ಆ್ಯಪ್ನಗರ

ಟಿಪ್ಪು ಪಠ್ಯವನ್ನು ಮುಂಬರುವ ಶೈಕ್ಷಣಿಕ ವರ್ಷ ಕೈ ಬಿಡಲು ಸಾಧ್ಯವಿಲ್ಲ: ಮೈಸೂರಿನಲ್ಲಿ ಸುರೇಶ್‌ ಕುಮಾರ್‌ ಸ್ಪಷ್ಟನೆ

ಟಿಪ್ಪು ಪಠ್ಯವನ್ನು ಮುಂಬರುವ ಶೈಕ್ಷಣಿಕ ವರ್ಷದಲ್ಲಿ ಕೈಬಿಡಲು ಸಾಧ್ಯವಿಲ್ಲ ಎಂದು ಮೈಸೂರಿನಲ್ಲಿ ಸುರೇಶ್‌ ಕುಮಾರ್‌ ತಿಳಿಸಿದ್ದಾರೆ. ವಿಸ್ತೃತವಾದ ಇನ್ನೊಂದು ಸಮತಿ ಮಾಡಿ ಚರ್ಚೆ ಮಾಡಲಾಗುವುದು. ಈ ಬಾರಿ ಶಾಲೆಯ ಆರಂಭದ ದಿನದಿಂದಲೇ ಪುಸ್ತಕ ಸಮವಸ್ತ್ರ ನೀಡಲಾಗುವುದು ಎಂದೂ ಭರವಸೆ ನೀಡಿದ್ದಾರೆ.

Vijaya Karnataka Web 10 Feb 2020, 12:48 pm
ಮೈಸೂರು: ಟಿಪ್ಪು ಪಠ್ಯವನ್ನು ಮುಂಬರುವ ಶೈಕ್ಷಣಿಕ ವರ್ಷದಲ್ಲಿ ತೆಗೆಯಲು ಸಾಧ್ಯವಿಲ್ಲ ಎಂದು ನಗರದಲ್ಲಿ ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ವಿಸ್ತೃತ ಚರ್ಚೆಯಾಗಬೇಕಿದೆ ಎಂದೂ ಸಚಿವರು ತಿಳಿಸಿದ್ದಾರೆ.
Vijaya Karnataka Web suresh kumar toi


ಪಠ್ಯದಿಂದ ಟಿಪ್ಪು ವಿಷಯ ಕೈ ಬಿಡುವ ವಿಚಾರದ ಬಗ್ಗೆ ವಿಸ್ತೃತ ಚರ್ಚೆಯಾಗಬೇಕಿದೆ. ಈ ಬಗ್ಗೆ ಸಮಿತಿಯವರು ಸಹ ಇದೇ ರೀತಿಯ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ವಿಸ್ತೃತವಾದ ಇನ್ನೊಂದು ಸಮತಿ ಮಾಡಿ ಚರ್ಚೆ ಮಾಡಲಾಗುವುದು. ಈ ಹಿನ್ನೆಲೆಯಲ್ಲಿ ಮುಂಬರುವ ಶೈಕ್ಷಣಿಕ ವರ್ಷದ ಪಠ್ಯದಿಂದ ಕೈ ಬಿಡಲು ಸಾಧ್ಯವಿಲ್ಲ ಎಂದು ಮೈಸೂರಿನಲ್ಲಿ ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ಸ್ಪಷ್ಟನೆ ನೀಡಿದ್ದಾರೆ.

ಅಲ್ಲದೆ, ಈ ಬಾರಿ ಶಾಲೆಯ ಆರಂಭದ ದಿನದಿಂದಲೇ ಪುಸ್ತಕ ಸಮವಸ್ತ್ರ ನೀಡಲಾಗುವುದು ಎಂದೂ ರಾಜ್ಯ ಪ್ರಾಥಮಿಕ, ಪ್ರೌಢ ಶಿಕ್ಷಣ ಸಚಿವ ಸುರೇಶ್‌ ಕುಮಾರ್‌ ಮೈಸೂರಿನಲ್ಲಿ ಭರವಸೆ ನೀಡಿದ್ದಾರೆ.

'ಪಕ್ಕೆಲುಬು' ಶಿಕ್ಷಕನ ಅಮಾನತು ಆದೇಶ ವಾಪಸ್‌ಗೆ ಸಚಿವ ಸುರೇಶ್‌ ಕುಮಾರ್‌ ಮನಸ್ಸು

ಮುಂದಿನ ವರ್ಷವೂ ಟಿಪ್ಪು ಪಠ್ಯ ಮುಂದುವರಿಕೆ: ಪರಿಶೀಲನೆಗೆ ವಿಸ್ತೃತ ಸಮಿತಿ ರಚನೆ

ಮುಂದಿನ ಶೈಕ್ಷಣಿಕ ವರ್ಷಕ್ಕೂ ಟಿಪ್ಪು ಸುಲ್ತಾನ್‌ ಪಠ್ಯ ಮುಂದುವರಿಯುವ ಸಾಧ್ಯತೆ!

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ