ಆ್ಯಪ್ನಗರ

ಮೈಸೂರಿನ ಕೋವಿಡ್‌ ಆಸ್ಪತ್ರೆಯಲ್ಲಿ ಆಹಾರ ದುರುಪಯೋಗ ತಡೆಗೆ ಟೋಕನ್‌

ಕೊರೊನಾ ಸೋಂಕಿತರಿಗೆ ನೀಡುತ್ತಿರುವ ಆಹಾರ ದುರುಪಯೋಗವಾಗುವುದನ್ನು ತಪ್ಪಿಸಲು ಮೈಸೂರು ಜಿಲ್ಲಾ ಕೋವಿಡ್‌ ಆಸ್ಪತ್ರೆಯಲ್ಲಿ ಟೋಕನ್‌ ವ್ಯವಸ್ಥೆ ಜಾರಿ ಮಾಡಲಾಗಿದೆ.

Vijaya Karnataka Web 25 Sep 2020, 1:10 pm
ಹರೀಶ ಎಲ್‌.ತಲಕಾಡು
Vijaya Karnataka Web mysuru


ಮೈಸೂರು: ಕೊರೊನಾ ಸೋಂಕಿತರಿಗೆ ನೀಡುತ್ತಿರುವ ಆಹಾರ ದುರುಪಯೋಗವಾಗುವುದನ್ನು ತಪ್ಪಿಸಲು ಮೈಸೂರು ಜಿಲ್ಲಾ ಕೋವಿಡ್‌ ಆಸ್ಪತ್ರೆಯಲ್ಲಿ ಟೋಕನ್‌ ವ್ಯವಸ್ಥೆ ಜಾರಿಗೆ ತರಲಾಗಿದೆ. ಮೈಸೂರು ನಗರದ ಮೇಟಗಳ್ಳಿಯಲ್ಲಿರುವ ಕೋವಿಡ್‌ ಆಸ್ಪತ್ರೆಯಲ್ಲಿ 250ಕ್ಕೂ ಹೆಚ್ಚು ಮಂದಿ ಸೋಂಕಿತರು ದಾಖಲಾಗಿದ್ದಾರೆ. ಇವರಿಗೆ ಚಿಕಿತ್ಸೆ ನೀಡುವುದರೊಂದಿಗೆ ಆಸ್ಪತ್ರೆಯ ನಿರ್ವಹಣೆಗಾಗಿ 50ಕ್ಕೂ ಹೆಚ್ಚು ಮಂದಿ ವೈದ್ಯರು, ದಾದಿಯರು ಮತ್ತು ಡಿ.ಗ್ರೂಪ್‌ ನೌಕರರು ಕೊರೊನಾ ವಾರಿಯರ್ಸ್‌ಗಳಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.

ಪ್ರತಿ ದಿನ 300ರಿಂದ 350 ಮಂದಿಯವರೆಗೆ ಊಟದ ವ್ಯವಸ್ಥೆ ಮಾಡಲಾಗುತ್ತಿದೆ. ಆಸ್ಪತ್ರೆಯಲ್ಲಿರುವ ರೋಗಿಗಳು ಮತ್ತು ಕರ್ತವ್ಯ ನಿರ್ವಹಿಸುತ್ತಿರುವ ವೈದ್ಯರು ಮತ್ತು ಸಿಬ್ಬಂದಿ ಸಂಖ್ಯೆಗೆ ಅನುಗುಣವಾಗಿ ಆಹಾರ ಪೂರೈಕೆಯಾಗುತ್ತಿದ್ದರೂ, ಕೊನೆಯಲ್ಲಿ ಪಡೆಯುವವರಿಗೆ ಸರಿಯಾಗಿ ಊಟ-ತಿಂಡಿ ಸಿಗುತ್ತಿರಲಿಲ್ಲ. ನಿಗದಿಗಿಂತ ಕಡಿಮೆ ಪ್ರಮಾಣದಲ್ಲಿಆಹಾರ ಪೂರೈಕೆಯಾಗುತ್ತಿದೆ ಎಂದು ದೂರು ಕೇಳಿ ಬಂದಿತ್ತು.

ಈ ಬಗ್ಗೆ ಪರಿಶೀಲನೆ ನಡೆಸಿದ ಆಸ್ಪತ್ರೆಯ ಮೇಲ್ವಿಚಾರಕರಾದ ಡಾ. ರಾಜೇಶ್ವರಿ ಅವರು, ಕೆಲವರು ಒಂದಕ್ಕಿಂತ ಹೆಚ್ಚು ಆಹಾರದ ಪ್ಯಾಕ್‌ ತೆಗೆದುಕೊಂಡು ಹೋಗುತ್ತಿರುವುದು ಗಮನಕ್ಕೆ ಬಂದಿದೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಆಹಾರ ದುರುಪಯೋಗವಾಗುವುದನ್ನು ತಪ್ಪಿಸಲು ಟೋಕನ್‌ ವ್ಯವಸ್ಥೆ ಮಾಡಿದ್ದಾರೆ. ಆಸ್ಪತ್ರೆಯಲ್ಲಿ ದಾಖಲಾಗಿರುವ ರೋಗಿಗಳಿಗೆ ಬೆಳಗ್ಗೆ ತಿಂಡಿ, ಮಧ್ಯಾಹ್ನ ಮತ್ತು ರಾತ್ರಿ ಊಟದ ಟೋಕನ್‌ ನೀಡಲಾಗುತ್ತಿದ್ದು, ಜತೆಗೆ ಕರ್ತವ್ಯ ನಿರ್ವಹಿಸುತ್ತಿರುವ ವೈದ್ಯರು, ಸಿಬ್ಬಂದಿ ಮತ್ತು ಡಿ ಗ್ರೂಪ್‌ ನೌಕರರಿಗೆ ಮುಂಚಿತವಾಗಿ ಟೋಕನ್‌ ನೀಡಲಾಗುತ್ತಿದೆ. ಇದರಿಂದ ಆಹಾರ ದುರುಪಯೋಗವಾಗುವುದರೊಂದಿಗೆ ಒಬ್ಬರೇ ಹೆಚ್ಚುವರಿ ಆಹಾರ ಪಡೆಯುವುದನ್ನು ತಪ್ಪಿಸಲು ಈ ವ್ಯವಸ್ಥೆ ಮಾಡಲಾಗಿದೆ ಎನ್ನುತ್ತಾರೆ ಆಸ್ಪತ್ರೆಯ ಉಸ್ತುವಾರಿ ಡಾ.ರಾಜೇಶ್ವರಿ.

ರೈತ ಸಂಘಟನೆಗಳಿಂದ ಭುಗಿಲೆದ್ಧ ಪ್ರತಿಭಟನೆ: ಬಸ್ ಗಳಿಗೆ ಕಲ್ಲು ತೂರಾಟ, ರೈತರ ಬಂಧನ

ಪ್ರತ್ಯೇಕ ಆಹಾರ: ಆಸ್ಪತ್ರೆಯಲ್ಲಿ ದಾಖಲಾಗಿರುವ ಕೊರೊನಾ ಸೋಂಕಿತರಲ್ಲಿ ಬಹುತೇಕ ಮಂದಿ ಗಂಭೀರ ಸ್ಥಿತಿಯಲ್ಲಿದ್ದು, ಮಧುಮೇಹ ಮತ್ತು ರಕ್ತದೊತ್ತಡ ಸೇರಿದಂತೆ ಇತರೆ ಕಾಯಿಲೆಗಳಿಂದ ಬಳಲುತ್ತಿರುವವರ ಸಂಖ್ಯೆ ಹೆಚ್ಚಿದೆ. ಅವರಿಗೆ ಸಾಮಾನ್ಯ ರೋಗಿಗಳಿಗೆ ನೀಡುವ ಆಹಾರ ತಿನ್ನಲು ಸಾಧ್ಯವಿಲ್ಲಎಂಬುದನ್ನು ಮನಗಂಡ ಆಸ್ಪತ್ರೆ ವೈದ್ಯರು, ಪ್ರತ್ಯೇಕವಾಗಿ ಮಸಾಲೆ ಪದಾರ್ಥ ಮುಕ್ತವಾದ ಆಹಾರ ಸಿದ್ಧಪಡಿಸಿ ನೀಡುವಂತಹ ವ್ಯವಸ್ಥೆ ಮಾಡಲಾಗಿದೆ. ಗಂಭೀರ ಸ್ಥಿತಿಯ ರೋಗಿಗಳಿಗೆ ಸಪ್ಪೆ ಸಾರು, ಗಂಜಿ, ಇಡ್ಲಿಸೇರಿದಂತೆ ದ್ರವ ಆಹಾರವನ್ನು ಸಿದ್ಧಪಡಿಸಿ ನೀಡಲಾಗುತ್ತಿದೆ ಎನ್ನುತ್ತಾರೆ ಆಸ್ಪತ್ರೆಯ ವೈದ್ಯರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ