ಆ್ಯಪ್ನಗರ

ಟ್ರ್ಯಾಕ್ಟರ್‌ ಡಿಕ್ಕಿ: ಇಬ್ಬರ ಸಾವು

ತಾಲೂಕಿನ ಬಡಗಲಪುರ ಗ್ರಾಮದ ಸಮೀಪ ಅತಿ ವೇಗವಾಗಿ ಚಲಿಸುತ್ತಿದ್ದ ಟ್ರ್ಯಾಕ್ಟರ್‌ವೊಂದು ಬೈಕ್‌ಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮೃತಪಟ್ಟು, ಒಬ್ಬರು ಗಾಯಗೊಂಡರು.

Vijaya Karnataka 14 May 2019, 5:00 am
ಸರಗೂರು: ತಾಲೂಕಿನ ಬಡಗಲಪುರ ಗ್ರಾಮದ ಸಮೀಪ ಅತಿ ವೇಗವಾಗಿ ಚಲಿಸುತ್ತಿದ್ದ ಟ್ರ್ಯಾಕ್ಟರ್‌ವೊಂದು ಬೈಕ್‌ಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮೃತಪಟ್ಟು, ಒಬ್ಬರು ಗಾಯಗೊಂಡರು.
Vijaya Karnataka Web tractor collision two deaths
ಟ್ರ್ಯಾಕ್ಟರ್‌ ಡಿಕ್ಕಿ: ಇಬ್ಬರ ಸಾವು


ನಂಜನಗೂಡು ತಾಲೂಕಿನ ವಡೆಯನಪುರ ಗ್ರಾಮದ ಚಂದ್ರಶೇಖರ(20), ಮನುಕುಮಾರ್‌(20) ಮೃತರು. ಸುನೀಲ್‌ಕುಮಾರ್‌(22) ಗಾಯಾಳು.

ಬಡಗಲಪುರ ಗ್ರಾಮದಿಂದ ಹೆಡಿಯಾಲಕ್ಕೆ ಚಂದ್ರಶೇಖರ್‌, ಮನುಕುಮಾರ್‌ ಇಬ್ಬರು ಬೈಕ್‌ನಲ್ಲಿ ಹೋಗುತ್ತಿದ್ದು, ಸುನೀಲ್‌ಕುಮಾರ್‌ ಎಂಬುವವರು ರಸ್ತೆ ಬದಿಯಲ್ಲಿ ಹೋಗುತ್ತಿದ್ದ ವೇಳೆ ಹಿಂಬದಿಯಿಂದ ವೇಗವಾಗಿ ಬಂದ ಟ್ರ್ಯಾಕ್ಟರ್‌, ಬೈಕ್‌ ಹಾಗೂ ಪಾದಚಾರಿಗೆ ಡಿಕ್ಕಿ ಹೊಡೆದಿದೆ. ಇದರಿಂದಾಗಿ ಚಂದ್ರಶೇಖರ್‌ ಸ್ಥಳದಲ್ಲೇ ಮೃತಪಟ್ಟರೆ, ಗಂಭೀರವಾಗಿ ಗಾಯಗೊಂಡಿದ್ದ ಮನುಕುಮಾರ್‌ ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯೆ ಮೃತಪಟ್ಟರು. ಗಾಯಗೊಂಡ ಸುನೀಲ್‌ ಕುಮಾರ್‌ ಮೈಸೂರಿನ ಕೆ.ಆರ್‌.ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಸರಗೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ