ಆ್ಯಪ್ನಗರ

ಜಾನುವಾರು ಭಕ್ಷಿಸುತ್ತಿದ್ದ ಹುಲಿ ಸೆರೆ

ಅರಣ್ಯ ಇಲಾಖೆ ಸಿಬ್ಬಂದಿ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ಅರಣ್ಯ ಸಂರಕ್ಷಣಾಧಿಕಾರಿ ಹಾಗೂ ನಿರ್ದೇಶಕ ಟಿ.ಬಾಲಚಂದ್ರ ನೇತೃತ್ವದಲ್ಲಿ ಸಾಕಾನೆಗಳ ಸಹಾಯದಿಂದ ಕಾರ್ಯಾಚರಣೆ ನಡೆಸಿ ಹುಲಿಗೆ ಅರವಳಿಕೆ ಚುಚ್ಚುಮದ್ದು ನೀಡಿ ಸೆರೆ ಹಿಡಿದಿದ್ದಾರೆ.

Vijaya Karnataka Web 8 Sep 2020, 10:56 pm
ಸರಗೂರು: ತಾಲೂಕಿನ ಎನ್‌. ಬೇಗೂರು ಅರಣ್ಯ ವ್ಯಾಪ್ತಿಯ ಕಾಡಂಚಿನ ಪ್ರದೇಶಗಳಲ್ಲಿ ಜಾನುವಾರುಗಳನ್ನು ಕೊಂದು ಭೀತಿ ಹುಧಿಸಿದ್ದ 10 ವರ್ಷದ ಗಂಡು ಹುಲಿಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿ ದ್ದಾರೆ. ಸೆರೆಯಾದ ಹುಲಿಯನ್ನು ಬನ್ನೇರುಘಟ್ಟ ವನ್ಯಜೀವಿ ಪುನರ್ವಸತಿ ಕೇಂದ್ರಕ್ಕೆ ರವಾನಿಸಲಾಗಿದೆ.
Vijaya Karnataka Web ಹುಲಿ ಸೆರೆ
ಹುಲಿ ಸೆರೆ


ಎರಡು ದಿನಗಳ ಹಿಂದೆ ಹೆಗ್ಗನೂರು ಗ್ರಾಮದ ಮಹದೇವೇಗೌಡ ಎಂಬು ವವರ ಹಸುವನ್ನು ಹುಲಿ ಕೊಂದು ತಿಂದಿತ್ತು. ಇದಲ್ಲದೆ ಕಳಸೂರು- ಮೂರ್‌ಬಂದ್‌ ಸೇರಿದಂತೆ ಸುತ್ತಮುತ್ತಲ ಗ್ರಾಮದಲ್ಲಿ ಹುಲಿ ಸಂಚರಿಸುತ್ತಿರುವ ಸುಳಿವು ಲಭ್ಯವಾಗಿತ್ತು. ಇದನ್ನು ಬೆನ್ನತ್ತಿದ ಅರಣ್ಯ ಇಲಾಖೆ ಸಿಬ್ಬಂದಿ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ಅರಣ್ಯ ಸಂರಕ್ಷಣಾಧಿಕಾರಿ ಹಾಧಿಗೂ ನಿರ್ದೇಶಕ ಟಿ.ಬಾಲಚಂದ್ರ ನೇತೃತ್ವದಲ್ಲಿಸಾಕಾನೆ ಗಳ ಸಹಾಯದಿಂದ ಕಾರ್ಯಾಚರಣೆ ನಡೆಸಿ ಹುಲಿಗೆ ಅರಿವಳಿಕೆ ಚುಚ್ಚುಮದ್ದು ನೀಡಿ ಸೆರೆ ಹಿಡಿದಿದ್ದಾರೆ.

ಜಾನುವಾರು ಭಕ್ಷಿಸುತ್ತಿದ್ದ ಹುಲಿ: ಕಾಡಂಚಿನ ಗ್ರಾಮಗಳಲ್ಲಿ ಜಾನುವಾರು ಗಳ ಮೇಲೆ ಹುಲಿ ದಾಳಿಯಿಂದ ಭಯಗೊಂಡ ಜನತೆ ಅರಣ್ಯ ಇಲಾಖೆಗೆ ವಿಷಯ ತಿಳಿಸಿ, ಸೆರೆ ಹಿಡಿಯುವಂತೆ ಆಗ್ರಹಿಸಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ