ಆ್ಯಪ್ನಗರ

ಪಾಲಿಕೆಯಲ್ಲಿ ಸರ್ಜಿಕಲ್‌ ಸ್ಟ್ರೈಕ್‌ ಪ್ರತಿಧ್ವನಿ

ಪಾಕ್‌ ಆಕ್ರಮಿತ ಕಾಶ್ಮೀರದ ಮೇಲೆ ಭಾರತ ನಡೆಸಿದ ವೈಮಾನಿಕ ದಾಳಿ ಮೈಸೂರು ಮಹಾ ನಗರ ಪಾಲಿಕೆಯಲ್ಲಿಯೂ ಪ್ರತಿಧ್ವನಿಸಿದೆ.

Vijaya Karnataka 27 Feb 2019, 5:00 am
ಮೈಸೂರು : ಪಾಕ್‌ ಆಕ್ರಮಿತ ಕಾಶ್ಮೀರದ ಮೇಲೆ ಭಾರತ ನಡೆಸಿದ ವೈಮಾನಿಕ ದಾಳಿ ಮೈಸೂರು ಮಹಾ ನಗರ ಪಾಲಿಕೆಯಲ್ಲಿಯೂ ಪ್ರತಿಧ್ವನಿಸಿದೆ.
Vijaya Karnataka Web surgical strike echo in the corporation
ಪಾಲಿಕೆಯಲ್ಲಿ ಸರ್ಜಿಕಲ್‌ ಸ್ಟ್ರೈಕ್‌ ಪ್ರತಿಧ್ವನಿ


ಪಾಲಿಕೆಯ 2019-20 ನೇ ಸಾಲಿನ ಮುಂಗಡ ಪತ್ರ ಮಂಡನೆ ಕಲಾಪ ಮಂಗಳವಾರ ಮಹಾಪೌರರಾದ ಪುಷ್ಪಲತಾ ಜಗನ್ನಾಥ್‌ ಅವರ ನೇತೃತ್ವದಲ್ಲಿ ನಡೆಯಿತು. ಪಕ್ಷೇತರ ಸದಸ್ಯ ಮ.ವಿ.ರಾಮ್‌ಪ್ರಸಾದ್‌ ರಾಷ್ಟ್ರಧ್ವಜವನ್ನು ಹಿಡಿದು ಕಲಾಪಕ್ಕೆ ಪ್ರವೇಶಿಸಿ ಗಮನ ಸೆಳೆದರು. ಕಲಾಪ ಆರಂಭವಾಗುತ್ತಿದ್ದಂತೆ ಎದ್ದುನಿಂತು ''ಪಾಕ್‌ ಆಕ್ರಮಿತ ಕಾಶ್ಮೀರದಲ್ಲಿ ಭಾರತ ದಾಳಿ ನಡೆಸಿದೆÜ. ಸುಮಾರು 300ಕ್ಕೂ ಹೆಚ್ಚು ಉಗ್ರರನ್ನು ಸದೆ ಬಡಿಯಲಾಗಿದೆ. ಇದು ಎಲ್ಲರೂ ಸಂತಸಪಡುವ ವಿಷಯ'' ಎಂದು ಹೇಳಿ ''ಭಾರತ ಮಾತಾಕಿ..'' ಎಂದು ಜಯಘೋಷ ಹಾಕುತ್ತಿದ್ದಂತೆ ಉಳಿದವರು ''ಜೈ'' ಎಂದು ಧ್ವನಿಗೂಡಿಸಿದರು. ಬಳಿಕ ಇತ್ತೀಚೆಗೆ ನಿಧನರಾದ ಹುತಾತ್ಮರಿಗೆ ಸದಸ್ಯರು ಎರಡು ನಿಮಿಷ ಮೌನ ಆಚರಿಸಿ ಸಂತಾಪ ಸೂಚಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ