ಆ್ಯಪ್ನಗರ

ಮೈಸೂರು: ಯುವತಿ ನೇಣು ಬಿಗಿದು ಆತ್ಮಹತ್ಯೆ

ಯುವತಿಯೋರ್ವಳು ತನ್ನ ತಾಯಿ ಸತ್ತ ಕೊರಗಿನಿಂದ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಅಜ್ಜಿ ಮತ್ತು ತಂದೆಗೆ ಕ್ಷಮಿಸುವಂತೆ ಡೆತ್‌ ನೋಟ್‌ ಬರೆದಿಟ್ಟು, 'ನನ್ನ ಸಾವಿಗೆ ಯಾರೂ ಕಾರಣರಲ್ಲ. ನನ್ನ ತಾಯಿ ಮತ್ತು ಅಕ್ಕನನ್ನು ಕಳೆದುಕೊಂಡ ಕೊರಗಿನಿಂದ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ ಎಂದು ಬರೆದಿಟ್ಟಿದ್ದಾಳೆ.

Vijaya Karnataka Web 25 Mar 2020, 7:50 am
ಮೈಸೂರು: ಬೆಟ್ಟದಪುರ ಸಮೀಪದ ಬೆಕ್ಕರೆ ಗ್ರಾಮದ ಯುವತಿ ತನ್ನ ತಾಯಿ ಸತ್ತ ಕೊರಗಿನಿಂದ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಮೈಸೂರಿನ ಹೋಂನಲ್ಲಿ ನರ್ಸ್‌ ಆಗಿ ಕೆಲಸ ನಿರ್ವಹಿಸುತ್ತಿದ್ದ ಮಂದಾರ(20) ಮೃತರು.
Vijaya Karnataka Web suicide


14 ವರ್ಷಗಳ ಹಿಂದೆ ತನ್ನ ತಾಯಿ ಮತ್ತು ಅಕ್ಕನನ್ನು ಕಳೆದುಕೊಂಡಿದ್ದ ಮಂದಾರ, ಊರಿಗೆ ಬಂದಾಗಲೆಲ್ಲಾಅಜ್ಜಿ ಮತ್ತು ತಂದೆಯೊಡನೆ ತುಂಬಾ ಅಳಲು ತೋಡಿಕೊಳ್ಳುತ್ತಿದ್ದಳು. ಮಾ. 21ರಂದು ತಮ್ಮ ಸ್ವಗ್ರಾಮಕ್ಕೆ ಬಂದಿದ್ದು, ಅವರ ಅಜ್ಜಿ ಮತ್ತು ತಂದೆಗೆ ಕ್ಷಮಿಸುವಂತೆ ಡೆತ್‌ ನೋಟ್‌ ಬರೆದಿಟ್ಟು, 'ನನ್ನ ಸಾವಿಗೆ ಯಾರೂ ಕಾರಣರಲ್ಲ. ನನ್ನ ತಾಯಿ ಮತ್ತು ಅಕ್ಕನನ್ನು ಕಳೆದುಕೊಂಡ ಕೊರಗಿನಿಂದ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ ಎಂದು ಬರೆದಿಟ್ಟಿದ್ದಾಳೆ' ಎಂದು ಮೃತಳ ತಂದೆ ಬಸವೇಗೌಡ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.
ಬೆಟ್ಟದಪುರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ