ಆ್ಯಪ್ನಗರ

ಸಿದ್ದು ಕ್ಷಮೆಯಾಚನೆಗೆ ವಿಜಯೇಂದ್ರ ಆಗ್ರಹ

ಮಾಜಿ ಸಿಎಂ ಸಿದ್ದರಾಮಯ್ಯ ಅವರು ತಿ.ನರಸೀಪುರದಲ್ಲಿ ಮಹಿಳೆಯೊಬ್ಬರ ಜೊತೆ ಅನಾಗರಿಕವಾಗಿ ವರ್ತಿಸಿದ್ದು , ಈ ಕೂಡಲೇ ಆ ಮಹಿಳೆಯ ಕ್ಷಮೆ ಯಾಚಿಸಬೇಕು ಎಂದು ರಾಜ್ಯ ಬಿಜೆಪಿ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಬಿ.ವೈ.ವಿಜಯೇಂದ್ರ ಆಗ್ರಹಿಸಿದ್ದಾರೆ.

Vijaya Karnataka 29 Jan 2019, 5:00 am
ಮೈಸೂರು: ಮಾಜಿ ಸಿಎಂ ಸಿದ್ದರಾಮಯ್ಯ ಅವರು ತಿ.ನರಸೀಪುರದಲ್ಲಿ ಮಹಿಳೆಯೊಬ್ಬರ ಜೊತೆ ಅನಾಗರಿಕವಾಗಿ ವರ್ತಿಸಿದ್ದು , ಈ ಕೂಡಲೇ ಆ ಮಹಿಳೆಯ ಕ್ಷಮೆ ಯಾಚಿಸಬೇಕು ಎಂದು ರಾಜ್ಯ ಬಿಜೆಪಿ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಬಿ.ವೈ.ವಿಜಯೇಂದ್ರ ಆಗ್ರಹಿಸಿದ್ದಾರೆ.
Vijaya Karnataka Web vijayendra demands apology to siddaramaiah
ಸಿದ್ದು ಕ್ಷಮೆಯಾಚನೆಗೆ ವಿಜಯೇಂದ್ರ ಆಗ್ರಹ


ಸಿದ್ದರಾಮಯ್ಯ ಅವರದು ದೌರ್ಜನ್ಯದ ಪರಮಾವಧಿ. ಇಂಥವನ್ನು ನಾವು ಕತೆಗಳಲ್ಲಿ ಕೇಳಿದ್ದೆವು. ಉನ್ನತ ಸ್ಥಾನದಲ್ಲಿರುವ ಒಬ್ಬ ವ್ಯಕ್ತಿ ನಡೆದುಕೊಂಡಿರುವ ರೀತಿ ಅತ್ಯಂತ ಅನಾಗರಿಕವಾಗಿದೆ. ಇದು ಮಹಾಭಾರತದ ದುಶ್ಶಾಸನನ ನಡವಳಿಕೆಯನ್ನು ಮೀರಿಸಿದ್ದು ಎಂದು ಹೇಳಲು ಬೇಸರವಾಗುತ್ತದೆ ಎಂದು ವಿಜಯೇಂದ್ರ ಪತ್ರಿಕಾ ಹೇಳಿಕೆ ನೀಡಿದ್ದಾರೆ.

ಸಿದ್ಧರಾಮಯ್ಯ ಅವರಿಗೇನಾದರೂ ನೈತಿಕತೆ ಇದ್ದರೆ, ಆತ್ಮಗೌರವ ಇದ್ದರೆ ಈ ಕೂಡಲೇ ಆ ಮಹಿಳೆಯ ಕ್ಷ ಮೆ ಯಾಚಿಸಬೇಕು. ಅಷ್ಟೇ ಅಲ್ಲದೆ ಇಡೀ ಮಹಿಳಾ ಸಮುದಾಯದ ಎದುರು ಕ್ಷ ಮೆ ಯಾಚಿಸುವ ಮೂಲಕ ಪ್ರಾಯಶ್ಚಿತ್ತ ಮಾಡಿಕೊಳ್ಳಬೇಕು ಎಂದು ಅವರು ಆಗ್ರಹಿಸಿದ್ದಾರೆ.

ವರುಣಾ ಕ್ಷೇತ್ರದಲ್ಲಿ ಇಂದು ಅರಾಜಕತೆ ಉಂಟಾಗಿದೆ. ಆ ಕ್ಷೇತ್ರದ ಶಾಸಕರಾಗಿರುವ ಡಾ.ಯತೀಂದ್ರ ಜನಪ್ರತಿನಿಧಿಯಾಗಿ ಸಂಪೂರ್ಣ ವಿಫಲರಾಗಿದ್ದಾರೆ ಎಂಬುದನ್ನು ಇಂದಿನ ಘಟನೆ ಸಾಬೀತುಪಡಿಸುತ್ತದೆ ಎಂದು ಅವರು ಹೇಳಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ