ಆ್ಯಪ್ನಗರ

ಮೂವರು ಖದೀಮರ ಬಂಧನ: ನಗದು, ಚಿನ್ನಾಭರಣ ವಶ

ಪ್ರತ್ಯೇಕ ಪ್ರಕರಣದಲ್ಲಿ ಮೂವರು ಖದೀಮರನ್ನು ಬಂಧಿಸಿರುವ ಲಷ್ಕರ್‌ ಠಾಣೆ ಪೊಲೀಸರು ಲಕ್ಷಾಂತರ ರೂ. ಮೌಲ್ಯದ ನಗದು, ಚಿನ್ನಾಭರಣ ವಶಪಡಿಸಿಕೊಂಡಿದ್ದಾರೆ.

Vijaya Karnataka 21 Feb 2019, 5:00 am
ಮೈಸೂರು: ಪ್ರತ್ಯೇಕ ಪ್ರಕರಣದಲ್ಲಿ ಮೂವರು ಖದೀಮರನ್ನು ಬಂಧಿಸಿರುವ ಲಷ್ಕರ್‌ ಠಾಣೆ ಪೊಲೀಸರು ಲಕ್ಷಾಂತರ ರೂ. ಮೌಲ್ಯದ ನಗದು, ಚಿನ್ನಾಭರಣ ವಶಪಡಿಸಿಕೊಂಡಿದ್ದಾರೆ.
Vijaya Karnataka Web three arrested
ಮೂವರು ಖದೀಮರ ಬಂಧನ: ನಗದು, ಚಿನ್ನಾಭರಣ ವಶ


ಮಡಿಕೇರಿಯ ತ್ಯಾಗರಾಜ ಕಾಲನಿ ನಿವಾಸಿ ಮಹಮ್ಮದ್‌ ಇಮ್ರಾನ್‌ (37), ಸರಗೂರು ಗ್ರಾಮದ ನಿವಾಸಿ ಜಯರಾಮ್‌ ಅಲಿಯಾಸ್‌ ನಿಖಿಲ್‌ (22), ಬೆಂಗಳೂರಿನ ವಾಲ್ಮೀಕಿನಗರ ನಿವಾಸಿ ಇಮ್ರಾನ್‌ ಖಾನ್‌ (32) ಬಂಧಿತರಾಗಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಮನೆ ಕಳ್ಳತನ ಆರೋಪಿಯಾದ ಇಮ್ರಾನ್‌ಖಾನ್‌ನಿಂದ 2.1 ಲಕ್ಷ ರೂ. ಮೌಲ್ಯದ 70 ಗ್ರಾಂ ಚಿನ್ನದ ಸರವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಈತನನ್ನು ವಿಚಾರಣೆಗೊಳಪಡಿಸಿದಾಗ, ಲಷ್ಕರ್‌ ಠಾಣೆ ವ್ಯಾಪ್ತಿಯ ಹಳ್ಳದಕೇರಿ ಮನೆಯೊಂದರಲ್ಲಿ ಕಳ್ಳತನ ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ.

ಮೊಬೈಲ್‌ ಕಳ್ಳ ಜಯರಾಮ್‌ನಿಂದ 49 ಸಾವಿರ ರೂ. ಮೌಲ್ಯದ ಮೊಬೈಲ್‌ ವಶಪಡಿಸಿಕೊಳ್ಳಲಾಗಿದೆ. ಫೆ.16ರಂದು ಮೈಸೂರಿನ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದಲ್ಲಿ ಗಣೇಶ್‌ ಎಂಬುವವರ ಮೊಬೈಲ್‌ ಫೋನ್‌ ಕಳ್ಳತನವಾಗಿದ್ದ ಬಗ್ಗೆ ಲಷ್ಕರ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಫೆ.18ರಂದು ಕೆ.ಟಿ. ಸ್ಟ್ರೀಟ್‌ನಲ್ಲಿ ಮೊಬೈಲನ್ನು ಕಡಿಮೆ ಹಣಕ್ಕೆ ಮಾರಾಟ ಮಾಡಲು ಆರೋಪಿ ಯತ್ನಿಸುತ್ತಿದ್ದಾಗ ಪೊಲೀಸರಿಗೆ ಸಿಕ್ಕಿ ಬಿದ್ದಿದ್ದಾನೆ.

ಮನೆ ಕಳ್ಳತನ ಹಾಗೂ ಬಸ್‌ಗಳಲ್ಲಿ ಪ್ರಯಾಣಿಕರ ಬ್ಯಾಗ್‌ ಕಳವು ಮಾಡುತ್ತಿದ್ದ ಮಹಮ್ಮದ್‌ ಇಮ್ರಾನ್‌ನಿಂದ 4,35,000 ರೂ. ಮೌಲ್ಯದ ಚಿನ್ನಾಭರಣ ವಶಪಡಿಸಿಕೊಳ್ಳಲಾಗಿದೆ. ಫೆ.18ರಂದು ಗ್ರಾಮಾಂತರ ಬಸ್‌ ನಿಲ್ದಾಣದಲ್ಲಿ ಅನುಮಾನಾಸ್ಪದವಾಗಿ ಬಸ್‌ಗಳನ್ನು ಹತ್ತುವುದು ಮತ್ತು ಇಳಿಯುವುದು ಮಾಡುತ್ತಿದ್ದಾಗ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಆರೋಪಿಯು ಲಷ್ಕರ್‌ ಠಾಣಾ ವ್ಯಾಪ್ತಿಯ ಹಳ್ಳದಕೇರಿಯ ಮನೆಯೊಂದರಲ್ಲಿ ಚಿನ್ನಾಭರಣ ಕಳ್ಳತನ ಮಾಡಿದ್ದು, ಗ್ರಾಮಾಂತರ ಬಸ್‌ ನಿಲ್ದಾಣದಲ್ಲಿ ಮಂಗಳೂರು ಕಡೆಗೆ ಹೋಗುವ ಬಸ್‌ನಿಂದ ಪ್ರಯಾಣಿಕರ ಚಿನ್ನಾಭರಣದ್ದ ಬ್ಯಾಗನ್ನು ಕಳ್ಳತನ ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ.

ಈ ಪತ್ತೆ ಕಾರ್ಯದಲ್ಲಿ ಲಷ್ಕರ್‌ ಪೊಲೀಸ್‌ ಠಾಣೆಯ ಇನ್ಸ್‌ಪೆಕ್ಟರ್‌ ಮುನಿಯಪ್ಪ ಎನ್‌, ಎಸ್‌ಐ ಪೂಜಾ, ಎಎಸ್‌ಐ ಶ್ರೀನಿವಾಸ್‌, ಮಹದೇವಪ್ಪ, ಸಿಬ್ಬಂದಿಗಳಾದ ಪರಶಿವಮೂರ್ತಿ, ಲೋಕೇಶ, ಪ್ರದೀಪ್‌, ಸಿದ್ದರಾಜು, ಶಿವಶಂಕರ್‌ ಮೂರ್ತಿ, ಸಿದ್ದಯ್ಯ, ರಮೇಶ್‌ ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ