ಆ್ಯಪ್ನಗರ

ರಂಗಾಯಣ ಆವರಣದಲ್ಲಿ ಇಂದು ಚಿತ್ರಕಲೆ, ಪ್ರಬಂಧ ಸ್ಪರ್ಧೆ

ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಜಿಲ್ಲಾಡಳಿತ, ವಿಜಯ ಕರ್ನಾಟಕ ಹಾಗೂ ಜನ ಜಾಗೃತಿ ಗ್ರಾಮೀಣ ಅಭಿವೃದ್ಧಿ ಸಂಸ್ಥೆ ಮೈಸೂರು ಇವರ ಸಹಯೋಗದೊಂದಿಗೆ ವಿಶ್ವ ಪರಿಸರ ದಿನದ ಅಂಗವಾಗಿ ಶಾಲಾ ಮಕ್ಕಳಿಗೆ ಜೂನ್‌ 1ರಂದು ಬೆಳಗ್ಗೆ 9.30ರಿಂದ 12ರವರೆಗೆ ರಂಗಾಯಣ ಆವರಣದಲ್ಲಿ ಚಿತ್ರಕಲಾ ಸ್ಪರ್ಧೆ ಹಾಗೂ ಪ್ರಬಂಧ ಸ್ಪರ್ಧೆ ಆಯೋಜಿಸಲಾಗಿದೆ.

Vijaya Karnataka 1 Jun 2019, 5:00 am
ಮೈಸೂರು: ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಜಿಲ್ಲಾಡಳಿತ, ವಿಜಯ ಕರ್ನಾಟಕ ಹಾಗೂ ಜನ ಜಾಗೃತಿ ಗ್ರಾಮೀಣ ಅಭಿವೃದ್ಧಿ ಸಂಸ್ಥೆ ಮೈಸೂರು ಇವರ ಸಹಯೋಗದೊಂದಿಗೆ ವಿಶ್ವ ಪರಿಸರ ದಿನದ ಅಂಗವಾಗಿ ಶಾಲಾ ಮಕ್ಕಳಿಗೆ ಜೂನ್‌ 1ರಂದು ಬೆಳಗ್ಗೆ 9.30ರಿಂದ 12ರವರೆಗೆ ರಂಗಾಯಣ ಆವರಣದಲ್ಲಿ ಚಿತ್ರಕಲಾ ಸ್ಪರ್ಧೆ ಹಾಗೂ ಪ್ರಬಂಧ ಸ್ಪರ್ಧೆ ಆಯೋಜಿಸಲಾಗಿದೆ.
Vijaya Karnataka Web todays painting essay competition on rangayana premises
ರಂಗಾಯಣ ಆವರಣದಲ್ಲಿ ಇಂದು ಚಿತ್ರಕಲೆ, ಪ್ರಬಂಧ ಸ್ಪರ್ಧೆ


ನಮ್ಮ ಸುತ್ತಮುತ್ತಲಿನ ಪರಿಸರ ಸಂರಕ್ಷಣೆ ಎಷ್ಟು ಮುಖ್ಯ, ಅದನ್ನು ಹೇಗೆ ಉಳಿಸಿಕೊಳ್ಳಬೇಕೆಂಬುದನ್ನು ವಿದ್ಯಾರ್ಥಿ ದಿಸೆಯಿಂದಲೇ ಅರಿವು ಮೂಡಿಸಲು ಈ ಸ್ಪರ್ಧೆ ಹಮ್ಮಿಕೊಳ್ಳಲಾಗಿದೆ.

ಒಂದರಿಂದ 10ನೇ ತರಗತಿವರೆಗಿನ ಮಕ್ಕಳಿಗೆ 'ವಾಯು ಮಾಲಿನ್ಯ ತಡೆಯಿರಿ' ಎಂಬ ವಿಷಯದ ಕುರಿತು ಚಿತ್ರಕಲಾ ಸ್ಪರ್ಧೆ ಏರ್ಪಡಿಸಲಾಗಿದೆ. 8ರಿಂದ 10ನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ ಇದೇ ವಿಷಯದ ಮೇಲೆ ಚಿತ್ರಕಲೆ ಮತ್ತು ಪ್ರಬಂಧ ಸ್ಪರ್ಧೆಯಲ್ಲಿ ಭಾಗವಹಿಸಲು ಅವಕಾಶವಿದೆ. ಹೆಚ್ಚಿನ ಮಾಹಿತಿಗೆ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಸಹಾಯಕ ಪರಿಸರ ಅಧಿಕಾರಿಗಳಾದ ಸಬಿಕೆ ನೂಬಿಯ (ಮೊ.9538912357), ಅಶ್ವಿನಿ (ಮೊ.9742345840), ಮಂಜು (9980241122).

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ