ಆ್ಯಪ್ನಗರ

ರಾಜ್ಯ ಬಜೆಟ್ ಗಾತ್ರ ಕಳೆದ ಬಾರಿಗಿಂತ ಕಡಿಮೆ ಇರಲಿದೆ: ಯಡಿಯೂರಪ್ಪ

ಕಳೆದ ಬಾರಿ 2 ಲಕ್ಷ 37 ಸಾವಿರ ಕೋಟಿ ರೂ.ಬಜೆಟ್ ಗಾತ್ರವಿತ್ತು. ಈ ಬಾರಿ ಅಷ್ಟು ಗಾತ್ರದ ಬಜೆಟ್ ಇರುವುದಿಲ್ಲ. ಸದ್ಯದ ಸ್ಥಿತಿಯಲ್ಲಿ ರಾಜ್ಯದಲ್ಲಿ ಶೇ. 90ರಷ್ಟು ಕೋವಿಡ್ ನಿಯಂತ್ರಣದಲ್ಲಿದೆ. ಕೋವಿಡ್ ಬೇಕಾಗಿರುವಷ್ಟು ಹಣಕಾಸು ನೆರವನ್ನು ಸರಕಾರ ಪೂರೈಸುತ್ತದೆ

Vijaya Karnataka Web 23 Jan 2021, 1:22 pm
ಮೈಸೂರು: ಕೊರೊನಾ ಹಿನ್ನೆಲೆಯಲ್ಲಿ ಈ ಬಾರಿಯ ರಾಜ್ಯ ಬಜೆಟ್‌ ಗಾತ್ರ ಕಳೆದ ಬಾರಿಗಿಂತ ಕಡಿಮೆ ಇರಲಿದೆ ಎಂದು ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ತಿಳಿಸಿದ್ದಾರೆ.
Vijaya Karnataka Web ಬಿಎಸ್‌ ಯಡಿಯೂರಪ್ಪ
ಬಿಎಸ್‌ ಯಡಿಯೂರಪ್ಪ


ವಿವಿಧ ಕಾರ್ಯಕ್ರಮದಲ್ಲಿ ಭಾಗವಹಿಸಲು ಮೈಸೂರಿಗೆ ಆಗಮಿಸಿದ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಈ ಬಾರಿ ಕಳೆದ ವರ್ಷದ ಬಜೆಟ್‌ಗಿಂತ ಕಡಿಮೆ ಮಾಡುವ ಅನಿವಾರ್ಯ ಎದುರಾಗಿದೆ. ಅಲ್ಲದೇ ಈ ವರ್ಷ ಸಂಪನ್ಮೂಲ ಕೊರತೆ ಸಹ ಎದುರಾಗಿದೆ, ಇದಕ್ಕೆ ಕೋವಿಡ್‌ ಸಂಕಷ್ಟವೇ ಕಾರಣ ಎಂದರು.

ಕಳೆದ ಬಾರಿ 2 ಲಕ್ಷ 37 ಸಾವಿರ ಕೋಟಿ ರೂ.ಬಜೆಟ್ ಗಾತ್ರವಿತ್ತು. ಈ ಬಾರಿ ಅಷ್ಟು ಗಾತ್ರದ ಬಜೆಟ್ ಇರುವುದಿಲ್ಲ. ಸದ್ಯದ ಸ್ಥಿತಿಯಲ್ಲಿ ರಾಜ್ಯದಲ್ಲಿ ಶೇ. 90ರಷ್ಟು ಕೋವಿಡ್ ನಿಯಂತ್ರಣದಲ್ಲಿದೆ. ಕೋವಿಡ್ ನಿಯಂತ್ರಣಕ್ಕೆ ಬೇಕಾಗಿರುವಷ್ಟು ಹಣಕಾಸು ನೆರವನ್ನು ಸರಕಾರ ಪೂರೈಸುತ್ತದೆ ಎಂದರು ಬಿಎಸ್‌ವೈ ತಿಳಿಸಿದರು.

ಇನ್ನು ಶಿವಮೊಗ್ಗದಲ್ಲಿ ನಡೆದ ಕಲ್ಲುಕ್ವಾರಿಯಲ್ಲಿನ ಸ್ಪೋಟದ ಘಟನೆಯ ಬಗ್ಗೆ ಪ್ರತಿಕ್ರಿಯಿಸಿ, ಘಟನೆ ನಡೆದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸುತ್ತೇನೆ. ಘಟನೆಯಿಂದ ಮನೆ ಜಖಂ ಆಗಿರುವುದನ್ನು ಗಮನಿಸಿ ಸೂಕ್ತ ಪರಿಹಾರ ಕೊಡುತ್ತೇವೆ. ಗಣಿಗಾರಿಕೆ ಬೇಕು. ಹಾಗೆಯೇ ಅಕ್ರಮವಾಗಿ ಗಣಿಗಾರಿಕೆ ನಡೆಸುತ್ತಿರುವವರು ಈಗಲೇ ಅರ್ಜಿ ಹಾಕಿ ಅದನ್ನು ಸಕ್ರಮ ಮಾಡಿಕೊಳ್ಳಿ. ಇಲ್ಲವಾದರೇ ಸ್ಥಳ ತನಿಖೆ ಮಾಡಿ ಜಿಲ್ಲಾಧಿಕಾರಿಗಳು ಮುಂದಿನ ದಿನದಲ್ಲಿ ಕ್ರಮ ಕೈಗೊಳ್ಳುತ್ತಾರೆ ಎಂದರು.

ಇನ್ನು ಸದ್ಯದ ಸ್ಥಿತಿಯಲ್ಲಿ ರಾಜ್ಯದಲ್ಲಿ ಗಣಿಗಾರಿಕೆ ಅವಶ್ಯಕತೆ ಇದೆ. ರಾಷ್ಟ್ರೀಯ ಹೆದ್ದಾರಿಗಳ ಕಾಮಗಾರಿಗಳು ನಡೆಯುತ್ತಿವೆ. ರಸ್ತೆ ಕಾಮಗಾರಿಗಳಿಗೆ ಗಣಿಗಾರಿಕೆ ಅವಶ್ಯಕತೆ ಇದ್ದೇ ಇರುತ್ತದೆ. ಆದರೆ ಅದು ಸಕ್ರಮವಾಗಿರಬೇಕು.ಇಲ್ಲವಾದರೇ ಅಕ್ರಮ ಗಣಿಗಾರಿಕೆ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ತೆಗೆದುಕೊಳ್ಳಲಾಗುವುದು. ಸಕ್ರಮ ಗಣಿಗಾರಿಕೆಗಳಿಗೆ ಮಾತ್ರ ಅವಕಾಶ. ಎಲ್ಲ ಜಿಲ್ಲೆಗಳಲ್ಲೂ ಗಣಿಗಾರಿಕೆ ಪರಿಶೀಲನೆಗೆ ಆಯಾ ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.

ಇನ್ನು ಶಿವಮೊಗ್ಗ ಪ್ರಕರಣದಲ್ಲಿ ಮೃತ ಕುಟುಂಬಗಳಿಗೆ ಐದು ಲಕ್ಷ ಪರಿಹಾರ ಘೋಷಣೆ ಮಾಡಿದ್ದೇವೆ. ಹಾನಿಗೊಳಗಾದ ಮನೆಗಳಿಗೆ ಪರಿಹಾರದ ಕುರಿತು ಸೂಕ್ತ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಯಡಿಯೂರಪ್ಪ ತಿಳಿಸಿದರು

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ