ಆ್ಯಪ್ನಗರ

ಪೌರಕಾರ್ಮಿಕರ ಪಾದ ತೊಳೆದರೆ ಪಾಪ ಹೋಗದು

ಪೌರಕಾರ್ಮಿಕರ ಪಾದಪೂಜೆ ಮಾಡಿದ ತಕ್ಷ ಣ ಎಲ್ಲಾ ಪಾಪ ತೊಳೆದು ಹೋಗುವುದಿಲ್ಲ ಎಂದು ಎ.ಮಂಜು ಅವರಿಗೆ ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದ್ದಾರೆ.

Vijaya Karnataka 26 Mar 2019, 5:00 am
ಮೈಸೂರು: ಪೌರಕಾರ್ಮಿಕರ ಪಾದಪೂಜೆ ಮಾಡಿದ ತಕ್ಷ ಣ ಎಲ್ಲಾ ಪಾಪ ತೊಳೆದು ಹೋಗುವುದಿಲ್ಲ ಎಂದು ಎ.ಮಂಜು ಅವರಿಗೆ ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದ್ದಾರೆ.
Vijaya Karnataka Web wash the civilian workers feet they will not go to sin
ಪೌರಕಾರ್ಮಿಕರ ಪಾದ ತೊಳೆದರೆ ಪಾಪ ಹೋಗದು


ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಸೋಮವಾರ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ''ಎ.ಮಂಜು ಅವರ ಜನ್ಮದಲ್ಲಿ ಪೌರಕಾರ್ಮಿಕರ ಸಮಸ್ಯೆ ಕೇಳಿದ್ದಾರೋ ಇಲ್ವೋ ಗೊತ್ತಿಲ್ಲ. ಆದರೆ, ಈ ರೀತಿ ಗಿಮಿಕ್‌ಗಳು ಹಾಸನದಲ್ಲಿ ನಡೆಯುವುದಿಲ್ಲ. ಈ ಹಿಂದೆ ಪ್ರಧಾನಿ ನರೇಂದ್ರ ಮೋದಿ ಯಾರಿಗೋ ಪೌರಕಾರ್ಮಿಕರ ಡ್ರೆಸ್‌ ಹಾಕಿ ಪಾದಪೂಜೆ ಮಾಡಿದ್ದರು. ಸದ್ಯ ಮಂಜು ಇನ್ಯಾರಿಗೆ ಪೌರಕಾರ್ಮಿಕರ ಡ್ರೆಸ್‌ ಹಾಕಿ ಪಾದಪೂಜೆ ಮಾಡಿದ್ದಾರೋ ಗೊತ್ತಿಲ್ಲ,'' ಎಂದು ವ್ಯಂಗ್ಯವಾಡಿದರು.

ತುಮಕೂರಿನಲ್ಲಿ ಮುದ್ದ ಹನುಮೇಗೌಡರ ಬಂಡಾಯ ಇದೆ. ಹೀಗೆ ಕೆಲವು ಕ್ಷೇತ್ರದಲ್ಲಿ ಭಿನ್ನಾಭಿಪ್ರಾಯ ಇರುವುದು ಸಹಜ. ಅದನ್ನ ಶೀಘ್ರದಲ್ಲೇ ಪರಿಹರಿಸಲಾಗುವುದು. ಹೀಗಾಗಿ ಮೈತ್ರಿ ಅಭ್ಯರ್ಥಿಗಳು ಎಲ್ಲೆಡೆ ಜಯ ಗಳಿಸುತ್ತಾರೆ,'' ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ