ಆ್ಯಪ್ನಗರ

ಹೊಸದಿಲ್ಲಿಯಲ್ಲಿ ನಡೆಯುತ್ತಿರುವ ರೈತರ ಹೋರಾಟ ಬೆಂಬಲಿಸಿ ಅನಿರ್ದಿಷ್ಟಾವಧಿ ಧರಣಿ

ಕೋಡಿಹಳ್ಳಿ ಚಂದ್ರಶೇಖರ್‌ ಯಾವುದೇ ರೈತಸಂಘದ ಅಧಿಕೃತ ರಾಜ್ಯಾಧ್ಯಕ್ಷ ಅಲ್ಲ. ಅವರೇ ಗುಂಪು ಕಟ್ಟಿಕೊಂಡು ಆ ಗುಂಪಿನ ನಾಯಕನಾಗಿದ್ದಾರೆ ಅಷ್ಟೇ. ಹೊಸದಿಲ್ಲಿಯಲ್ಲಿ ರೈತರು ಚಳಿಯಲ್ಲಿ ಬೀದಿಗೆ ಬಂದು ಹೋರಾಟ ಮಾಡುತ್ತಿದ್ದಾರೆ.

Vijaya Karnataka Web 15 Dec 2020, 8:30 pm
ಮೈಸೂರು: ಕೃಷಿ ಕಾಯ್ದೆ ವಿರೋಧಿಸಿ ಹೊಸದಿಲ್ಲಿಯಲ್ಲಿ ನಡೆಯುತ್ತಿರುವ ರೈತರ ಹೋರಾಟ ಬೆಂಬಲಿಸಿ ಬೆಂಗಳೂರಿನ ಮೌರ್ಯ ವೃತ್ತದ ಬಳಿ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ನಡೆಸಲು ತೀರ್ಮಾನಿಸಲಾಗಿದೆ ಎಂದು ರಾಜ್ಯ ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ತಿಳಿಸಿದ್ದಾರೆ.
Vijaya Karnataka Web ರೈತರ ಪ್ರತಿಭಟನೆ
ರೈತರ ಪ್ರತಿಭಟನೆ


ಈ ಬಗ್ಗೆ ಮಾತನಾಡಿದ ಅವರು, ಸದ್ಯ ಹೊಸದಿಲ್ಲಿಯಲ್ಲಿ ಕೊರೆಯುವ ಚಳಿಯ ನಡುವೆಯೇ ರೈತರು ಹೋರಾ ನಡೆಸುತ್ತಿದ್ದಾರೆ. ಅವರ ಹೋರಾಟದ ಫಲವಾಗಿ 14 ಜನರು ಸಾವಿಗೀಡಾಗಿದ್ದಾರೆ. ಆದರೆ ಕೇಂದ್ರ ಸರಕಾರ ಮಾತ್ರ ನಮ್ಮ ಸಮಸ್ಯೆಗೆ ಕಿವಿಗೊಡುತ್ತಿಲ್ಲ ಎಂದು ದೂರಿದರು.

ಈ ನಡುವೆ ರೈತರ ಹೋರಾಟ ತೀವ್ರವಾಗುತ್ತಿದ್ದಂತೆ ತಿದ್ದುಪಡಿ ಮಾಡಲು ಮುಂದಾಗುತ್ತಾರೆ. ಈಗ ದೇಶದ ರೈತರನ್ನು ಖಾಸಗಿ ಕಂಪನಿಗಳಿಗೆ ಮಾರಾಟ ಮಾಡಲು ಮುಂದಾಗಿದ್ದಾರೆ, ಅದಕ್ಕಾಗಿಯೇ ದೇಶದ ರೈತರು ಜಾಗೃತರಾಗಿ ಬೀದಿಗಿಳಿದಿದ್ದಾರೆ ಎಂದರು.

ಇನ್ನು ಕೋಡಿಹಳ್ಳಿ ಚಂದ್ರಶೇಖರ್‌ ಸಾರಿಗೆ ನೌಕರರ ಪರ ಹೋರಾಟ ಮಾಡಲಿ. ಆದರೆ ಅದಕ್ಕೂ ಮುನ್ನ ಅವರ ಹೆಗಲ ಮೇಲಿರುವ ಹಸಿರು ಟವಲ್ ಕೆಳಗೆ ಇಳಿಸಲಿ. ಕೋಡಿಹಳ್ಳಿಗೆ ಸಮಸ್ಯೆಯ ಅರಿವೂ ಇಲ್ಲ. ಅದಕ್ಕೆ ಅವರಿಗೆ ಪರಿಹಾರವೂ ಗೊತ್ತಿಲ್ಲ. ಅವರಿಗೆ ಪ್ರತಿಭಟನೆ ಮಾಡುವುದಷ್ಟೇ ಗೊತ್ತು. ಕೋಡಿಹಳ್ಳಿಯವರೇ ಸುಮ್ಮನೆ ಹಸಿರು ಟವಲ್ ಹಾಕಿಕೊಂಡು ರೈತರಿಗೆ ಅವಮಾನ ಮಾಡಬೇಡಿ ಎಂದರು.

ಕೋಡಿಹಳ್ಳಿ ಚಂದ್ರಶೇಖರ್‌ ಯಾವುದೇ ರೈತಸಂಘದ ಅಧಿಕೃತ ರಾಜ್ಯಾಧ್ಯಕ್ಷ ಅಲ್ಲ. ಅವರೇ ಗುಂಪು ಕಟ್ಟಿಕೊಂಡು ಆ ಗುಂಪಿನ ನಾಯಕನಾಗಿದ್ದಾರೆ ಅಷ್ಟೇ. ಹೊಸದಿಲ್ಲಿಯಲ್ಲಿ ರೈತರು ಚಳಿಯಲ್ಲಿ ಬೀದಿಗೆ ಬಂದು ಹೋರಾಟ ಮಾಡುತ್ತಿದ್ದಾರೆ. ಆದರೆ, ಕೋಡಿಹಳ್ಳಿ ರೈತರ ಹೋರಾಟಕ್ಕೆ ಬೆಂಬಲ‌ ನೀಡುವ ಬದಲು ಸಾರಿಗೆ ಮುಷ್ಕರದ ನೇತೃತ್ವ ವಹಿಸಿದ್ದಾರೆ. ಇದು ಎಷ್ಟು ಸರಿ ಎಂದು ಕುರುಬೂರು ಶಾಂತಕುಮಾರ್ ತಿಳಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ