ಆ್ಯಪ್ನಗರ

ಸಿದ್ದರಾಮಯ್ಯ ಪರ ಪ್ರಗತಿಪರರ ಬ್ಯಾಟಿಂಗ್‌

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪರವಾಗಿ ಚುನಾಚಣಾ ಪೂರ್ವ ಪ್ರಚಾರಕ್ಕಿಳಿದಿದ್ದ ಪ್ರಗತಿಪರ ಸಂಘಟನೆಗಳು ಈಗ ಡಿನೋಟಿಫಿಕೇಷನ್‌ ಪ್ರಕರಣದಲ್ಲಿ ಸಿಲುಕಿರುವ ಅವರ ಪರ ಬ್ಯಾಟಿಂಗ್‌ ಆರಂಭಿಸಿವೆ.

Vijaya Karnataka 24 Jun 2018, 8:11 am
ಮೈಸೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪರವಾಗಿ ಚುನಾಚಣಾ ಪೂರ್ವ ಪ್ರಚಾರಕ್ಕಿಳಿದಿದ್ದ ಪ್ರಗತಿಪರ ಸಂಘಟನೆಗಳು ಈಗ ಡಿನೋಟಿಫಿಕೇಷನ್‌ ಪ್ರಕರಣದಲ್ಲಿ ಸಿಲುಕಿರುವ ಅವರ ಪರ ಬ್ಯಾಟಿಂಗ್‌ ಆರಂಭಿಸಿವೆ.
Vijaya Karnataka Web Siddaramaiah


ಶನಿವಾರ ಸುದ್ದಿಗೋಷ್ಠಿ ನಡೆಸಿದ ಕರ್ನಾಟಕ ರಾಜ್ಯ ಪ್ರಗತಿಪರ ಚಿಂತಕರ ವೇದಿಕೆ ಪದಾಧಿಕಾರಿಗಳು, ವಿರೋಧ ಪಕ್ಷದ ನಾಯಕರಾಗಿ ಹಾಗೂ ಐದು ವರ್ಷ ಮುಖ್ಯಮಂತ್ರಿಯಾಗಿ ಭ್ರಷ್ಟರಹಿತ ಆಡಳಿತ ನಡೆಸಿದ್ದಾರೆ. ಪ್ರಾಮಾಣಿಕತೆ, ದಕ್ಷತೆಗೆ ಸಾಕ್ಷಿಯಾಗಿದ್ದಾರೆ. ಆದರೆ, ಅವರ ಮೇಲೆ ಜಿಲ್ಲೆಯ ಪ್ರಭಾವಿ ರಾಜಕಾರಣಿಗಳು ಅವರ ಮೇಲೆ ಇಲ್ಲಸಲ್ಲದ ಆರೋಪಿ ಹೊರಿಸಿ ಷಡ್ಯಂತ್ರ ರೂಪಿಸಿದ್ದಾರೆ. ಅವರು ಯಾವುದೇ ತಪ್ಪು ಮಾಡದಿದ್ದರೂ ರಾಜಕೀಯ ಷಡ್ಯಂತ್ರ ರೂಪಿಸಿದ್ದು, ಸಿದ್ದರಾಮಯ್ಯ ಅವರ ಹೆಸರನ್ನು ಎಫ್‌ಐಆರ್‌ನಿಂದ ಕೈ ಬಿಡಬೇಕು. ಇಲ್ಲದಿದ್ದಲ್ಲಿ ವಿಚಾರವಾದಿಗಳು, ಚಿಂತಕರು, ಸಾಹಿತಿಗಳು ಹಾಗೂ ಕಲಾವಿದರು ಸೇರಿ ಉಗ್ರ ಪ್ರತಿಭಟನೆ ಮಾಡಲಾಗುವುದು ಎಂದು ವೇದಿಕೆ ಎಚ್ಚರಿಕೆ ನೀಡಿದೆ.

ಜಿಲ್ಲೆಯ ರಾಜಕೀಯ ವ್ಯಕ್ತಿಗಳ ಪ್ರಭಾವ: ವೇದಿಕೆ ರಾಜ್ಯಾಧ್ಯಕ್ಷ, ಮಾಜಿ ಎಂಎಲ್‌ಸಿ ಕೆ.ಸಿ. ಪುಟ್ಟಸಿದ್ಧ ಶೆಟ್ಟಿ ಮಾತನಾಡಿ, ''ಸಿದ್ದರಾಮಯ್ಯ ಅವರು ಅಲ್ಪಸಂಖ್ಯಾತರು, ಹಿಂದುಳಿದ ವರ್ಗ ಹಾಗೂ ದಲಿತರಿಗೆ ದಾರಿದೀಪವಾಗಿದ್ದಾರೆ. ಅವರ ಐದು ವರ್ಷದ ಆಡಳಿತ ಹಗರಣಮುಕ್ತವಾಗಿದ್ದು, ಬಡವರ ಪಾಲಿಗೆ ಹತ್ತಾರು ಭಾಗ್ಯಗಳನ್ನು ನೀಡಿದ್ದಾರೆ. ಇಂತಹ ಜನನಾಯಕನ ವಿರುದ್ದ ಜಿಲ್ಲೆಯ ಪ್ರಭಾವಿ ರಾಜಕೀಯ ಮುಖಂಡರು ವ್ಯವಸ್ಥಿತವಾಗಿ ಷಡ್ಯಂತರ ನಡೆಸಿ, ಸುಳ್ಳು ಮಾಹಿತಿ ನೀಡಿ, ಸಿದ್ದರಾಮಯ್ಯ ಅವರನ್ನು ತೇಜೋವಧೆ ಮಾಡಲಾಗುತ್ತಿದೆ,'' ಎಂದು ದೂರಿದರು.

ಈಗ ಜ್ಞಾನೋದಯವಾಯಿತೆ: ''ಈ ಪ್ರಕರಣ ನೋಟಿಫಿಕೇಷನೇ ಆಗಿಲ್ಲ, ಇನ್ನು ಡಿನೋಟಿಫಿಕೇಷನ್‌ ಆಗುವುದು ಹೇಗೆ ಎಂದು ಪ್ರಶ್ನಿಸಿದ ಅವರು, ಪೂರ್ಣ ದಾಖಲೆಗಳನ್ನು ಪರಿಶೀಲಿಸಿದಾಗ ದಾಖಲೆಯಲ್ಲಿ ಸಿದ್ದರಾಮಯ್ಯ ಅವರ ಮೇಲೆ ಯಾವುದೇ ಆರೋಪ ಇಲ್ಲ. ಈ ಪ್ರಕರಣ ನಡೆದಿರುವುದು 1988ರಲ್ಲಿ. ಆರ್‌ಟಿಐ ಕಾರ್ಯಕರ್ತನಿಗೆ ಜ್ಞಾನೋದಯವಾಗಲು 20 ವರ್ಷ ಬೇಕಿತ್ತೆ ಎಂದು ಪ್ರಶ್ನಿಸಿದರು.

ಸಮಿತಿ ರಚಿಸಿ: ಗೃಹಮಂತ್ರಿ, ಮೈಸೂರು ಪೊಲೀಸ್‌ ಆಯುಕ್ತರ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಅಧಿಕಾರ ವ್ಯಾಪ್ತಿಯಲ್ಲಿ ಸತ್ಯ ಶೋಧನಾ ಸಮಿತಿ ರಚನೆ ಮಾಡಿ, ತನಿಖೆ ನಡೆಸಬೇಕೆಂದು ಆಗ್ರಹಿಸಿದರು.

ಸರಕಾರ ಬಿದ್ದು ಹೋಗುತ್ತೆ: ಸಿದ್ದರಾಮಯ್ಯ ಮನಸು ಮಾಡಿದರೆ ಎರಡನೇ ದಿನದಲ್ಲೇ ಸರಕಾರ ಬಿದ್ದು ಹೋಗುತ್ತದೆ. ಆದರೂ ಸಿದ್ದರಾಮಯ್ಯ ಅವರು ಸಮಿಶ್ರ ಸರಕಾರವನ್ನು ಮುನ್ನಡೆಸುತ್ತಿದ್ದಾರೆ. ಆದರೂ, ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರು ಏಕೆ ಹೀಗೆ ಮಾಡಿದ್ದರೋ ತಿಳಿಯದು. ಮುಖ್ಯಮಂತ್ರಿ ಹಾಗೂ ಗೃಹ ಮಂತ್ರಿ ಡಾ.ಜಿ.ಪರಮೇಶ್ವರ್‌ ಅವರು ಈ ಪ್ರಕರಣದ ಸತ್ಯಾಸತ್ಯತೆಯನ್ನು ತಿಳಿದುಕೊಳ್ಳಬೇಕು ಎಂದು ಹೇಳಿದರು.

ಪ್ರಗತಿಪರ ಚಿಂತಕರಾದ ಡಾ.ಮಧು, ಪ್ರಸನ್ನ ಕುಮಾರ್‌, ಎಚ್‌.ಬಿ. ಸಂಪತ್ತು, ಕಾಯಕ ಸಮಾಜಗಳ ಒಕ್ಕಟದ ಪ್ರಧಾನ ಕಾರ‍್ಯದರ್ಶಿ ಬೋರಪ್ಪ ಶೆಟ್ಟಿ, ಗೋವಿಂದಶೆಟ್ಟಿ ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ