ಆ್ಯಪ್ನಗರ

ಹೊಟ್ಟೆ ನೋವು: ಯುವತಿ ಆತ್ಮಹತ್ಯೆ

ತಾಲೂಕಿನ ಚನ್ನಪಟ್ಟಣ ಗ್ರಾಮದಲ್ಲಿ ಯುವತಿ ಹೊಟ್ಟೆನೋವು ತಾಳಲಾರದೆ ಮೈಮೇಲೆ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡರು.

Vijaya Karnataka Web 14 May 2018, 5:00 am
ನಂಜನಗೂಡು : ತಾಲೂಕಿನ ಚನ್ನಪಟ್ಟಣ ಗ್ರಾಮದಲ್ಲಿ ಯುವತಿ ಹೊಟ್ಟೆನೋವು ತಾಳಲಾರದೆ ಮೈಮೇಲೆ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡರು.
Vijaya Karnataka Web suside whomen
ಹೊಟ್ಟೆ ನೋವು: ಯುವತಿ ಆತ್ಮಹತ್ಯೆ


ಗ್ರಾಮದ ಕೂಸಯ್ಯ ಎಂಬುವವರ ಸಾಕು ಮಗಳಾದ ಪವಿತ್ರ(18) ಮೃತರು. ಮೈಸೂರಿನ ಮಹಾರಾಣಿ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡಿ ತೇರ್ಗಡೆಯಾಗಿದ್ದರು.

ಮತದಾನ ದಿನವಾದ ಶನಿವಾರ ಮನೆಯ ಎಲ್ಲಾ ಸದಸ್ಯರು ಮತ ಚಲಾಯಿಸಲು ತೆರಳಿದ್ದ ಸಂದರ್ಭ ಮೈ ಮೇಲೆ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿಕೊಂಡಿದ್ದು. ಮನೆಯವರು ಬಂದು ನೋಡುವಷ್ಟರಲ್ಲಿ ಆಕೆಯ ದೇಹ ಸಂಪೂರ್ಣ ಸುಟ್ಟು ಹೋಗಿತ್ತು. ಕೂಡಲೇ ಆಕೆಯನ್ನು ಆಂಬ್ಯುಲೆನ್ಸ್‌ ಮೂಲಕ ಮೈಸೂರಿನ ಕೆ.ಆರ್‌.ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಭಾನುವಾರ ಮೃತಪಟ್ಟರು.

ಹೊಟ್ಟೆ ನೋವಿನಿಂದ ಈ ರೀತಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಮೃತಳ ಸಾಕು ತಂದೆ ಕೂಸಯ್ಯ ನೀಡಿದ ದೂರಿನ ಮೇರೆಗೆ ಹುಲ್ಲಹಳ್ಳಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪಿಎಸ್‌ಐ ರವಿಶಂಕರ್‌ ಮಹಜರು ನಡೆಸಿದರು. ಮೈಸೂರಿನ ಕೆ.ಆರ್‌.ಆಸ್ಪತ್ರೆಯ ಶವಾಗಾರದಲ್ಲಿ ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸಿ ಕುಟುಂಬದವರಿಗೆ ನೀಡಲಾಯಿತು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ