ಆ್ಯಪ್ನಗರ

ಸ್ವಾಮೀಜಿಯ ಲೈಂಗಿಕ ದೌರ್ಜನ್ಯ ಪ್ರಕರಣ: ಶಿಷ್ಯಂದಿರ ವಿಚಾರಣೆ

ಪಾಂಡವಪುರದ ಮಹಾಕಾಳಿ ಚಕ್ರೇಶ್ವರಿ ತ್ರಿಧಾಮ ಕ್ಷೇತ್ರದ ಪೀಠಾಧ್ಯಕ್ಷ ವಿದ್ಯಾಹಂಸ ಭಾರತೀ ಸ್ವಾಮೀಜಿ ಚಾತುರ್ಮಾಸದ ಪೂಜೆಯ ವೇಳೆ ಮಹಿಳೆಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ವಾಮೀಜಿಯ ಮೂವರು ಶಿಷ್ಯರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

Vijaya Karnataka 15 Sep 2018, 5:00 am
ಮೈಸೂರು: ಪಾಂಡವಪುರದ ಮಹಾಕಾಳಿ ಚಕ್ರೇಶ್ವರಿ ತ್ರಿಧಾಮ ಕ್ಷೇತ್ರದ ಪೀಠಾಧ್ಯಕ್ಷ ವಿದ್ಯಾಹಂಸ ಭಾರತೀ ಸ್ವಾಮೀಜಿ ಚಾತುರ್ಮಾಸದ ಪೂಜೆಯ ವೇಳೆ ಮಹಿಳೆಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ವಾಮೀಜಿಯ ಮೂವರು ಶಿಷ್ಯರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.
Vijaya Karnataka Web swamijis sexual assault case a students inquiry
ಸ್ವಾಮೀಜಿಯ ಲೈಂಗಿಕ ದೌರ್ಜನ್ಯ ಪ್ರಕರಣ: ಶಿಷ್ಯಂದಿರ ವಿಚಾರಣೆ


ಶಿಷ್ಯರನ್ನು ಠಾಣೆಗೆ ಕರೆತಂದ ಪೊಲೀಸರು, ಅವರಿಂದ ಸ್ವಾಮೀಜಿಯ ಚಲನವಲನಗಳ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ. ಸ್ವಾಮೀಜಿ ಹಾಗೂ ಕೃತ್ಯಕ್ಕೆ ಸಹಕರಿಸಿದ ಪತಿ ರಾಜೇಶ್‌ ಬೋರೆ ವಿರುದ್ಧ ದೂರು ದಾಖಲಾಗುತ್ತಿದ್ದಂತೆ ಆರೋಪಿಗಳು ನಾಪತ್ತೆಯಾಗಿದ್ದಾರೆ. ಆರೋಪಿಗಳ ಬಂಧನಕ್ಕೆ ಸಾಕಷ್ಟು ಕಸರತ್ತು ನಡೆಸಿದರೂ ಸ್ವಾಮೀಜಿ ಪದೇಪದೆ ವಾಸಸ್ಥಳವನ್ನು ಬದಲಿಸುತ್ತಿರುವ ಕಾರಣ ಆತನ ಇರುವಿಕೆ ಬಗ್ಗೆ ತಿಳಿದುಕೊಳ್ಳುವುದು ಪೊಲೀಸರಿಗೆ ಕಗ್ಗಂಟಾಗಿದೆ. ತನಿಖೆ ದಿಕ್ಕನ್ನು ಬದಲಿಸಿರುವ ಪೊಲೀಸರು, ಸ್ವಾಮೀಜಿ ಹಾಗೂ ಸಂತ್ರಸ್ತೆಯ ಪತಿಯ ಆಪ್ತರು ಹಾಗೂ ಬಂಧುಗಳ ವಿಚಾರಣೆ ನಡೆಸುತ್ತಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ