ಆ್ಯಪ್ನಗರ

ಎಸ್‌ಪಿಜಿ ಭದ್ರತೆ ಮುಂದುವರಿಸದಿದ್ದಲ್ಲಿ ಬೀದಿಗಿಳಿದು ಹೋರಾಟ: ಸಿದ್ದರಾಮಯ್ಯ ಎಚ್ಚರಿಕೆ

ಇದು ಕೇಂದ್ರ ಸರಕಾರದ ದ್ವೇಷ ರಾಜಕಾರಣ ಎಂದು ಕಿಡಿಕಾರಿರುವ ಸಿದ್ದರಾಮಯ್ಯ, “ಭದ್ರತೆ ನೀಡುವುದು ಸರಕಾರದ ಆದ್ಯ ಕರ್ತವ್ಯ. ಭದ್ರತೆ ಹಿಂತೆಗೆದುಕೊಂಡಿರುವುದರಿಂದ ಯಾರಿಗಾದರು ಹೆಚ್ಚು ಕಮ್ಮಿ ಆದಲ್ಲಿ ಕೇಂದ್ರ ಸರಕಾರವೇ ಹೊಣೆ,” ಎಂದು ಗುಡುಗಿದ್ದಾರೆ.

Vijaya Karnataka Web 8 Nov 2019, 8:54 pm

ಮೈಸೂರು: ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಸೇರಿದಂತೆ ಕೆಲವರಿಗೆ ನೀಡಲಾಗಿದ್ದ ಎಸ್‌ಪಿಜಿ ಭದ್ರತೆ ಹಿಂತೆಗೆದುಕೊಂಡಿರುವುದಕ್ಕೆ ವಿಪಕ್ಷ ನಾಯಕ ಸಿದ್ದರಾಮಯ್ಯ ತೀವ್ರ ಆಕ್ಷೇಪ ವ್ಯಕ್ತಪಡಿಸಿದರು.
Vijaya Karnataka Web Siddaramaiah


ಮೈಸೂರಿನ ತಮ್ಮ ನಿವಾಸದಲ್ಲಿ ಕರೆದಿದ್ದ ತುರ್ತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಅವರಿಗೆ ನೀಡಿದ್ದ ಎಸ್‌ಪಿಜಿ ಭದ್ರತೆಯನ್ನು ತಕ್ಷಣ ಮುಂದುವರಿಸಬೇಕು. ತಪ್ಪಿದಲ್ಲಿ ಕಾಂಗ್ರೆಸ್ ಬೀದಿಗಿಳಿದು ಹೋರಾಟ ನಡೆಸಲಿದೆ,” ಎಂದು ಎಚ್ಚರಿಕೆ ನೀಡಿದರು.

ಗಾಂಧಿ ಕುಟುಂಬಕ್ಕಿಲ್ಲ ಎಸ್‌ಪಿಜಿ ಭದ್ರತೆ: 'ದ್ವೇಷ ರಾಜಕಾರಣ' ಎಂದು ಕಿಡಿಕಾರಿದ 'ಕೈ' ನಾಯಕರು

ಇದು ಕೇಂದ್ರ ಸರಕಾರದ ದ್ವೇಷ ರಾಜಕಾರಣ ಎಂದು ಕಿಡಿಕಾರಿರುವ ಅವರು, “ಭದ್ರತೆ ನೀಡುವುದು ಸರಕಾರದ ಆದ್ಯ ಕರ್ತವ್ಯ. ಭದ್ರತೆ ಹಿಂತೆಗೆದುಕೊಂಡಿರುವುದರಿಂದ ಯಾರಿಗಾದರು ಹೆಚ್ಚು ಕಮ್ಮಿ ಆದಲ್ಲಿ ಕೇಂದ್ರ ಸರಕಾರವೇ ಹೊಣೆ,” ಎಂದು ಗುಡುಗಿದರು.

ಗಾಂಧಿ ಕುಟುಂಬಕ್ಕಿಲ್ಲ ಇನ್ಮುಂದೆ ಎಸ್‌ಪಿಜಿ ! ಭದ್ರತೆ ಹಿಂಪಡೆಯಲು ಕೇಂದ್ರ ನಿರ್ಧಾರ?

ಶನಿವಾರ ಹೈಕಮಾಂಡ್ ಜೊತೆ ಚರ್ಚಿಸಿ ಹೋರಾಟದ ರೂಪುರೇಷೆ ನಿರ್ಧರಿಸುವುದಾಗಿ ಸಿದ್ದರಾಮಯ್ಯ ಇದೇ ವೇಳೆ ಮಾಹಿತಿ ನೀಡಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ