ಹಕ್ಕಿಗಳ ಅನುಮಾನಸ್ಪದ ಸಾವು, ರಂಗನತಿಟ್ಟು ಸೇರಿದಂತೆ ಹಲವೆಡೆ ಹೈ ಅಲರ್ಟ್
ಕಳೆದೊಂದು ವಾರದ ಹಿಂದೆ ಕುಕ್ಕರಹಳ್ಳಿ ಕೆರೆಯಲ್ಲಿ ಸ್ಪಾಟ್ - ಬಿಲ್ಡ್ ಪೆಲಿಕನ್ ಮೃತಪಟ್ಟಿತ್ತು. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲಾಗಿದೆ ಎಂದು ಮೈಸೂರು ವಿಭಾಗದ ಅರಣ್ಯ ಇಲಾಖೆಯ ಉಪ ಸಂರಕ್ಷಣಾಧಿಕಾರಿ ಕೆ.ಸಿ.ಪ್ರಶಾಂತ್ ಸ್ಪಷ್ಟಪಡಿಸಿದ್ದಾರೆ.
Vijaya Karnataka Web 29 Oct 2019, 7:05 pm
ಮೈಸೂರು,ಅ. 29 : ರಾಜ್ಯದ ಕೆಲ ಪಕ್ಷಿಧಾಮ ಹಾಗೂ ಕೆರೆಗಳಲ್ಲಿ ಹಲವು ಹಕ್ಕಿಗಳು ಅನುಮಾನಾಸ್ಪದವಾಗಿ ಮೃತಪಟ್ಟ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ರಂಗನತಿಟ್ಟು ಪಕ್ಷಿಧಾಮ, ಕೊಕ್ಕರೆ ಬೆಳ್ಳೂರು, ಲಿಂಗಾಂಬುಧಿ ಕೆರೆ ಹಾಗೂ ಕುಕ್ಕರಹಳ್ಳಿ ಕೆರೆಯಲ್ಲಿ ಹೈ ಅಲರ್ಟ್ ಘೋಷಿಸಿದೆ. ಏವಿಯನ್ ಇನ್ ಫ್ಲ್ಯೂಯೆನ್ಜಾ (ಹಕ್ಕಿ ಜ್ವರ) ಅಲರ್ಟ್ ಇದಾಗಿದೆ.
ಕಳೆದೊಂದು ವಾರದ ಹಿಂದೆ ಕುಕ್ಕರಹಳ್ಳಿ ಕೆರೆಯಲ್ಲಿ ಸ್ಪಾಟ್ - ಬಿಲ್ಡ್ ಪೆಲಿಕನ್ ಮೃತಪಟ್ಟಿತ್ತು. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲಾಗಿದೆ ಎಂದು ಮೈಸೂರು ವಿಭಾಗದ ಅರಣ್ಯ ಇಲಾಖೆಯ ಉಪ ಸಂರಕ್ಷಣಾಧಿಕಾರಿ ಕೆ.ಸಿ. ಪ್ರಶಾಂತ್ ಸ್ಪಷ್ಟಪಡಿಸಿದ್ದಾರೆ.
“ಈಗಲೇ ಹಕ್ಕಿಯ ಸಾವಿಗೆ ಹಕ್ಕಿ ಜ್ವರವೇ ಕಾರಣ ಎಂದು ತೀರ್ಮಾನಿಸಲು ಸಾಧ್ಯವಿಲ್ಲ. ರಂಗನತಿಟ್ಟು ಪಕ್ಷಿಧಾಮ, ಕೊಕ್ಕರೆ ಬೆಳ್ಳೂರು ಮತ್ತು ಲಿಂಗಾಂಬುಧಿ ಕೆರೆಗಳ ಆಡಳಿತ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಹಕ್ಕಿಗಳನ್ನು ಸೂಕ್ಷ್ಮವಾಗಿ ಪರಿಶೀಲಿಸಿ, ಅವುಗಳ ಬಾಯಿಯಿಂದ ದ್ರವ ರೂಪದ ವಸ್ತು ಹೊರಬರುತ್ತಿದೆಯೇ ಎಂಬುದರ ತಪಾಸಣೆ ನಡೆಸಲು ಸೂಚಿಸಲಾಗಿದೆ,” ಎಂದು ಅವರು ವಿವರಿಸಿದ್ದಾರೆ.
ಕಳೆದೊಂದು ವಾರದ ಹಿಂದೆ ಕುಕ್ಕರಹಳ್ಳಿ ಕೆರೆಯಲ್ಲಿ ಸ್ಪಾಟ್ - ಬಿಲ್ಡ್ ಪೆಲಿಕನ್ ಮೃತಪಟ್ಟಿತ್ತು. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲಾಗಿದೆ ಎಂದು ಮೈಸೂರು ವಿಭಾಗದ ಅರಣ್ಯ ಇಲಾಖೆಯ ಉಪ ಸಂರಕ್ಷಣಾಧಿಕಾರಿ ಕೆ.ಸಿ. ಪ್ರಶಾಂತ್ ಸ್ಪಷ್ಟಪಡಿಸಿದ್ದಾರೆ.
“ಈಗಲೇ ಹಕ್ಕಿಯ ಸಾವಿಗೆ ಹಕ್ಕಿ ಜ್ವರವೇ ಕಾರಣ ಎಂದು ತೀರ್ಮಾನಿಸಲು ಸಾಧ್ಯವಿಲ್ಲ. ರಂಗನತಿಟ್ಟು ಪಕ್ಷಿಧಾಮ, ಕೊಕ್ಕರೆ ಬೆಳ್ಳೂರು ಮತ್ತು ಲಿಂಗಾಂಬುಧಿ ಕೆರೆಗಳ ಆಡಳಿತ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಹಕ್ಕಿಗಳನ್ನು ಸೂಕ್ಷ್ಮವಾಗಿ ಪರಿಶೀಲಿಸಿ, ಅವುಗಳ ಬಾಯಿಯಿಂದ ದ್ರವ ರೂಪದ ವಸ್ತು ಹೊರಬರುತ್ತಿದೆಯೇ ಎಂಬುದರ ತಪಾಸಣೆ ನಡೆಸಲು ಸೂಚಿಸಲಾಗಿದೆ,” ಎಂದು ಅವರು ವಿವರಿಸಿದ್ದಾರೆ.