ಆ್ಯಪ್ನಗರ

ಮೈಸೂರು: ಮಹಾನಗರ ಪಾಲಿಕೆಯಲ್ಲಿ ಮಧ್ಯವರ್ತಿಗಳಿಗೆ ಬ್ರೇಕ್‌

​​10 ನಿಮಿಷ ತಡವಾದರೂ ಅರ್ಧ ದಿನ ಸಂಬಳ ಕಟ್‌ ಮಾಡಲು ಆದೇಶಿಸಿದ್ದು, ಆಡಳಿತಕ್ಕೆ ಮೇಜರ್‌ ಸರ್ಜರಿ ಮಾಡಿದ್ದಾರೆ. ಇದರಿಂದ ವಿನಾ ಕಾರಣ ಕೆಲಸ ತಡವಾಗಿ ಮಧ್ಯವರ್ತಿಗಳ ಮೊರೆ ಹೋಗಬೇಕಿದ್ದ ಸಾರ್ವಜನಿಕರು ನೆಮ್ಮದಿಯ ನಿಟ್ಟುಸಿರು ಬಿಡುವಂತೆ ಆಗಿದೆ.

Vijaya Karnataka Web 15 Mar 2021, 5:19 pm
ಹರೀಶ ಎಲ್‌. ತಲಕಾಡು, ಮೈಸೂರು
Vijaya Karnataka Web ಮೈಸೂರು ಪಾಲಿಕೆ
ಮೈಸೂರು ಪಾಲಿಕೆ


ಮೈಸೂರು ನಗರ ಪಾಲಿಕೆ ಆಯುಕ್ತರಾಗಿ ಶಿಲ್ಪಾನಾಗ್‌ ಅವರು ಅಧಿಕಾರ ಸ್ವೀಕರಿಸಿದ ಬೆನ್ನಲ್ಲೇ ಪಾಲಿಕೆಯ ಆಡಳಿತ ವೈಖರಿಗೆ ಚುರುಕು ನೀಡಿದ್ದಾರೆ. ಬಯೋಮೆಟ್ರಿಕ್‌ ವ್ಯವಸ್ಥೆಯಿದ್ದರೂ ಬೇಕಾಬಿಟ್ಟಿಯಾಗಿ ಕಚೇರಿಗೆ ಹಾಜರಾಗುವ ಮೂಲಕ ನಿರ್ಲಕ್ಷ್ಯ ವಹಿಸಿದ್ದ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಶಿಸ್ತಿನ ಪಾಠ ಮಾಡಿದ್ದು, ಖಡಕ್‌ ಎಚ್ಚರಿಕೆ ನೀಡಿದ್ದಾರೆ.

10 ನಿಮಿಷ ತಡವಾದರೂ ಅರ್ಧ ದಿನ ಸಂಬಳ ಕಟ್‌ ಮಾಡಲು ಆದೇಶಿಸಿದ್ದು, ಆಡಳಿತಕ್ಕೆ ಮೇಜರ್‌ ಸರ್ಜರಿ ಮಾಡಿದ್ದಾರೆ. ಇದರಿಂದ ವಿನಾ ಕಾರಣ ಕೆಲಸ ತಡವಾಗಿ ಮಧ್ಯವರ್ತಿಗಳ ಮೊರೆ ಹೋಗಬೇಕಿದ್ದ ಸಾರ್ವಜನಿಕರು ನೆಮ್ಮದಿಯ ನಿಟ್ಟುಸಿರು ಬಿಡುವಂತೆ ಆಗಿದೆ. ಬಯೋಮೆಟ್ರಿಕ್‌ ವ್ಯವಸ್ಥೆ ಇದ್ದರೂ ಬಹುತೇಕ ಅಧಿಕಾರಿಗಳು ಮತ್ತು ಸಿಬ್ಬಂದಿ ಹೊರಗಿನ ಕೆಲಸದ ನೆಪ ಹೇಳಿ ತಮಗಿಷ್ಟ ಬಂದ ಸಮಯದಲ್ಲಿ ಕಚೇರಿಗೆ ಬರುತ್ತಿದ್ದರು. ಬಯೋಮೆಟ್ರಿಕ್‌ ಪರಿಶೀಲನೆ ನಡೆಯುತ್ತಿರಲಿಲ್ಲ.

ಹೀಗಾಗಿ ಸಾರ್ವಜನಿಕರು ತಮ್ಮ ಕೆಲಸಕ್ಕಾಗಿ ಗಂಟೆಗಟ್ಟಲ್ಲೇ ಕಾಯಬೇಕಾದಂತಹ ಪರಿಸ್ಥಿತಿ ನಿರ್ಮಾಣವಾಗಿತ್ತು. ಪಾಲಿಕೆಯ ಆಡಳಿತದಲ್ಲಿ ಆಗುತ್ತಿದ್ದ ಈ ಗಂಭೀರ ಲೋಪವನ್ನು ಗಮನಿಸಿದ ಪಾಲಿಕೆ ಆಯುಕ್ತರು, ಪ್ರತಿ ದಿನ ಬೆಳಗ್ಗೆ 10 ರಿಂದ 10.10ರೊಳಗೆ ಬಯೋಮೆಟ್ರಿಕ್‌ ಮೂಲಕ ಹಾಜರಾತಿ ನೀಡಬೇಕು. ಇಲ್ಲದಿದ್ದರೆ ಅವರ ಅರ್ಧ ಸಂಬಳ ಕಡಿತಗೊಳಿಸಬೇಕು ಎಂದು ವೇತನ ಬಟವಾಡೆ ಅಧಿಕಾರಿಗಳಿಗೆ ತಿಳಿಸಿದ್ದಾರೆ.

ಮಧ್ಯವರ್ತಿಗಳಿಗೆ ನಿರ್ಬಂಧ

ಪಾಲಿಕೆಯ ಆಡಳಿತದಲ್ಲಿ ಅನಗತ್ಯವಾಗಿ ಮೂಗು ತೂರಿಸುತ್ತಿದ್ದ ಮಧ್ಯವರ್ತಿಗಳ ಕಾರ್ಯಭಾರಕ್ಕೆ ನಿರ್ಬಂಧ ವಿಧಿಸಲಾಗಿದೆ. ಪಾಲಿಕೆ ಅಂಗಳದಲ್ಲಿ ಅನಧಿಕೃತ ವ್ಯಕ್ತಿಗಳು ಸಂಚರಿಸದಂತೆ ಆಯುಕ್ತರು ಸೂಚನೆ ನೀಡಿದ್ದಾರೆ. ಪಾಲಿಕೆಯ ವಲಯ ಕಚೇರಿಗಳಲ್ಲಿಮಧ್ಯವರ್ತಿಗಳು ಖಾತಾ ನೋಂದಣಿ, ಖಾತಾ ವರ್ಗಾವಣೆ ಹಾಗೂ ಕಂದಾಯ ನಿಗದಿಪಡಿಸುವಲ್ಲಿ ಪಾತ್ರ ವಹಿಸುತ್ತಿದ್ದರು.

ಕಂದಾಯ ಶಾಖೆಯ ಅಧಿಕಾರಿ, ಸಿಬ್ಬಂದಿಯೊಂದಿಗೆ ಅನಧಿಕೃತವಾಗಿ ಸಹಾಯಕರಾಗಿ ಕೆಲಸ ಮಾಡುವ ಮೂಲಕ ಭ್ರಷ್ಟಾಚಾರ ನಡೆಸುತ್ತಿದ್ದರು. ಇದರಿಂದ ಪಾಲಿಕೆಗೆ ಬರಬೇಕಾಗಿದ್ದ ಆದಾಯದಲ್ಲಿ ಖೋತಾ ಆಗಿ ನಷ್ಟವುಂಟಾಗುತ್ತಿತ್ತು. ಈ ಬಗ್ಗೆ ಸಾರ್ವಜನಿಕ ವಲಯದಿಂದ ವ್ಯಾಪಕವಾಗಿ ದೂರುಗಳು ಕೇಳಿ ಬಂದ ಹಿನ್ನೆಲೆಯಲ್ಲಿಪಾಲಿಕೆ ಆಯುಕ್ತರು ಈ ಕ್ರಮ ಕೈಗೊಂಡಿದ್ದಾರೆ. ಸಾರ್ವಜನಿಕರಿಗೆ ಆಗುವ ತೊಂದರೆ ತಪ್ಪಿಸಲು ಪಾಲಿಕೆಯಲ್ಲಿ ಖಾತಾ ನೋಂದಣಿ, ಖಾತೆ ವರ್ಗಾವಣೆ ಮತ್ತು ಆನ್‌ಲೈನ್‌ ಮೂಲಕ ತೆರಿಗೆ ಪಾವತಿ ಬಗ್ಗೆ ಅವಶ್ಯಕವಿರುವ ಮಾಹಿತಿಯನ್ನು ಸೂಚನಾ ಫಲಕಗಳಲ್ಲಿ ಪ್ರಕಟಿಸುವಂತೆ ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ