ಆ್ಯಪ್ನಗರ

ಅಪ್ರಾಪ್ತನ ಜಾಲಿಡ್ರೈವ್‌ಗೆ ವಿದ್ಯಾರ್ಥಿನಿ ಬಲಿ

ಅಪ್ರಾಪ್ತ ಯುವಕನ ಜಾಲಿ ಡ್ರೈವ್‌ಗೆ ವಿದ್ಯಾರ್ಥಿನಿ ಬಲಿಯಾಗಿದ್ದಾಳೆ. ಮೋಜು-ಮಸ್ತಿಯಿಂದ ಅತಿಯಾದ ವೇಗ ಮತ್ತು ನಿರ್ಲಕ್ಷ್ಯತನದಿಂದ ಚಾಲನೆ ಮಾಡಿದ ಪರಿಣಾಮ ಸರಣಿ ಅಪಘಾತ ನಡೆದಿದ್ದು, ಒಬ್ಬ ವಿದ್ಯಾರ್ಥಿನಿ ಮೃತಪಟ್ಟು, ಮತ್ತೊಬ್ಬ ವಿದ್ಯಾರ್ಥಿನಿ ಗಾಯಗೊಂಡಿದ್ದಾರೆ. ಅಲ್ಲದೆ ದ್ವಿಚಕ್ರ ವಾಹನ ಸೇರಿದಂತೆ ಮುಡಾ ಕಾರ್ಯದರ್ಶಿ ಅವರ ಜೀಪ್‌ ಕೂಡ ಜಖಂಗೊಂಡಿದೆ.

Vijaya Karnataka 14 Aug 2019, 5:00 am
ಯುವಕನಿಗೆ ಹಿಗ್ಗಾಮುಗ್ಗಾ ಥಳಿಸಿ ಪೊಲೀಸರಿಗೊಪ್ಪಿಸಿದ ಸಾರ್ವಜನಿಕರು
Vijaya Karnataka Web student death to premature jolly drive
ಅಪ್ರಾಪ್ತನ ಜಾಲಿಡ್ರೈವ್‌ಗೆ ವಿದ್ಯಾರ್ಥಿನಿ ಬಲಿ

ಗೆಳೆಯರೊಂದಿಗೆ ಪ್ರವಾಸಕ್ಕೆ ತೆರಳಲು ಕಾರು ಬಾಡಿಗೆ ಪಡೆದಿದ್ದ ಯುವಕ
ಕಾರು ಬಾಡಿಗೆಗೆ ನೀಡಿದ್ದ ವ್ಯಕ್ತಿ ಸೆರೆ

ಮೈಸೂರು:
ಅಪ್ರಾಪ್ತ ಯುವಕನ ಜಾಲಿ ಡ್ರೈವ್‌ಗೆ ವಿದ್ಯಾರ್ಥಿನಿ ಬಲಿಯಾಗಿದ್ದಾಳೆ. ಮೋಜು-ಮಸ್ತಿಯಿಂದ ಅತಿಯಾದ ವೇಗ ಮತ್ತು ನಿರ್ಲಕ್ಷ್ಯತನದಿಂದ ಚಾಲನೆ ಮಾಡಿದ ಪರಿಣಾಮ ಸರಣಿ ಅಪಘಾತ ನಡೆದಿದ್ದು, ಒಬ್ಬ ವಿದ್ಯಾರ್ಥಿನಿ ಮೃತಪಟ್ಟು, ಮತ್ತೊಬ್ಬ ವಿದ್ಯಾರ್ಥಿನಿ ಗಾಯಗೊಂಡಿದ್ದಾರೆ. ಅಲ್ಲದೆ ದ್ವಿಚಕ್ರ ವಾಹನ ಸೇರಿದಂತೆ ಮುಡಾ ಕಾರ್ಯದರ್ಶಿ ಅವರ ಜೀಪ್‌ ಕೂಡ ಜಖಂಗೊಂಡಿದೆ.

ಮೈಸೂರು ನಗರದ ಜೆಎಲ್‌ಬಿ ರಸ್ತೆಯಲ್ಲಿನ ಮುಡಾ ಜಂಕ್ಷನ್‌ನಲ್ಲಿ ಮಂಗಳವಾರ ಸುಮಾರು ಬೆಳಗ್ಗೆ 9.30ರಲ್ಲಿ ಈ ಘಟನೆ ನಡೆದಿದೆ. ಸರಣಿ ಅಪಘಾತ ನಡೆಸಿದ ಅಪ್ರಾಪ್ತ ಯುವಕನನ್ನು ಸಾರ್ವಜನಿಕರೇ ಹಿಡಿದು ಹಿಗ್ಗಾಮುಗ್ಗಾ ಥಳಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ.

ಗುಂಡ್ಲುಪೇಟೆಯ ನಿವಾಸಿ, ಮಹಾರಾಣಿ ಪಿಯು ಕಾಲೇಜಿನ ವಿದ್ಯಾರ್ಥಿನಿ ಅಶ್ವಿನಿ(18) ಮೃತರು. ಸಹಪಾಠಿ ಪ್ರೇಮಾ(18) ಗಾಯಗೊಂಡಿದ್ದು, ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಆಗಿದ್ದಿಷ್ಟು: 17 ವರ್ಷದ ಅಪ್ರಾಪ್ತ ಯುವಕ, ಸ್ನೇಹಿತರೊಂದಿಗೆ ಪ್ರವಾಸಕ್ಕೆ ತೆರಳಲು ಗಾಯತ್ರಿಪುರಂ ನಿವಾಸಿ ಮಂಜುನಾಥ್‌ ಅವರಿಂದ ಕಾರೊಂದನ್ನು ಬಾಡಿಗೆ ಪಡೆದು ಯುವರಾಜ ಕಾಲೇಜಿನ ಬಳಿ ಬೆಳಗ್ಗೆ ಬಂದಿದ್ದಾನೆ. ತನ್ನ ಸ್ನೇಹಿತನನ್ನು ಕಾರಿನಲ್ಲಿ ಹತ್ತಿಸಿಕೊಂಡು ಕೌಟಿಲ್ಯ ವೃತ್ತದ ಕಡೆಯಿಂದ ಮುಡಾ ಜಂಕ್ಷನ್‌ ಕಡೆ ಬರುವಾಗ ರಾಮಸ್ವಾಮಿ ವೃತ್ತದ ಕಡೆಯಿಂದ ಮಹಾರಾಣಿ ಕಾಲೇಜಿನ ಕಡೆ ಬರುತ್ತಿದ್ದ ಇಬ್ಬರು ವಿದ್ಯಾರ್ಥಿನಿಯರಿಗೆ ಡಿಕ್ಕಿ ಹೊಡೆದಿದ್ದಾನೆ. ಕಾರಿನ ಚಕ್ರದ ಕೆಳಗೆ ಬಿದ್ದ ವಿದ್ಯಾರ್ಥಿನಿ ಅಶ್ವಿನಿಯ ಮೇಲೆ ಹರಿದಿದೆ. ಸಹಪಾಠಿ ಪ್ರೇಮಾ ಕೂಡ ಕೆಳಗೆ ಬಿದ್ದು ಗಾಯಗೊಂಡಿದ್ದಾರೆ. ಅಪಘಾತದಿಂದ ಗಾಬರಿಗೊಂಡ ಅಪ್ರಾಪ್ತ ಯುವಕ, ಕಾರನ್ನು ನಿಲ್ಲಿಸದೇ ಜೆಎಲ್‌ಬಿ ರಸ್ತೆಯಲ್ಲಿ ಮುಂದೆ ಸಾಗಿದ್ದು ಇನ್ಸ್‌ಟಿಟ್ಯೂಟ್‌ ಆಫ್‌ ಎಂಜಿನಿಯರ್ಸ್‌ ರಸ್ತೆಯಲ್ಲಿ ನಿಂತಿದ್ದ ದ್ವಿಚಕ್ರ ವಾಹನ ಮತ್ತು ಮುಡಾ ಕಾರ್ಯದರ್ಶಿ ಅವರ ಜೀಪ್‌ಗೆ ಸಹ ಡಿಕ್ಕಿ ಹೊಡೆದಿದೆ. ಬಳಿಕ ಕಾರಿನ ಚಕ್ರ ಪಂಕ್ಚರ್‌ ಆಗಿದ್ದು ಕಾರು ರಸ್ತೆಯಲ್ಲೇ ಕೆಟ್ಟು ನಿಂತಿದೆ.

ತಕ್ಷಣ ಸ್ಥಳದಲ್ಲಿದ್ದ ಸಾರ್ವಜನಿಕರು ಬೆನ್ನತ್ತಿ ಅಪ್ರಾಪ್ತ ಯುವಕನನ್ನು ಹಿಗ್ಗಾಮುಗ್ಗಾ ಥಳಿಸಿದರಲ್ಲದೆ ಕಾರನ್ನು ಜಖಂಗೊಳಿಸಿದರು. ಬಳಿಕ ಅಪ್ರಾಪ್ತ ಯುವಕನನ್ನು ಪೊಲೀಸರಿಗೆ ಒಪ್ಪಿಸಿದರು. ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಕೆ.ಆರ್‌.ಸಂಚಾರ ಠಾಣೆ ಇನ್ಸ್‌ಪೆಕ್ಟರ್‌ ಜಗದೀಶ್‌ ಮತ್ತು ಸಿಬ್ಬಂದಿ ಅಪ್ರಾಪ್ತ ಯುವಕನನ್ನು ವಶಕ್ಕೆ ಪಡೆದರು.

ಅಪಘಾತದಿಂದ ಗಾಯಗೊಂಡಿದ್ದ ಇಬ್ಬರು ವಿದ್ಯಾರ್ಥಿನಿಯರನ್ನು ತಕ್ಷಣವೇ ಖಾಸಗಿ ಆಸ್ಪತ್ರೆಗೆ ದಾಖಲಿಸಿತಾದರೂ ಚಿಕಿತ್ಸೆ ಫಲಕಾರಿಯಾಗದೆ ವಿದ್ಯಾರ್ಥಿನಿ ಅಶ್ವಿನಿ ಸಂಜೆ ಮೃತಪಟ್ಟಿದ್ದಾರೆ. ಈ ಸಂಬಂಧ ಅಪ್ರಾಪ್ತ ಯುವಕ ಮತ್ತು ಕಾರನ್ನು ಬಾಡಿಗೆಗೆ ನೀಡಿದ್ದ ಮಂಜುನಾಥ್‌ನನ್ನು ಬಂಧಿಸಿರುವ ಪೊಲೀಸರು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಆರೋಪಿಗಳ ವಿರುದ್ದ ಐಪಿಸಿ ಕಲಂ 279, (304)ಎ, (ಅತಿಯಾದ ವೇಗ ಮತ್ತು ನಿರ್ಲಕ್ಷ್ಯದ ಚಾಲನೆ) ಮೋಟಾರು ವಾಹನ ಕಾಯಿದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಕೈಗೊಂಡಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ