ಆ್ಯಪ್ನಗರ

ಶ್ರೀಕಂಠೇಶ್ವರನ ದರ್ಶನ ಪಡೆದ ಸುಧಾಮೂರ್ತಿ

ದಕ್ಷಿಣ ಕಾಶಿ ನಂಜನಗೂಡಿನ ಶ್ರೀಕಂಠೇಶ್ವರಸ್ವಾಮಿ ದೇವಾಲಯಕ್ಕೆ ದಸರಾ ಉದ್ಘಾಟಕರಾದ ಇನ್ಫೋಸಿಸ್‌ ಪ್ರತಿಷ್ಠಾನದ ಮುಖ್ಯಸ್ಥೆ ಡಾ.ಸುಧಾಮೂರ್ತಿ ಶುಕ್ರವಾರ ಸಂಜೆ ಭೇಟಿ ನೀಡಿ ದೇವರ ದರ್ಶನ ಪಡೆದರು.

Vijaya Karnataka 13 Oct 2018, 8:57 am
ನಂಜನಗೂಡು: ದಕ್ಷಿಣ ಕಾಶಿ ನಂಜನಗೂಡಿನ ಶ್ರೀಕಂಠೇಶ್ವರಸ್ವಾಮಿ ದೇವಾಲಯಕ್ಕೆ ದಸರಾ ಉದ್ಘಾಟಕರಾದ ಇನ್ಫೋಸಿಸ್‌ ಪ್ರತಿಷ್ಠಾನದ ಮುಖ್ಯಸ್ಥೆ ಡಾ.ಸುಧಾಮೂರ್ತಿ ಶುಕ್ರವಾರ ಸಂಜೆ ಭೇಟಿ ನೀಡಿ ದೇವರ ದರ್ಶನ ಪಡೆದರು.
Vijaya Karnataka Web sudha murty


ಈ ವೇಳೆ ತಹಸೀಲ್ದಾರ್‌ ದಯಾನಂದ್‌ ಹಾಗೂ ದೇವಾಲಯದ ಕಾರ‍್ಯನಿರ್ವಹಣಾಧಿಕಾರಿ ಕುಮಾರಸ್ವಾಮಿ ಸ್ಥಳದಲ್ಲಿ ಹಾಜರಿದ್ದು ಬರಮಾಡಿಕೊಂಡರು. ಬಳಿಕ ಶ್ರೀಕಂಠೇಶ್ವರಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿದ ಅವರು ನಂತರ ಪಾರ್ವತಮ್ಮನವರ ದರ್ಶನ ಪಡೆದುಕೊಂಡರು. ಈ ವೇಳೆ ದೇವಾಲಯದಲ್ಲಿ ಜರುಗುವ ಧಾರ್ಮಿಕ ಪೂಜಾ ಕಾರ‍್ಯಗಳ ಕುರಿತು ಅರ್ಚಕರಿಂದ ಮಾಹಿತಿ ಪಡೆದರು.

ಬಳಿಕ ಮಾತನಾಡಿ ಅವರು, ''ಮೈಸೂರು ದಸರಾ ಉದ್ಘಾಟನೆಗೆ ಆಗಮಿಸಿದ್ದ ನಾನು ಸ್ಥಳೀಯ ಪುಣ್ಯಕ್ಷೇತ್ರಗಳ ವೀಕ್ಷ ಣೆಗೆ ಮುಂದಾಗಿದ್ದು, ನಿತ್ಯ 6 ಬಾರಿ ಶಿವನಿಗೆ ಅಭಿಷೇಕ ಜರುಗುವ ನಂಜನಗೂಡಿನ ಶಿವನ ದರ್ಶನ ಪಡೆದ ಪುಣ್ಯ ಲಭ್ಯವಾಗಿರುವುದು ಸಂತಸ ತಂದಿದೆ,'' ಎಂದು ತಿಳಿಸಿದರು.

ದೇವಾಲಯದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪುಟ್ಟನಿಂಗ ಶೆಟ್ಟಿ, ದೇವಾಲಯದ ಆಗಮಿಕ ನಾಗಚಂದ್ರ ದೀಕ್ಷಿತ್‌ ಮತ್ತಿತರರು ಹಾಜರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ