ಮೈಸೂರು: ಸದ್ಯ ಕರ್ನಾಟಕದಲ್ಲಿ ಬೇಡಿಕೆಗಿಂತ ಹೆಚ್ಚಿನ ವಿದ್ಯುತ್ ಲಭ್ಯವಿದೆ. ಆದರೂ ಕೇಂದ್ರದಿಂದ ಹಾಗೂ ಇತರೆ ರಾಜ್ಯಗಳಿಂದ ಹೆಚ್ಚುವರಿ ವಿದ್ಯುತ್ ಖರೀದಿ ಮಾಡಲಾಗುತ್ತಿದೆ. ಇದರಿಂದ ನಮ್ಮ ಸರ್ಕಾರದ ಬೊಕ್ಕಸಕ್ಕೆ ಬರೋಬ್ಬರಿ 15 ಸಾವಿರ ಕೋಟಿ ನಷ್ಟವಾಗಿದೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಆರೋಪಿಸಿದರು.
ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸದ್ಯ ರಾಜ್ಯದಲ್ಲಿ ಬೇಡಿಕೆಗಿಂತ ಹೆಚ್ಚಿನ ವಿದ್ಯುತ್ ಲಭ್ಯವಿದೆ. ಆದರೂ ಬೇರೆಡೆಯಿಂದ ವಿದ್ಯುತ್ ಕಮಿಷನ್ ಆಸೆಗೆ ಖರೀದಿ ಮಾಡಲಾಗುತ್ತಿದೆ. ಕಳೆದ 15 ತಿಂಗಳಿನಿಂದಲೂ ಸರ್ಕಾರ ಈ ರೀತಿ ವಿದ್ಯುತ್ ಖರೀದಿ ಮಾಡುತ್ತಿದೆ ಎಂದರು.
ಇದರಿಂದ ರಾಜ್ಯ ಸರ್ಕಾರದ ಬೊಕ್ಕಸಕ್ಕೆ 15 ಸಾವಿರ ಕೋಟಿ ನಷ್ಟವಾಗಿದೆ. ಹೀಗಾಗಿ ಕೂಡಲೇ ವಿದ್ಯುತ್ ಖರೀದಿಯನ್ನು ನಿಲ್ಲಿಸಬೇಕು. ನಮ್ಮಲ್ಲೇ ಲಭ್ಯವಿರುವ ವಿದ್ಯುತ್ ಅನ್ನು ಬಳಸಿಕೊಳ್ಳಿ ಎಂದು ಎಂ.ಲಕ್ಷ್ಮಣ್ ಸಲಹೆ ನೀಡಿದರು.
ಮೋದಿ ವೋಟಿಂಗ್ ಮಶೀನ್ಗಳಾದ ಇವಿಎಂಗಳು: ಕಾಂಗ್ರೆಸ್ ವಕ್ತಾರ ಲಕ್ಷ್ಮಣ್ ವ್ಯಂಗ್ಯ
ನಮ್ಮ ರಾಜ್ಯಕ್ಕೆ ಅಗತ್ಯಕ್ಕಿಂತ ಹೆಚ್ಚಿನ ಹಣವನ್ನು ತೆತ್ತು ವಿದ್ಯುತ್ ಖರೀದಿಸುವ ಅಗತ್ಯವಾದರೂ ಏನಿತ್ತು ? ಕಮಿಷನ್ಗಾಗಿ ರಾಜ್ಯವನ್ನೇ ಮಾರಿಕೊಳ್ಳುತ್ತಿರುವುದು ಸರಿಯಲ್ಲ. ಸರ್ಕಾರ ಈ ಬಗ್ಗೆ ಗಮನ ಹರಿಸಿ ಕೂಡಲೇ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು.
ಕೊರೊನಾಗೆ ಬಲಿಯಾದ ವಾರಿಯರ್ಸ್ ಕುಟುಂಬಕ್ಕೆ ಸೂಕ್ತ ಪರಿಹಾರ ಸಿಗುತ್ತಿಲ್ಲ: ಕಾಂಗ್ರೆಸ್ ಆರೋಪ
ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸದ್ಯ ರಾಜ್ಯದಲ್ಲಿ ಬೇಡಿಕೆಗಿಂತ ಹೆಚ್ಚಿನ ವಿದ್ಯುತ್ ಲಭ್ಯವಿದೆ. ಆದರೂ ಬೇರೆಡೆಯಿಂದ ವಿದ್ಯುತ್ ಕಮಿಷನ್ ಆಸೆಗೆ ಖರೀದಿ ಮಾಡಲಾಗುತ್ತಿದೆ. ಕಳೆದ 15 ತಿಂಗಳಿನಿಂದಲೂ ಸರ್ಕಾರ ಈ ರೀತಿ ವಿದ್ಯುತ್ ಖರೀದಿ ಮಾಡುತ್ತಿದೆ ಎಂದರು.
ಇದರಿಂದ ರಾಜ್ಯ ಸರ್ಕಾರದ ಬೊಕ್ಕಸಕ್ಕೆ 15 ಸಾವಿರ ಕೋಟಿ ನಷ್ಟವಾಗಿದೆ. ಹೀಗಾಗಿ ಕೂಡಲೇ ವಿದ್ಯುತ್ ಖರೀದಿಯನ್ನು ನಿಲ್ಲಿಸಬೇಕು. ನಮ್ಮಲ್ಲೇ ಲಭ್ಯವಿರುವ ವಿದ್ಯುತ್ ಅನ್ನು ಬಳಸಿಕೊಳ್ಳಿ ಎಂದು ಎಂ.ಲಕ್ಷ್ಮಣ್ ಸಲಹೆ ನೀಡಿದರು.
ಮೋದಿ ವೋಟಿಂಗ್ ಮಶೀನ್ಗಳಾದ ಇವಿಎಂಗಳು: ಕಾಂಗ್ರೆಸ್ ವಕ್ತಾರ ಲಕ್ಷ್ಮಣ್ ವ್ಯಂಗ್ಯ
ನಮ್ಮ ರಾಜ್ಯಕ್ಕೆ ಅಗತ್ಯಕ್ಕಿಂತ ಹೆಚ್ಚಿನ ಹಣವನ್ನು ತೆತ್ತು ವಿದ್ಯುತ್ ಖರೀದಿಸುವ ಅಗತ್ಯವಾದರೂ ಏನಿತ್ತು ? ಕಮಿಷನ್ಗಾಗಿ ರಾಜ್ಯವನ್ನೇ ಮಾರಿಕೊಳ್ಳುತ್ತಿರುವುದು ಸರಿಯಲ್ಲ. ಸರ್ಕಾರ ಈ ಬಗ್ಗೆ ಗಮನ ಹರಿಸಿ ಕೂಡಲೇ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು.
ಕೊರೊನಾಗೆ ಬಲಿಯಾದ ವಾರಿಯರ್ಸ್ ಕುಟುಂಬಕ್ಕೆ ಸೂಕ್ತ ಪರಿಹಾರ ಸಿಗುತ್ತಿಲ್ಲ: ಕಾಂಗ್ರೆಸ್ ಆರೋಪ