ಆ್ಯಪ್ನಗರ

ಇಬ್ಬರು ಸರಗಳ್ಳರ ಬಂಧನ

ಇಬ್ಬರು ಸರಗಳ್ಳರನ್ನು ಬಂಧಿಸಿರುವ ವಿವಿ ಪುರಂ ಠಾಣೆ ಪೊಲೀಸರು ಬಂಧಿತರಿಂದ 75 ಸಾವಿರ ರೂ. ಮೌಲ್ಯದ 20 ಗ್ರಾಂ ತೂಕದ ಚಿನ್ನದ ಸರ ಮತ್ತು ಕೃತ್ಯಕ್ಕೆ ಬಳಸಿದ್ದ ದ್ವಿಚಕ್ರ ವಾಹನ ವಶಪಡಿಸಿಕೊಂಡಿದ್ದಾರೆ.

Vijaya Karnataka 8 May 2019, 5:00 am
ಮೈಸೂರು: ಇಬ್ಬರು ಸರಗಳ್ಳರನ್ನು ಬಂಧಿಸಿರುವ ವಿವಿ ಪುರಂ ಠಾಣೆ ಪೊಲೀಸರು ಬಂಧಿತರಿಂದ 75 ಸಾವಿರ ರೂ. ಮೌಲ್ಯದ 20 ಗ್ರಾಂ ತೂಕದ ಚಿನ್ನದ ಸರ ಮತ್ತು ಕೃತ್ಯಕ್ಕೆ ಬಳಸಿದ್ದ ದ್ವಿಚಕ್ರ ವಾಹನ ವಶಪಡಿಸಿಕೊಂಡಿದ್ದಾರೆ.
Vijaya Karnataka Web the arrested of two chain robbers
ಇಬ್ಬರು ಸರಗಳ್ಳರ ಬಂಧನ


ಶ್ರೀರಂಗಪಟ್ಟಣ ತಾಲೂಕಿನ ಕಾಳಮ್ಮನಗುಡಿ ರಸ್ತೆಯ ಆಸೀಫ್‌ ಅಹಮದ್‌ (21), ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಗಿಡಿಗಡನಹಳ್ಳಿ ಗ್ರಾಮದ ಜಗದೀಶ್‌ ಬಂಧಿತರಾಗಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಬಂಧಿತರು ಗಾರೆ ಕೆಲಸ ಮಾಡಿಕೊಂಡಿದ್ದಾರೆ.

ವಿವಿ ಪುರಂ ಠಾಣೆ ಪೊಲೀಸರು ವಿವಿ ಮೊಹಲ್ಲಾದ ಕಾಳಿದಾಸ ರಸ್ತೆಯಲ್ಲಿ ಗಸ್ತಿನಲ್ಲಿದ್ದಾಗ, ಈ ಇಬ್ಬರು ತಾವು ಕಳವು ಮಾಡಿದ್ದ ಚಿನ್ನದ ಸರವನ್ನು ಮಾರಾಟ ಮಾಡಲು ಯತ್ನಿಸಿ ಸಿಕ್ಕಿಬಿದ್ದಿದ್ದಾರೆ. ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಕಳೆದ ಡಿ. 11ರಂದು ವಿಜಯನಗರ ನಾಲ್ಕನೇ ಹಂತದಲ್ಲಿ ಮಹಿಳೆಯೊಬ್ಬರಿಂದ ಚಿನ್ನದ ಸರ ಕಿತ್ತುಕೊಂಡು ಹೋಗಿರುವುದಾಗಿ ತಿಳಿಸಿದ್ದಾರೆ.

ಕಾರ್ಯಾಚರಣೆಯಲ್ಲಿ ವಿವಿ ಪುರಂ ಠಾಣೆಯ ಇನ್ಸ್‌ಪೆಕ್ಟರ್‌ ಎಚ್‌.ಎನ್‌. ವಿನಯ್‌, ಸಿಬ್ಬಂದಿ ಪ್ರಸನ್ನ, ದಿವಾಕರ್‌, ಸುರೇಶ್‌, ಮಂಜುನಾಥ್‌ ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ