ಆ್ಯಪ್ನಗರ

ಎರಡು ಕಾರು- ಬೈಕ್‌ ಡಿಕ್ಕಿ: 7 ಮಂದಿಗೆ ಗಂಭೀರ ಗಾಯ

ತಾಲೂಕಿನ ಅಣ್ಣೂರು ಬಳಿಯ ನಂಜನಾಯಕನಹಳ್ಳಿ ಬಳಿ ಹುಣಸೂರು-ಬೇಗೂರು ರಸ್ತೆಯಲ್ಲಿ ಎರಡು ಕಾರು ಮತ್ತು ಬೈಕ್‌ ನಡುವೆ ಅಪಘಾತ ನಡೆದಿದ್ದು, 7 ಮಂದಿಗೆ ಗಂಭೀರ ಗಾಯವಾಗಿದೆ. ಬೈಕ್‌ ಸವಾರರಿಗೂ ಸಣ್ಣ ಪುಟ್ಟ ಗಾಯಗಳಾಗಿದೆ.

Vijaya Karnataka Web 18 Jul 2018, 12:00 am
ಎಚ್‌.ಡಿ.ಕೋಟೆ : ತಾಲೂಕಿನ ಅಣ್ಣೂರು ಬಳಿಯ ನಂಜನಾಯಕನಹಳ್ಳಿ ಬಳಿ ಹುಣಸೂರು-ಬೇಗೂರು ರಸ್ತೆಯಲ್ಲಿ ಎರಡು ಕಾರು ಮತ್ತು ಬೈಕ್‌ ನಡುವೆ ಅಪಘಾತ ನಡೆದಿದ್ದು, 7 ಮಂದಿಗೆ ಗಂಭೀರ ಗಾಯವಾಗಿದೆ. ಬೈಕ್‌ ಸವಾರರಿಗೂ ಸಣ್ಣ ಪುಟ್ಟ ಗಾಯಗಳಾಗಿದೆ.
Vijaya Karnataka Web two car bike crashes 7 seriously injured
ಎರಡು ಕಾರು- ಬೈಕ್‌ ಡಿಕ್ಕಿ: 7 ಮಂದಿಗೆ ಗಂಭೀರ ಗಾಯ


ಮೈಸೂರಿನ ವಿಜಯನಗರದ ನಿವಾಸಿಗಳಾದ ಸಂಜಯ್‌, ರಾಜೇಶ್‌, ಕವನ ಮತ್ತು ರಮ್ಯಾ, ಬಾಲಾಜಿ ಮತ್ತು ದೇವರಾಜು ಹಾಗೂ ಇತರ ಇಬ್ಬರ ಸ್ಥಿತಿ ಗಂಭೀರವಾಗಿದೆ. ಎಲ್ಲರಿಗೂ ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ಪ್ರಾಥಮಿಕ ಚಿಕಿತ್ಸೆ ಕೊಟ್ಟ ನಂತರ ಎಲ್ಲರನ್ನೂ ಮೈಸೂರಿನ ಕೆ.ಆರ್‌. ಆಸ್ಪತ್ರೆಗೆ ಸಾಗಿಸಲಾಗಿದೆ.

ಸಂಜಯ್‌ ಕಾರು ಚಾಲನೆ ಮಾಡುತ್ತಿದ್ದಾಗ ಬೈಕ್‌ಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸುವ ಸಂದರ್ಭದಲ್ಲಿ ಬೈಕ್‌ಗೂ ಡಿಕ್ಕಿ ಹೊಡೆದು, ಮುಂದಿನಿಂದ ಬರುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದಿದ್ದಾರೆ.

ಕಾರು ಸಂಪೂರ್ಣ ಜಖಂಗೊಂಡಿದ್ದು, ಸ್ಥಳೀಯ ಗ್ರಾಮಸ್ಥರು ಕೂಡಲೇ 108 ವಾಹನಕ್ಕೆ ದೂರವಾಣಿ ಮಾಡಿ ಆಸ್ಪತ್ರೆಗೆ ಸಾಗಿಸಿದ್ದಾರೆ. ನಂತರ ಪೋಲಿಸರಿಗೆ ಮಾಹಿತಿ ಕೊಡಲಾಗಿದೆ.

ಪಟ್ಟಣ ಠಾಣೆಯಲ್ಲಿ ದೂರು ದಾಖಲಾಗಿದ್ದು, ತನಿಖೆ ಕೈಗೊಂಡಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ