ಆ್ಯಪ್ನಗರ

ಟಿಪ್ಪು ಜಯಂತಿಯಲ್ಲಿ ಭಾಗಿಯಾಗದ ಸಿಎಂ, ಡಿಸಿಎಂ ವಿರುದ್ಧ ತನ್ವೀರ್ ಸೇಠ್ ಆಕ್ರೋಶ

ಬೇರೆ ಜಯಂತಿಗಳಲ್ಲಿ ತೋರುವ ಉತ್ಸಾಹವನ್ನು ಟಿಪ್ಪು ಜಯಂತಿಯಲ್ಲೂ ತೋರಿಸಬೇಕು. ಸಿಎಂ ಅನಾರೋಗ್ಯದ ಕಾರಣ ನೀಡಿ ಟಿಪ್ಪು ಜಯಂತಿ ಕಾರ್ಯಕ್ರಮಕ್ಕೆ ಗೈರಾಗಿದ್ದರೆ, ಡಿಸಿಎಂ ಪರಮೇಶ್ವರ್ ವಿದೇಶ ಪ್ರವಾಸದಲ್ಲಿದ್ದಾರೆ ಎಂದು ನಾಯಕರ ನಡೆಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Vijaya Karnataka Web 10 Nov 2018, 2:53 pm
ಮೈಸೂರು: ರಾಜ್ಯ ಸರಕಾರಿ ಪ್ರಾಯೋಜಿತ ಟಿಪ್ಪು ಜಯಂತಿಗೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹಾಗೂ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಗೈರಾಗಿರುವುದು ಮುಸ್ಲಿಂ ಸಮುದಾಯಕ್ಕೆ ಮಾಡಿದ ಅಪಮಾನ ಎಂದು ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ ಗುಡುಗಿದ್ದಾರೆ.
Vijaya Karnataka Web tan


ನಗರದ ಕಲಾ ಮಂದಿರದಲ್ಲಿ ಆಯೋಜಿಸಲಾಗಿದ್ದ ಟಿಪ್ಪು ಜಯಂತಿ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿದ ಅವರು, ಬೇರೆ ಜಯಂತಿಗಳಲ್ಲಿ ತೋರುವ ಉತ್ಸಾಹವನ್ನು ಟಿಪ್ಪು ಜಯಂತಿಯಲ್ಲೂ ತೋರಿಸಬೇಕು. ಸಿಎಂ ಅನಾರೋಗ್ಯದ ಕಾರಣ ನೀಡಿ ಟಿಪ್ಪು ಜಯಂತಿ ಕಾರ್ಯಕ್ರಮಕ್ಕೆ ಗೈರಾಗಿದ್ದರೆ, ಡಿಸಿಎಂ ಪರಮೇಶ್ವರ್ ವಿದೇಶ ಪ್ರವಾಸದಲ್ಲಿದ್ದಾರೆ ಎಂದು ನಾಯಕರ ನಡೆಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸಾಕಷ್ಟು ಭದ್ರತೆ ನಡುವೆ ಜಯಂತಿ ಆಚರಣೆ ಮಾಡಲಾಗುತ್ತಿರುವುದು ಸಮುದಾಯಕ್ಕೆ ಮಾಡಿದ ಅಪಮಾನ ಎಂದು ಕಿಡಿಕಾರಿರುವ ಅವರು, ಜಯಂತಿ ವಿಚಾರವಾಗಿ ಇಷ್ಟೊಂದು ನಿರ್ಬಂಧ ವಿಧಿಸುವ ಅಗತ್ಯ ಇರಲಿಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ.

Tipu Jayanti Live Updates: ಸಿದ್ದು ತವರು ಮೈಸೂರಲ್ಲಿ ಖಾಲಿ ಕುರ್ಚಿಗಳ ನಡುವೆ ಟಿಪ್ಪು ಜಯಂತಿ

'ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಎಚ್.ಡಿ.ಕೋಟೆಯಲ್ಲಿದ್ದಾರೆಂಬ ಮಾಹಿತಿ ಇದ್ದು, ಅಲ್ಲಿ ಕೂಡ ಟಿಪ್ಪು ಜಯಂತಿ ಕಾರ್ಯಕ್ರಮ ನಡೆಯುತ್ತಿದೆ. ಅವರಿಗೆ ಮುಸ್ಲಿಂ ಸಮುದಾಯದ ಬಗ್ಗೆ ಗೌರವ ಇದ್ದರೆ, ಜಯಂತಿಯಲ್ಲಿ ಭಾಗಿಯಾಗಲಿ' ಎಂದು ಸೇಠ್ ಒತ್ತಾಯಿಸಿದ್ದಾರೆ.

ಖಾಲಿ ಕುರ್ಚಿಗಳ ನಡುವೆ ಟಿಪ್ಪು ಜಯಂತಿ

ಕಲಾಮಂದಿರದಲ್ಲಿ ಖಾಲಿ ಕುರ್ಚಿಗಳ ಸಮ್ಮುಖದಲ್ಲಿ ಟಿಪ್ಪು ಜಯಂತಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಸಚಿವ ಜಿ.ಟಿ.ದೇವೆಗೌಡ.
ಎನ್.ಆರ್.ಕ್ಷೇತ್ರದ ಶಾಸಕ ತನ್ವೀರ್ ಸೇಠ್ ಹಾಗೂ ವಿಧಾನಪರಿಷತ್ ಸದಸ್ಯ ಕೆ.ಟಿ.ಶ್ರೀಕಂಠೇಗೌಡ ಅವರು ಉಪಸ್ಥಿತರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ