ಆ್ಯಪ್ನಗರ

ಒಂದು ಸಾವಿರ ಜನಕ್ಕೆ ಸೀಮಿತವಾಗಿ ಪಂಚಲಿಂಗ ದರ್ಶನ: ಮುಖ್ಯಮಂತ್ರಿ ಯಡಿಯೂರಪ್ಪ

ಕೊರೊನಾ ವೈರಸ್‌ ಪರಿಸ್ಥಿತಿ ಹಿನ್ನೆಲೆ ಈ ಬಾರಿಯ ತಲಕಾಡು ಪಂಚಲಿಂಗ ದರ್ಶನ ಮಹೋತ್ಸವವನ್ನು ಒಂದು ಸಾವಿರ ಜನಕ್ಕೆ ಸೀಮಿತಗೊಳಿಸಿ, ಸರಳವಾಗಿ ಆಚರಿಸುವುದಾಗಿ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ತಿಳಿಸಿದ್ದಾರೆ.

Vijaya Karnataka Web 25 Nov 2020, 11:48 pm
ಮೈಸೂರು: ಒಂದು ಸಾವಿರ ಜನಕ್ಕೆ ಸೀಮಿತಗೊಳಿಸಿ, ಸರಳವಾಗಿ ಪಂಚಲಿಂಗ ದರ್ಶನ ಮಹೋತ್ಸವ ನಡೆಸಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ನೇತೃತ್ವದಲ್ಲಿ ಬುಧವಾರ ತಿ.ನರಸೀಪುರ ತಾಲೂಕಿನ ತಲಕಾಡಿನಲ್ಲಿ ನಡೆದ ಪಂಚಲಿಂಗ ದರ್ಶನ ಪೂರ್ವಭಾವಿ ಸಭೆಯಲ್ಲಿ ತೀರ್ಮಾನಿಸಲಾಯಿತು.
Vijaya Karnataka Web BSY


ಈ ವೇಳೆ ಮುಖ್ಯಮಂತ್ರಿ ಬಿ‌.ಎಸ್.ಯಡಿಯೂರಪ್ಪ ಅವರು ಮಾತನಾಡಿ, ಪಂಚಲಿಂಗ ದರ್ಶನದ ಹಿನ್ನೆಲೆ ಅಗತ್ಯವಿರುವ ಕೆಲಸಗಳನ್ನು ಈಗ ತುರ್ತಾಗಿ ಕೈಗೊಳ್ಳಬೇಕು. ತಲಕಾಡು ಅಭಿವೃದ್ಧಿಗೆ ಬೇಕಾಗುವ ಶಾಶ್ವತ ಕೆಲಸಗಳನ್ನು ನಂತರ ಕೈಗೆತ್ತುಕೊಳ್ಳಿ. ಈಗ ತರಾತುರಿಯಲ್ಲಿ ಮಾಡುವುದು ಬೇಡ ಎಂದು ಹೇಳಿದರು.

ಉಪಮುಖ್ಯಮಂತ್ರಿ ಗೋವಿಂದ ಎಂ.ಕಾರಜೋಳ ಅವರು ಮಾತನಾಡಿ, ರಸ್ತೆ ಗುಂಡಿ ಮುಚ್ಚುವ ಕೆಲಸ ನಾಳೆಯಿಂದಲೇ ಕೈಗೊಳ್ಳಲಾಗುತ್ತದೆ. ಈ ಕೆಲಸವನ್ನು ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು ತ್ವರಿತಗತಿಯಲ್ಲಿ ಪೂರ್ಣಗೊಳಿಸಲಿದ್ದಾರೆ ಎಂದು ತಿಳಿಸಿದರು.

ಡಿ.14ರಿಂದ ತಲಕಾಡು ಪಂಚಲಿಂಗ ದರ್ಶನ: ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ ಪೂರ್ವಭಾವಿ ಸಭೆ

ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್‌.ಟಿ.ಸೋಮಶೇಖರ್ ಅವರು ಮಾತನಾಡಿ, ಪಂಚಲಿಂಗ ದರ್ಶನ ಮಹೋತ್ಸವಕ್ಕೆ 2.2 ಕೋಟಿ ಅಂದಾಜು ವೆಚ್ಚದ ಪ್ರಸ್ತಾವನೆಯನ್ನು ಜಿಲ್ಲಾಡಳಿತ ಸರ್ಕಾರಕ್ಕೆ ಸಲ್ಲಿಸಿದೆ. ಈ ವೆಚ್ಚವನ್ನು ಮರು ಪರಿಶೀಲಿಸಿ ಸಲ್ಲಿಸಿ ಎಂದು ಜಿಲ್ಲಾಧಿಕಾರಿಗಳಿಗೆ ಸಲಹೆ ನೀಡಿದರು.

ಮುಂದಿನ ಎರಡೂವರೆ ವರ್ಷವೂ ನಾನೇ ಸಿಎಂ: ನಾಯಕತ್ವ ಬದಲಾವಣೆ ಚರ್ಚೆಗೆ ಯಡಿಯೂರಪ್ಪ ಇತಿಶ್ರೀ

ಮುಜರಾಯಿ ಇಲಾಖೆ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ಶಾಸಕರಾದ ಎಸ್.ಎ.ರಾಮದಾಸ್, ಎಂ.ಅಶ್ವಿನ್ ಕುಮಾರ್, ಜಿಪಂ ಅಧ್ಯಕ್ಷೆ ಪರಿಮಳಾ ಶ್ಯಾಂ, ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ, ಜಿಲ್ಲಾ ಪೊಲೀಸ್ ಅಧೀಕ್ಷಕ ಸಿ.ಬಿ.ರಿಷ್ಯಂತ್, ಜಿಲ್ಲಾ ಪಂಚಾಯತ್ ಸಿಇಒ ಡಿ.ಭಾರತಿ, ಪ್ರಾದೇಶಿಕ ಆಯುಕ್ತರಾದ ಪ್ರಕಾಶ್ ಇನ್ನಿತರರು ಇದ್ದರು.

ಬೆಂಗಳೂರಿಗೆ ನಿವಾರ್ ಚಂಡಮಾರುತ ಬಂದರೆ ಯಾರೂ ತಡೆಯೋಕಾಗಲ್ಲ: ಮೈಸೂರಿನಲ್ಲಿ ಸಿಎಂ ಹೇಳಿಕೆ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ