ಹುಣಸೂರು (ಮೈಸೂರು): ಒಂದೂವರೆ ತಿಂಗಳ ಹಿಂದಷ್ಟೆ ಮದುವೆಯಾಗಿದ್ದ ಗೃಹಿಣಿ ಆತ್ಮಹತ್ಯೆ ಮಾಡಿಕೊಂಡಿರುವ ಅನುಮಾನಸ್ಪದ ಘಟನೆ ತಾಲೂಕಿನ ಈರನದಾಸಿ ಕೊಪ್ಪಲು ಗ್ರಾಮದಲ್ಲಿ ನಡೆದಿದೆ. ಈರನದಾಸಿ ಕೊಪ್ಪಲು ಗ್ರಾಮದ ಮಹೇಶ್ ಎಂಬವರ ಪತ್ನಿ ಚಂದನಾ (19) ಮೃತ ಗೃಹಿಣಿ. ಮೃತ ಚಂದನಾ ಮತ್ತು ಪತಿ ಮಹೇಶ್ ಎದುರು ಬದುರು ಮನೆಯವರಾಗಿದ್ದು, ಪರಸ್ಪರ ಪ್ರೀತಿಸಿ ಮದುವೆಯಾಗಿದ್ದರು. ವಿವಾಹವಾದ ತಿಂಗಳಿನಿಂದಲೇ ಪತಿ ಮಹೇಶ ವರದಕ್ಷಿಣೆ ತರುವಂತೆ ಪೀಡಿಸುತ್ತಿದ್ದ. ಅಲ್ಲದೆ ಆಕೆಯ ಶೀಲದ ಬಗ್ಗೆಯೂ ಶಂಕೆ ವ್ಯಕ್ತಪಡಿಸಿ ಆಗಾಗ್ಗೆ ಗಲಾಟೆ ಮಾಡುತ್ತಿದ್ದ ಎನ್ನಲಾಗಿದೆ. ಈ ಕಾರಣ ಅನೇಕ ಬಾರಿ ಆತನಿಗೆ ತಿಳಿವಳಿಕೆ ನೀಡಿದ್ದರೂ ಪ್ರಯೋಜನವಾಗಿರಲಿಲ್ಲ ಎಂದು ಕುಟುಂಬದವರು ದೂರಿದ್ದಾರೆ.
ಮೃತ ಚಂದನಾರನ್ನು ಗಂಡನ ಮನೆಯವರೇ ಕೊಲೆ ಮಾಡಿ ನಂತರ ನೇಣು ಬಿಗಿದು ಆತ್ಮಹತ್ಯೆ ಎಂದು ಬಿಂಬಿಸುತ್ತಿದ್ದಾರೆ ಎಂದು ಚಂದನಾ ಹೆತ್ತವರು ಆರೋಪಿಸಿದ್ದಾರೆ. ಇದು ವ್ಯವಸ್ಥಿತ ಕೊಲೆಯಾಗಿದೆ ಎಂದು ಚಂದನಾ ಸಹೋದರ ಚೆಲುವರಾಜು ದೂರು ನೀಡಿದ್ದಾರೆ. ಈ ಸಂಬಂಧ ತನಿಖೆ ನಡೆಸುತ್ತಿರೋದಾಗಿ ಬಿಳಿಕೆರೆ ಠಾಣೆ ಎಸ್ಐ ಜಯಪ್ರಕಾಶ್ ತಿಳಿಸಿದ್ದಾರೆ.
ರಾಯಚೂರಲ್ಲಿ ಪ್ರೇಮ ವಿವಾಹದ ದ್ವೇಷಕ್ಕೆ ಒಂದೇ ಕುಟುಂಬದ ನಾಲ್ವರು ಕೊಲೆ!
ಮೈಸೂರಿನ ಕೆ.ಆರ್. ಆಸ್ಪತ್ರೆಯ ಶವಾಗಾರದಲ್ಲಿ ತಾಲೂಕು ಕಾರ್ಯನಿರ್ವಾಹಕ ದಂಡಾಧಿಕಾರಿ ಬಸವರಾಜ್ ಅವರು ಶವ ಪಂಚನಾಮೆ ನಡೆಸಿದ ನಂತರ ಮರಣೋತ್ತರ ಪರೀಕ್ಷೆ ನಡೆಸಿ ವಾರಸುದಾರರಿಗೆ ಒಪ್ಪಿಸಿದರು.
ಬರೋಬ್ಬರಿ 38 ವರ್ಷದ ಬಳಿಕ ಕೊಲೆ ಆರೋಪಿಯನ್ನು ಬಂಧಿಸಿದ ಪೊಲೀಸರು..!
ಪ್ರಕರಣದ ತನಿಖೆಯನ್ನು ಡಿವೈಎಸ್ಪಿ ಸುಂದರ್ರಾಜ್ ನಡೆಸುತ್ತಿದ್ದು, ಅಡಿಷನಲ್ ಎಸ್.ಪಿ. ಶಿವಕುಮಾರ್, ವೃತ್ತ ನಿರೀಕ್ಷಕ ಪೂವಯ್ಯ ಭೇಟಿ ನೀಡಿದ್ದರು. ಆರೋಪಿ ಮಹೇಶ್ನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಮಂಗಳೂರಿನಲ್ಲಿ ಗ್ರಾಮ ಪಂಚಾಯತ್ ಸದಸ್ಯನ ಕೊಲೆ..!
ಮೃತ ಚಂದನಾರನ್ನು ಗಂಡನ ಮನೆಯವರೇ ಕೊಲೆ ಮಾಡಿ ನಂತರ ನೇಣು ಬಿಗಿದು ಆತ್ಮಹತ್ಯೆ ಎಂದು ಬಿಂಬಿಸುತ್ತಿದ್ದಾರೆ ಎಂದು ಚಂದನಾ ಹೆತ್ತವರು ಆರೋಪಿಸಿದ್ದಾರೆ. ಇದು ವ್ಯವಸ್ಥಿತ ಕೊಲೆಯಾಗಿದೆ ಎಂದು ಚಂದನಾ ಸಹೋದರ ಚೆಲುವರಾಜು ದೂರು ನೀಡಿದ್ದಾರೆ. ಈ ಸಂಬಂಧ ತನಿಖೆ ನಡೆಸುತ್ತಿರೋದಾಗಿ ಬಿಳಿಕೆರೆ ಠಾಣೆ ಎಸ್ಐ ಜಯಪ್ರಕಾಶ್ ತಿಳಿಸಿದ್ದಾರೆ.
ರಾಯಚೂರಲ್ಲಿ ಪ್ರೇಮ ವಿವಾಹದ ದ್ವೇಷಕ್ಕೆ ಒಂದೇ ಕುಟುಂಬದ ನಾಲ್ವರು ಕೊಲೆ!
ಮೈಸೂರಿನ ಕೆ.ಆರ್. ಆಸ್ಪತ್ರೆಯ ಶವಾಗಾರದಲ್ಲಿ ತಾಲೂಕು ಕಾರ್ಯನಿರ್ವಾಹಕ ದಂಡಾಧಿಕಾರಿ ಬಸವರಾಜ್ ಅವರು ಶವ ಪಂಚನಾಮೆ ನಡೆಸಿದ ನಂತರ ಮರಣೋತ್ತರ ಪರೀಕ್ಷೆ ನಡೆಸಿ ವಾರಸುದಾರರಿಗೆ ಒಪ್ಪಿಸಿದರು.
ಬರೋಬ್ಬರಿ 38 ವರ್ಷದ ಬಳಿಕ ಕೊಲೆ ಆರೋಪಿಯನ್ನು ಬಂಧಿಸಿದ ಪೊಲೀಸರು..!
ಪ್ರಕರಣದ ತನಿಖೆಯನ್ನು ಡಿವೈಎಸ್ಪಿ ಸುಂದರ್ರಾಜ್ ನಡೆಸುತ್ತಿದ್ದು, ಅಡಿಷನಲ್ ಎಸ್.ಪಿ. ಶಿವಕುಮಾರ್, ವೃತ್ತ ನಿರೀಕ್ಷಕ ಪೂವಯ್ಯ ಭೇಟಿ ನೀಡಿದ್ದರು. ಆರೋಪಿ ಮಹೇಶ್ನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಮಂಗಳೂರಿನಲ್ಲಿ ಗ್ರಾಮ ಪಂಚಾಯತ್ ಸದಸ್ಯನ ಕೊಲೆ..!