ಆ್ಯಪ್ನಗರ

Mysuru Bengaluru Expressway : ಮೈಸೂರು-ಬೆಂಗಳೂರು ಎಕ್ಸ್‌ಪ್ರೆಸ್‌ ಕಾರಿಡಾರ್‌ ಜನವರಿಗೆ ಬಹುತೇಕ ಸಂಚಾರಕ್ಕೆ ಸಿದ್ಧ

Mysuru-Bengaluru Express Way: ಮೈಸೂರು-ಬೆಂಗಳೂರು ಎಕ್ಸ್‌ಪ್ರೆಸ್‌ ಕಾರಿಡಾರ್‌ ನಿರ್ಮಾಣ ಚುರುಕುಗೊಂಡಿದ್ದು, ಬೆಂಗಳೂರಿನ ಕುಂಬಳಗೋಡಿನಿಂದ ಮದ್ದೂರಿಗೆ 40 ನಿಮಿಷಗಳಲ್ಲಿ ತಲುಪಬಹುದು. ಮಾರ್ಚ್ ಒಳಗೆ ಮೈಸೂರಿನ ಮಣಿಪಾಲ್‌ ಆಸ್ಪತ್ರೆ ಬಳಿ ನಿರ್ಮಾಣ ಮಾಡಬೇಕಿರುವ ಫ್ಲೈಓವರ್‌ ಹೊರತುಪಡಿಸಿ ಬಹುತೇಕ ಕಾಮಗಾರಿ ಪೂರ್ಣಗೊಳ್ಳಲಿದೆ. ಎಕ್ಸ್‌ಪ್ರೆಸ್‌ ಕಾರಿಡಾರ್‌ ಯೋಜನೆ ಒಂಬತ್ತು ಪ್ರಮುಖ ಸೇತುವೆಗಳು, 44 ಸಣ್ಣ ಸೇತುವೆಗಳು ಮತ್ತು ನಾಲ್ಕು ರೈಲು ಮೇಲ್ಸೇತುವೆಗಳನ್ನು ಹೊಂದಿದೆ.

Edited byಸೌಮ್ಯಶ್ರೀ ಮಾರ್ನಾಡ್ | Vijaya Karnataka Web 5 Dec 2022, 10:48 am

ಹೈಲೈಟ್ಸ್‌:

  • ಜನವರಿಗೆ ಬಹುತೇಕ ಮಾರ್ಗ ಸಂಚಾರಕ್ಕೆ ಸಿದ್ಧ- ಮೈಸೂರು-ಬೆಂಗಳೂರು ಎಕ್ಸ್‌ಪ್ರೆಸ್‌ ಕಾರಿಡಾರ್‌ ಕಾಮಗಾರಿ ಚುರುಕು
  • ಮಾರ್ಚ್ಗೆ ಪ್ರಧಾನಿ ಮೋದಿ ಅವರಿಂದ ಉದ್ಘಾಟನೆ ಸಾಧ್ಯತೆ
  • ಮಳೆ ನಿಂತಿರುವುದರಿಂದ ಕಾಮಗಾರಿ ವೇಗ ಪಡೆದುಕೊಂಡಿದ್ದು, ಮದ್ದೂರು ಫ್ಲೈಓವರ್‌ ಹಾಗೂ ಶ್ರೀರಂಗಪಟ್ಟಣ ಬೈಪಾಸ್‌ ಕಾಮಗಾರಿ ಇನ್ನು ನಾಲ್ಕೈದು ದಿನಗಳಲ್ಲಿ ಮುಗಿಯಲಿದೆ.
ಹೈಲೈಟ್ಸ್‌ ಮಾತ್ರವೇ ಓದಲು ಆ್ಯಪ್‌ ಡೌನ್‌ಲೋಡ್‌ ಮಾಡಿ
Vijaya Karnataka Web bengaluru mysore express way
  • ನಾಗರಾಜ್‌ ನವೀಮನೆ
ಮೈಸೂರು: ಬಹು ನಿರೀಕ್ಷೆಯ ಮೈಸೂರು-ಬೆಂಗಳೂರು ಎಕ್ಸ್‌ಪ್ರೆಸ್‌ ಕಾರಿಡಾರ್‌ನ ಬಹುತೇಕ ರಸ್ತೆಗಳು ಜನವರಿಗೆ ಸಾರ್ವಜನಿಕರ ಸೇವೆಗೆ ಲಭ್ಯವಾಗಲಿದ್ದು, ಮುಂದಿನ ವರ್ಷ ಮಾರ್ಚ್ನಲ್ಲಿ ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸುವ ಸಾಧ್ಯತೆ ಇದೆ.
ಮಳೆಯಿಂದಾಗಿ ಕಾಮಗಾರಿಗೆ ಸ್ವಲ್ಪ ತೊಂದರೆ ಉಂಟಾಗಿತ್ತು. ಇದೀಗ ಮಳೆ ನಿಂತಿರುವುದರಿಂದ ಕಾಮಗಾರಿ ವೇಗ ಪಡೆದುಕೊಂಡಿದ್ದು, ಮದ್ದೂರು ಫ್ಲೈಓವರ್‌ ಹಾಗೂ ಶ್ರೀರಂಗಪಟ್ಟಣ ಬೈಪಾಸ್‌ ಕಾಮಗಾರಿ ಇನ್ನು ನಾಲ್ಕೈದು ದಿನಗಳಲ್ಲಿ ಮುಗಿಯಲಿದೆ. ಡಿಸೆಂಬರ್‌ ಅಂತ್ಯದೊಳಗೆ ಮಂಡ್ಯ ಬೈಪಾಸ್‌ ಸಂಚಾರಕ್ಕೆ ಮುಕ್ತವಾಗಲಿದೆ. ಅಲ್ಲಿಗೆ ಬೆಂಗಳೂರಿನಿಂದ ಮೈಸೂರಿಗೆ ಸಂಚಾರ ಸರಾಗವಾಗಲಿದ್ದು, ಮಾರ್ಚ್ ಒಳಗೆ ಮೈಸೂರಿನ ಮಣಿಪಾಲ್‌ ಆಸ್ಪತ್ರೆ ಬಳಿ ನಿರ್ಮಾಣ ಮಾಡಬೇಕಿರುವ ಫ್ಲೈಓವರ್‌ ಹೊರತುಪಡಿಸಿ ಬಹುತೇಕ ಕಾಮಗಾರಿ ಪೂರ್ಣಗೊಳ್ಳಲಿದೆ.

ಮೈಸೂರು - ಬೆಂಗಳೂರು ಎಕ್ಸ್ ಪ್ರೆಸ್ ವೇ: ಎರಡು ತಿಂಗಳಲ್ಲಿ 40 ಅಪಘಾತ!

''ಬೆಂಗಳೂರಿನ ಕುಂಬಳಗೋಡಿನಿಂದ ಮದ್ದೂರಿಗೆ 40 ನಿಮಿಷಗಳಲ್ಲಿ ತಲುಪಬಹುದು. ಪ್ರಸ್ತುತ, ಮಂಡ್ಯ ಜಿಲ್ಲೆಯ ಮದ್ದೂರಿನವರೆಗೆ ಮುಖ್ಯ ರಸ್ತೆ ತೆರೆದಿದೆ. ಮದ್ದೂರು ಪಟ್ಟಣದಿಂದ ಟ್ರಾಫಿಕ್‌ ಸಮಸ್ಯೆ ಉಂಟಾಗುತ್ತಿದೆ. ಮದ್ದೂರು ಫ್ಲೈಓವರ್‌ 3.8 ಕಿ.ಮೀ. ಉದ್ದವಿದೆ. ಈ ಫ್ಲೈ ಓವರ್‌ ಕಾಮಗಾರಿ ಇನ್ನು ನಾಲ್ಕೈದು ದಿನದಲ್ಲಿಮುಕ್ತಾಯಗೊಳ್ಳಲಿದ್ದು, ಇದರಿಂದ ವಾಹನ ಸವಾರರಿಗೆ 15ರಿಂದ 20 ನಿಮಿಷ ಉಳಿಯುತ್ತದೆ. ಬೆಂಗಳೂರಿನಿಂದ ಮೈಸೂರಿಗೆ ಹೋಗುವ ರಸ್ತೆಯ ಕೆಲಸಗಳು ಮುಗಿಯುವ ಹಂತಕ್ಕೆ ಬಂದಿದ್ದು, ಅಂಡರ್‌ಪಾಸ್‌, ಕೆನಾಲ್‌ನ ಸಣ್ಣಪುಟ್ಟ ಕೆಲಸಗಳು ಬಾಕಿ ಇದೆ,'' ಎಂದು ಸಂಸದ ಪ್ರತಾಪಸಿಂಹ ತಿಳಿಸಿದ್ದಾರೆ.

ರೋಡ್‌ ಟೆಸ್ಟ್‌ ನಂತರವೇ ಸಂಚಾರ: ''ಆಗಸ್ಟ್‌ ಕೊನೆಯಲ್ಲಿಬಿದ್ದ ಮಳೆಗೆ ರಾಮನಗರ ಮುಳುಗಿತ್ತು. ಹಾಗಾಗಿ ಮೈಸೂರು-ಬೆಂಗಳೂರು ಎಕ್ಸ್‌ಪ್ರೆಸ್‌ ಕಾರಿಡಾರ್‌ ಕಾಮಗಾರಿ ಮುಗಿದ ಬಳಿಕ ಎಲ್ಲಾಪರೀಕ್ಷೆಗಳು ಮಾಡಿದ ನಂತರವೇ ಸಂಚಾರಕ್ಕೆ ಮುಕ್ತಗೊಳಿಸಲಾಗುವುದು. ಜೊತೆಗೆ ರೋಡ್‌ ಟೆಸ್ಟಿಂಗ್‌ ಕೂಡ ನಡೆಯುತ್ತಿದೆ. ರಸ್ತೆ ಸಂಚಾರಕ್ಕೆ ಮುಕ್ತಗೊಳಿಸುವ ಮೊದಲು ಕ್ವಾಲಿಟಿ ಪರೀಕ್ಷೆ ಹಾಗೂ ಲೋಡ್‌ ಟೆಸ್ಟ್‌ ಕೂಡ ನಡೆಸಬೇಕು. ಹೀಗೆ ಎಲ್ಲಾ ಪರೀಕ್ಷೆಗಳು ಮುಗಿದ ಬಳಿಕ ರಸ್ತೆಯನ್ನು ಸಂಚಾರಕ್ಕೆ ಮುಕ್ತ ಮಾಡಲಾಗುತ್ತದೆ,'' ಎಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ತಿಳಿಸಿದ್ದಾರೆ.

Bengaluru- Mysuru Express Way - ಎಕ್ಸ್ ಪ್ರೆಸ್ ವೇ ಬೈಪಾಸ್ ರಸ್ತೆ ಸಿದ್ಧ: ವಿಡಿಯೋ ಮೂಲಕ ವಿಪಕ್ಷಗಳಿಗೆ ಬಿಜೆಪಿ ಟಾಂಗ್
ಫುಡ್‌ ಕೋರ್ಟ್‌, ವಿಶ್ರಾಂತಿ ಕೊಠಡಿ?
ಇದರ ಹೊರತಾಗಿ ಫುಡ್‌ ಕೋರ್ಟ್‌ಗಳು ಮತ್ತು ಅಲ್ಲಲ್ಲಿ ವಿಶ್ರಾಂತಿ ಕೊಠಡಿಗಳ ನಿರ್ಮಾಣಕ್ಕೆ ಸ್ವಲ್ಪ ಸಮಯ ಬೇಕಾಗುತ್ತದೆ. ಎಕ್ಸ್‌ಪ್ರೆಸ್‌ ಕಾರಿಡಾರ್‌ ಯೋಜನೆ ಒಂಬತ್ತು ಪ್ರಮುಖ ಸೇತುವೆಗಳು, 44 ಸಣ್ಣ ಸೇತುವೆಗಳು ಮತ್ತು ನಾಲ್ಕು ರೈಲು ಮೇಲ್ಸೇತುವೆಗಳನ್ನು ಹೊಂದಿದೆ. ಕೆಲವೆಡೆ ಸೇತುವೆ ಹಾಗೂ ಅಂಡರ್‌ಪಾಸ್‌ ನಿರ್ಮಾಣಕ್ಕೆ ಗ್ರಾಮಸ್ಥರು ಒತ್ತಾಯಿಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಮಣಿಪಾಲ್‌ ಬಳಿ ಫ್ಲೈಓವರ್‌ ಯಾವಾಗ?: ''ಭೂ ಸ್ವಾಧೀನ ಪ್ರಕ್ರಿಯೆ ವಿಳಂಬದಿಂದ ಫ್ಲೈಓವರ್‌ ಕೆಲಸ ಸ್ವಲ್ಪ ತಡವಾಗಿದೆ. ಮಣಿಪಾಲ್‌ ಆಸ್ಪತ್ರೆ ಸಮೀಪದಿಂದ ಮೈಸೂರು ನಗರದೊಳಗೆ ಬರುವಂತೆ ಫ್ಲೈಓವರ್‌ ಕಾಮಗಾರಿಯನ್ನು ಡಿಸೈನ್‌ ಮಾಡಲಾಗಿದೆ. ಕೇಂದ್ರದಿಂದ ಅನುಮತಿ ಸಿಕ್ಕ ಕೂಡಲೇ ಈಗಿರುವ ಗುತ್ತಿಗೆದಾರರಿಗೆ ಕೆಲಸ ಒಪ್ಪಿಸಿದರೆ ಫ್ಲೈಓವರ್‌ ಕೆಲಸ ಮುಗಿಯಲು 6 ತಿಂಗಳು ಬೇಕು. ಟೆಂಡರ್‌ ಕರೆದು ಬೇರೆಯವರಿಗೆ ನೀಡಿದರೆ ಮತ್ತಷ್ಟು ತಡವಾಗಬಹುದು,'' ಎನ್ನುತ್ತಾರೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕ ಶ್ರೀಧರ್‌.

ಬಾಕಿ ಕೆಲಸಗಳೇನು?
  • ಮಂಡ್ಯ ಬೂದನೂರು, ಹನಕೆರೆ ಹತ್ತಿರ, ಗೌಡಳ್ಳಿ ಸೇರಿದಂತೆ ಕೆಲವು ಪ್ರದೇಶದಲ್ಲಿಸಣ್ಣಪುಟ್ಟ ಕೆಲಸ ಬಾಕಿ ಇದೆ.
  • ಕೆಲವೆಡೆ ಕೆನಾಲ, ಅಂಡರ್‌ ಪಾಸ್‌ ಕೆಲಸ ಪೂರ್ಣಗೊಳ್ಳಬೇಕಿದೆ. ಹಾಗಾಗಿ ಆ ಭಾಗಗಳಿಗೆ ಪರ್ಯಾಯ ವ್ಯವಸ್ಥೆ.
  • ಕಾಮಗಾರಿ ಮುಗಿಸಲು ನಿರ್ದಿಷ್ಟ ಗುರಿ ಇಟ್ಟುಕೊಂಡು ಕೆಲಸ ಮಾಡುತ್ತಿದ್ದೇವೆ. ಡಿಸೆಂಬರ್‌ ಒಳಗೆ ಮಂಡ್ಯ ಬೈಪಾಸ್‌ ಕಾಮಗಾರಿ ಪೂರ್ಣಗೊಳಿಸಲಾಗುವುದು. ಅಲ್ಲಿಗೆ ಮೂರು ಬೈಪಾಸ್‌ ಕೆಲಸ ಸಂಪೂರ್ಣಗೊಳ್ಳಲಿದ್ದು, ವಾಹನ ಸವಾರರು 75ರಿಂದ 80 ನಿಮಿಷಗಳಲ್ಲಿ ಬೆಂಗಳೂರು-ಮೈಸೂರು ತಲುಪಬಹುದು ಎಂದು ಸಂಸದ ಪ್ರತಾಪಸಿಂಹ ಹೇಳಿದ್ದಾರೆ.
ಲೇಖಕರ ಬಗ್ಗೆ
ಸೌಮ್ಯಶ್ರೀ ಮಾರ್ನಾಡ್
ವಿಜಯ ಕರ್ನಾಟಕ ಡಿಜಿಟಲ್ ವಿಭಾಗದಲ್ಲಿ ಪತ್ರಕರ್ತೆಯಾಗಿ ಕೆಲಸ ಮಾಡುತ್ತಿದ್ದಾರೆ. ಡಿಜಿಟಲ್ ಹಾಗೂ ಎಲೆಕ್ಟ್ರಾನಿಕ್ ಮಾಧ್ಯಮದಲ್ಲಿ ವರದಿಗಾರರಾಗಿ 7 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ರಾಜಕೀಯ, ನಾಗರಿಕರ ಸಮಸ್ಯೆಗಳು, ಬೆಂಗಳೂರು ಸ್ಥಳೀಯ ಆಡಳಿತದ ಕುಂದುಕೊರತೆಗಳ ವರದಿ, ವಿಶೇಷ ವ್ಯಕ್ತಿಗಳ ಸಂದರ್ಶನಗಳನ್ನು ಮಾಡುತ್ತಿದ್ದಾರೆ. ರಂಗಭೂಮಿ ಹಾಗೂ ಯಕ್ಷಗಾನ ಇವರ ಇತರ ಆಸಕ್ತಿಕರ ಕ್ಷೇತ್ರಗಳು.... ಇನ್ನಷ್ಟು ಓದಿ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ