ಆ್ಯಪ್ನಗರ

ನೋಡ ನೋಡುತ್ತಿದ್ದಂತೆ ಕುರಿ ಹೊತೊಯ್ದ ಹುಲಿ

ತಾಲೂಕಿನ ಕಚುವಿನಹಳ್ಳಿಯಲ್ಲಿ ನಾಗರಹೊಳೆ ರಾಷ್ಟ್ರೀಯ ಉದ್ಯಾನದಂಚಿನಲ್ಲಿ ಸಾಕು ಪ್ರಾಣಿಗಳ ಮೇಲೆ ಹುಲಿ ದಾಳಿ ಮುಂದುವರಿದಿದ್ದು, ಹಾಡಹಗಲೇ ಹುಲಿ ಪ್ರತ್ಯಕ್ಷ ವಾಗಿ ಕುರಿಯೊಂದನ್ನು ಹೊತ್ತೊಯ್ದು ಕೊಂದು ಹಾಕಿದೆ.

Vijaya Karnataka 2 Mar 2019, 5:00 am
ಹುಣಸೂರು: ತಾಲೂಕಿನ ಕಚುವಿನಹಳ್ಳಿಯಲ್ಲಿ ನಾಗರಹೊಳೆ ರಾಷ್ಟ್ರೀಯ ಉದ್ಯಾನದಂಚಿನಲ್ಲಿ ಸಾಕು ಪ್ರಾಣಿಗಳ ಮೇಲೆ ಹುಲಿ ದಾಳಿ ಮುಂದುವರಿದಿದ್ದು, ಹಾಡಹಗಲೇ ಹುಲಿ ಪ್ರತ್ಯಕ್ಷ ವಾಗಿ ಕುರಿಯೊಂದನ್ನು ಹೊತ್ತೊಯ್ದು ಕೊಂದು ಹಾಕಿದೆ.
Vijaya Karnataka Web the tiger carrying the sheep
ನೋಡ ನೋಡುತ್ತಿದ್ದಂತೆ ಕುರಿ ಹೊತೊಯ್ದ ಹುಲಿ


ತಾಲೂಕಿನ ಹನಗೋಡು ಹೋಬಳಿಯ ಕಾಡಂಚಿನ ಗ್ರಾಮವಾದ ಕಚುವಿನಹಳ್ಳಿ ಮಾದೇಗೌಡರಿಗೆ ಸೇರಿದ ಕುರಿಗಳನ್ನು ತಮ್ಮ ಜಮೀನಿನಲ್ಲಿ ಮೇಯಿಸುತ್ತಿದ್ದ ವೇಳೆ ಹಠಾತ್‌ ಹುಲಿ ದಾಳಿ ನಡೆಸಿ ಕುರಿಯನ್ನು ಹೊತ್ತೊಯ್ದಿದೆ. ಇದನ್ನು ಕಣ್ಣಾರೆ ಕಂಡ ಅಕ್ಕಪಕ್ಕದ ಜಮೀನಿನವರು ಈ ಸಂದರ್ಭ ಕೂಗಿಕೊಂಡರಾದರೂ ಪ್ರಯೋಜನವಾಗಲಿಲ್ಲ.

ವಿಷಯ ತಿಳಿದ ಅರಣ್ಯ ಇಲಾಖೆ ವನ್ಯಜೀವಿ ವಿಭಾಗದ ಸಿಬ್ಬಂದಿ ಆರ್‌ಎಫ್‌ಒ ಸುರೇಂದ್ರ ಅವರ ಮಾರ್ಗದರ್ಶನದಲ್ಲಿ ಹುಲಿ ಓಡಾಡುತ್ತಿದೆ ಎನ್ನಲಾಗಿರುವ ಶೆಟ್ಟಹಳ್ಳಿ ಲಕ್ಕಪಟ್ಟಣ ಸಾಮಾಜಿಕ ಅರಣ್ಯ ಪ್ರದೇಶದಲ್ಲಿ ಬೋನಿರಿಸಿದ್ದಾರೆ. ಎರಡು ತಿಂಗಳ ಹಿಂದಷ್ಟೆ ಇದೇ ಭಾಗದಲ್ಲಿ ಉರುಳಿಗೆ ಸಿಲುಕಿಕೊಂಡಿದ್ದ ಹುಲಿ ಮರಿಯನ್ನು ರಕ್ಷಿಸಿದ ಅರಣ್ಯಾಧಿಕಾರಿಗಳು ಹಿರಿಯ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಕೂರ್ಗಳ್ಳಿ ಪುನರ್ವಸತಿ ಕೇಂದ್ರದಲ್ಲಿ ಆಶ್ರಯ ಕಲ್ಪಿಸಿದ್ದರು.

ಆರು ತಿಂಗಳಿನಿಂದ ಆಗಾಗ್ಗೆ ಕೆಜಿ ಹಬ್ಬನಕುಪ್ಪೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ಹುಲಿ ಕಾಣಿಸಿಕೊಳ್ಳುತ್ತಿದ್ದು, ಹತ್ತಾರು ಕುರಿಗಳು-ಜಾನುವಾರುಗಳನ್ನು ಕೊಂದು ಹಾಕಿದೆ. ಅಲ್ಲದೆ ಜಮೀನುಗಳಲ್ಲೂ ಪ್ರತ್ಯಕ್ಷ ವಾಗುತ್ತಿದ್ದು, ಹುಲಿಯನ್ನು ಸೆರೆ ಹಿಡಿದು ಪ್ರಾಣ ಹಾನಿ ತಪ್ಪಿಸುವಂತೆ ಅರಣ್ಯ ಇಲಾಖೆಯ ಅಧಿಕಾರಿಗಳನ್ನು ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ