ಆ್ಯಪ್ನಗರ

ಕ್ಷೇತ್ರಕ್ಕೆ ಅನುದಾನ ಬಿಡುಗಡೆವರೆಗೂ ಸಭೆಗೆ ಬರಲ್ಲ

ಈ ಹಿಂದಿನ ಜೆಡಿಎಸ್- ಕಾಂಗ್ರೆಸ್ ಸಮ್ಮಿಶ್ರ ಸರಕಾರದಲ್ಲಿ ತಮ್ಮ ಕೆ.ಆರ್. ನಗರ ಕ್ಷೇತ್ರಕ್ಕೆ ಬಿಡುಗಡೆಯಾಗಿದ್ದ ಅನುದಾನವನ್ನು ತಡೆ ಹಿಡಿದಿದ್ದು, ಇದನ್ನು ಬಿಡುಗಡೆ ಮಾಡುವವರೆಗೂ ರಾಜ್ಯ ಸರಕಾರದ ಯಾವುದೇ ಸಭೆಗಳಿಗೂ ಹಾಜರಾಗುವುದಿಲ್ಲ ಎಂದು ಶಾಸಕ ಸಾ.ರಾ.ಮಹೇಶ್ ಹೇಳಿದ್ದಾರೆ.

Vijaya Karnataka 4 Jan 2020, 5:00 am
ಕೆಡಿಪಿ ಸಭೆಗೆ ಸಾರಾ ಗೈರು, ವಿವರಣೆ
Vijaya Karnataka Web SARA MAHESH


ಮೈಸೂರು:
ಈ ಹಿಂದಿನ ಜೆಡಿಎಸ್- ಕಾಂಗ್ರೆಸ್ ಸಮ್ಮಿಶ್ರ ಸರಕಾರದಲ್ಲಿ ತಮ್ಮ ಕೆ.ಆರ್. ನಗರ ಕ್ಷೇತ್ರಕ್ಕೆ ಬಿಡುಗಡೆಯಾಗಿದ್ದ ಅನುದಾನವನ್ನು ತಡೆ ಹಿಡಿದಿದ್ದು, ಇದನ್ನು ಬಿಡುಗಡೆ ಮಾಡುವವರೆಗೂ ರಾಜ್ಯ ಸರಕಾರದ ಯಾವುದೇ ಸಭೆಗಳಿಗೂ ಹಾಜರಾಗುವುದಿಲ್ಲ ಎಂದು ಶಾಸಕ ಸಾ.ರಾ.ಮಹೇಶ್ ಹೇಳಿದ್ದಾರೆ.

ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಅವರ ಅಧ್ಯಕ್ಷತೆಯಲ್ಲಿ ಶುಕ್ರವಾರ ನಡೆದ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ಮಹೇಶ್ ಪಾಲ್ಗೊಂಡಿರಲಿಲ್ಲ. ಈ ಕುರಿತು ಶುಕ್ರವಾರ ಸೋಮಣ್ಣ ಅವರಿಗೆ ಪತ್ರ ಬರೆದಿರುವ ಮಹೇಶ್, ಹಿಂದಿನ ಸರಕಾರದಲ್ಲಿ ಕೆ.ಆರ್.ನಗರ ತಾಲೂಕಿಗೆ ವಿವಿಧ ಇಲಾಖೆಗಳಿಂದ ಅಭಿವೃದ್ಧಿ ಕಾರ್ಯಗಳಿಗೆ ಹಣ ಮಂಜೂರಾಗಿತ್ತು. ಆದರೆ, ತಮ್ಮ ಸರಕಾರದ ಅವಧಿಯಲ್ಲಿ ಈ ಅನುದಾನವನ್ನು ತಡೆ ಹಿಡಿಯಲಾಗಿದೆ. ಈ ಕುರಿತು ಈ ಹಿಂದೆಯೇ ಪತ್ರ ಬರೆದು ಮೈಸೂರು ದಸರಾ ಉತ್ಸವದ ಕಾರ್ಯಕ್ರಮಗಳಿಂದ ದೂರ ಉಳಿದಿದ್ದೆಘಿ. ಆಗ ಅನುದಾನ ಬಿಡುಗಡೆಗೆ ಕ್ರಮ ಕೈಗೊಂಡು ಸಾ.ರಾ.ಮಹೇಶ್ ಅವರಿಂದಲೇ ಭೂಮಿಪೂಜೆ ನೆರವೇರಿಸುವುದಾಗಿ ಹೇಳಿದ್ದಿರಿ. ಆದರೆ, ಇಷ್ಟು ದಿನಗಳಾದರೂ ಅನುದಾನ ಬಿಡುಗಡೆಗೆ ಕ್ರಮ ಕೈಗೊಂಡಿಲ್ಲ ಎಂದಿದ್ದಾರೆ.

ಕೆಡಿಪಿ ಸಭೆಗೆ ಈಗ ಹಾಜರಾಗಿ ಇದೇ ವಿಚಾರಗಳನ್ನು ಚರ್ಚಿಸಿ ತಮ್ಮ ಮನಸ್ಸಿಗೆ ನೋವುಂಟು ಮಾಡಲಾರೆ. ತಮ್ಮ ಸರಕಾರದ ಅವಧಿಯಲ್ಲಿ ದ್ವೇಷದ ರಾಜಕಾರಣಕ್ಕೆ ಈ ಪ್ರಕರಣವೇ ಸಾಕ್ಷಿಯಾಗಿದೆ ಎಂದು ಮಹೇಶ್ ಹೇಳಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ