಗ್ಲಿಷ್ ಹಾಗೂ ಉರ್ದು ವಿಷಯವನ್ನು ವಿದ್ಯಾರ್ಥಿಗಳು ಬರೆದರು. ಸಾರ್ವಜನಿಕ ಶಿಕ್ಷಣ ಇಲಾಖೆ ಸಕಲ ಸಿದ್ಧತೆ ಮಾಡಿಕೊಂಡಿದ್ದರಿಂದ ಯಾವುದೇ ಅಹಿತಕರ ಘಟನೆ ನಡೆದಿಲ್ಲ.
ನಗರದಲ್ಲಿ 48 ಪರೀಕ್ಷಾ ಕೇಂದ್ರಗಳು ಮತ್ತು ಗ್ರಾಮಾಂತರ ಪ್ರದೇಶದಲ್ಲಿ 90 ಕೇಂದ್ರಗಳು ಸೇರಿ ಒಟ್ಟು 138 ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿತ್ತು. ಒಟ್ಟು 37,903 ವಿದ್ಯಾರ್ಥಿಗಳು ಮೊದಲ ದಿನ ಪರೀಕ್ಷೆ ಬರೆದಿದ್ದಾರೆ. ಅದರಲ್ಲಿ 1,321 ಮಕ್ಕಳು ಗೈರಾಗಿದ್ದಾರೆ. ಗೈರಾದವರಲ್ಲಿ 805 ಬಾಲಕರು, 506 ಬಾಲಕಿಯರು ಸೇರಿದ್ದಾರೆ.
''ಮೊದಲ ದಿನ ಶಾಂತ ರೀತಿಯಲ್ಲಿ ಪರೀಕ್ಷೆ ನಡೆದಿದೆ. ಯಾವುದೇ ಗೊಂದಲ ಇರಲಿಲ್ಲ. ಶಿಸ್ತುಬದ್ಧ ಹಾಗೂ ಕ್ರಮಬದ್ಧವಾಗಿ ಪರೀಕ್ಷೆ ನಡೆದಿದೆ. ಯಾವುದೇ ವಿದ್ಯಾರ್ಥಿ ಡಿಬಾರ್ ಆದ ಪ್ರಕರಣ ನಮ್ಮಲ್ಲಿ ಕಂಡು ಬಂದಿಲ್ಲ. ಒಟ್ಟು 1,321 ವಿದ್ಯಾರ್ಥಿಗಳು ಗೈರಾಗಿದ್ದಾರೆ. ಗೈರು ಹಾಜರಿಗೆ ವಿದ್ಯಾರ್ಥಿ ಮತ್ತು ಪೋಷಕರ ನಿರಾಸಕ್ತಿಯೇ ಕಾರಣ ಇರಬಹುದು. ಪುನಾವರ್ತಿತ ಹಾಗೂ ಖಾಸಗಿಯಾಗಿ ಬರೆಯುವವರೇ ಹೆಚ್ಚಾಗಿ ಗೈರಾಗಿದ್ದಾರೆ,'' ಎಂದು ಡಿಡಿಪಿಐ ಪಾಂಡುರಂಗ 'ವಿಜಯ ಕರ್ನಾಟಕ'ಕ್ಕೆ ತಿಳಿಸಿದರು.
ಸಿಸಿ ಟಿವಿ ಕಣ್ಗಾವಲು: ಪರೀಕ್ಷಾ ಕೇಂದ್ರಗಳಲ್ಲಿ ಅಕ್ರಮ ತಡೆಗೆ ಸಿಸಿ ಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದ್ದು, ಪರೀಕ್ಷಾ ಕೇಂದ್ರಗಳಿಗೆ 'ಸ್ಮಾರ್ಟ್ ವಾಚ್ ಮತ್ತು ಮೊಬೈಲ್ ಫೋನ್' ತರುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿತ್ತು. ಪರೀಕ್ಷಾ ಕೇಂದ್ರದ ಸುತ್ತಲಿನ 200 ಮೀಟರ್ ಸುತ್ತಳತೆಯ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಲಾಗಿತ್ತು. ಜೆರಾಕ್ಸ್ ಕೇಂದ್ರಗಳನ್ನು ಬಂದ್ ಮಾಡಿಸಲಾಗಿತ್ತು. ಪ್ರಶ್ನೆ ಪತ್ರಿಕೆಗಳ ಸುರಕ್ಷ ತೆಗೆ ಪ್ರತಿ ಜಿಲ್ಲಾ ಖಜಾನೆಗಳಲ್ಲಿ ಸಿಸಿಟಿವಿ ಕ್ಯಾಮೆರಾ ಅಳವಡಿಸಲಾಗಿತ್ತು. ಮಾ.25ರಂದು ಗಣಿತ ಪರೀಕ್ಷೆ ನಡೆಯಲಿದೆ.
ಗುರುವಾರ ಪ್ರಥಮ ಭಾಷೆಯಾದ ಸಂಸ್ಕೃತ, ಕನ್ನಡ, ಇಂಗ್ಲಿಷ್ ಹಾಗೂ ಉರ್ದು ವಿಷಯವನ್ನು ವಿದ್ಯಾರ್ಥಿಗಳು ಬರೆದರು. ಸಾರ್ವಜನಿಕ ಶಿಕ್ಷಣ ಇಲಾಖೆ ಸಕಲ ಸಿದ್ಧತೆ ಮಾಡಿಕೊಂಡಿದ್ದರಿಂದ ಯಾವುದೇ ಅಹಿತಕರ ಘಟನೆ ನಡೆದಿಲ್ಲ.
ನಗರದಲ್ಲಿ 48 ಪರೀಕ್ಷಾ ಕೇಂದ್ರಗಳು ಮತ್ತು ಗ್ರಾಮಾಂತರ ಪ್ರದೇಶದಲ್ಲಿ 90 ಕೇಂದ್ರಗಳು ಸೇರಿ ಒಟ್ಟು 138 ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿತ್ತು. ಒಟ್ಟು 37,903 ವಿದ್ಯಾರ್ಥಿಗಳು ಮೊದಲ ದಿನ ಪರೀಕ್ಷೆ ಬರೆದಿದ್ದಾರೆ. ಅದರಲ್ಲಿ 1,321 ಮಕ್ಕಳು ಗೈರಾಗಿದ್ದಾರೆ. ಗೈರಾದವರಲ್ಲಿ 805 ಬಾಲಕರು, 506 ಬಾಲಕಿಯರು ಸೇರಿದ್ದಾರೆ.
''ಮೊದಲ ದಿನ ಶಾಂತ ರೀತಿಯಲ್ಲಿ ಪರೀಕ್ಷೆ ನಡೆದಿದೆ. ಯಾವುದೇ ಗೊಂದಲ ಇರಲಿಲ್ಲ. ಶಿಸ್ತುಬದ್ಧ ಹಾಗೂ ಕ್ರಮಬದ್ಧವಾಗಿ ಪರೀಕ್ಷೆ ನಡೆದಿದೆ. ಯಾವುದೇ ವಿದ್ಯಾರ್ಥಿ ಡಿಬಾರ್ ಆದ ಪ್ರಕರಣ ನಮ್ಮಲ್ಲಿ ಕಂಡು ಬಂದಿಲ್ಲ. ಒಟ್ಟು 1,321 ವಿದ್ಯಾರ್ಥಿಗಳು ಗೈರಾಗಿದ್ದಾರೆ. ಗೈರು ಹಾಜರಿಗೆ ವಿದ್ಯಾರ್ಥಿ ಮತ್ತು ಪೋಷಕರ ನಿರಾಸಕ್ತಿಯೇ ಕಾರಣ ಇರಬಹುದು. ಪುನಾವರ್ತಿತ ಹಾಗೂ ಖಾಸಗಿಯಾಗಿ ಬರೆಯುವವರೇ ಹೆಚ್ಚಾಗಿ ಗೈರಾಗಿದ್ದಾರೆ,'' ಎಂದು ಡಿಡಿಪಿಐ ಪಾಂಡುರಂಗ 'ವಿಜಯ ಕರ್ನಾಟಕ'ಕ್ಕೆ ತಿಳಿಸಿದರು.
ಸಿಸಿ ಟಿವಿ ಕಣ್ಗಾವಲು: ಪರೀಕ್ಷಾ ಕೇಂದ್ರಗಳಲ್ಲಿ ಅಕ್ರಮ ತಡೆಗೆ ಸಿಸಿ ಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದ್ದು, ಪರೀಕ್ಷಾ ಕೇಂದ್ರಗಳಿಗೆ 'ಸ್ಮಾರ್ಟ್ ವಾಚ್ ಮತ್ತು ಮೊಬೈಲ್ ಫೋನ್' ತರುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿತ್ತು. ಪರೀಕ್ಷಾ ಕೇಂದ್ರದ ಸುತ್ತಲಿನ 200 ಮೀಟರ್ ಸುತ್ತಳತೆಯ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಲಾಗಿತ್ತು. ಜೆರಾಕ್ಸ್ ಕೇಂದ್ರಗಳನ್ನು ಬಂದ್ ಮಾಡಿಸಲಾಗಿತ್ತು. ಪ್ರಶ್ನೆ ಪತ್ರಿಕೆಗಳ ಸುರಕ್ಷ ತೆಗೆ ಪ್ರತಿ ಜಿಲ್ಲಾ ಖಜಾನೆಗಳಲ್ಲಿ ಸಿಸಿಟಿವಿ ಕ್ಯಾಮೆರಾ ಅಳವಡಿಸಲಾಗಿತ್ತು. ಮಾ.25ರಂದು ಗಣಿತ ಪರೀಕ್ಷೆ ನಡೆಯಲಿದೆ.