ಆ್ಯಪ್ನಗರ

ಕಡಕೊಳ ಕೈಗಾರಿಕ ಪ್ರದೇಶಕ್ಕೆ ನೀರು ಪೂರೈಕೆ ಸ್ಥಗಿತ

ಕಪಿಲಾ ನದಿಯಲ್ಲಿ ನೀರಿನ ಹರಿವು ತೀವ್ರ ಪ್ರಮಾಣದಲ್ಲಿ ಹೆಚ್ಚಾಗಿರುವುದರಿಂದ ಕಡಕೊಳ ಹಾಗೂ ತಾಂಡ್ಯ ಕೈಗಾರಿಕಾ ಪ್ರದೇಶಕ್ಕೆ ನೀರು ಪೂರೈಸುವ ತಾಲೂಕಿನ ಮಲ್ಲನಮೂಲೆ ಸಮೀಪದಲ್ಲಿರುವ ಕಾರಾರ‍ಯಗಾರದ ನೀರೆತ್ತುವ ಘಟಕದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದೆ. ಇದರಿಂದ ಮೂರ್ನಾಲ್ಕು ದಿನಗಳಿಂದ ಕೈಗಾರಿಕಾ ಪ್ರದೇಶಕ್ಕೆ ನೀರು ಪೂರೈಕೆ ಸ್ಥಗಿತಗೊಂಡಿದ್ದು, ಕಾರ್ಖಾನೆಗಳ ಮಾಲೀಕರು ಸಂಕಷ್ಟಕ್ಕೆ ಸಿಲುಕಿದ್ದಾರೆ.

Vijaya Karnataka 14 Jul 2018, 5:00 am
ಕಪಿಲೆಯಲ್ಲಿ ನೀರಿನ ಪ್ರವಾಹಕ್ಕೆ ಕೈಕೊಟ್ಟ ನೀರೆತ್ತುವ ಘಟಕ
Vijaya Karnataka Web water supply breakdown to the industrial area of the kadakola
ಕಡಕೊಳ ಕೈಗಾರಿಕ ಪ್ರದೇಶಕ್ಕೆ ನೀರು ಪೂರೈಕೆ ಸ್ಥಗಿತ


ನಂಜನಗೂಡು: ಕಪಿಲಾ ನದಿಯಲ್ಲಿ ನೀರಿನ ಹರಿವು ತೀವ್ರ ಪ್ರಮಾಣದಲ್ಲಿ ಹೆಚ್ಚಾಗಿರುವುದರಿಂದ ಕಡಕೊಳ ಹಾಗೂ ತಾಂಡ್ಯ ಕೈಗಾರಿಕಾ ಪ್ರದೇಶಕ್ಕೆ ನೀರು ಪೂರೈಸುವ ತಾಲೂಕಿನ ಮಲ್ಲನಮೂಲೆ ಸಮೀಪದಲ್ಲಿರುವ ಕಾರಾರ‍ಯಗಾರದ ನೀರೆತ್ತುವ ಘಟಕದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದೆ. ಇದರಿಂದ ಮೂರ್ನಾಲ್ಕು ದಿನಗಳಿಂದ ಕೈಗಾರಿಕಾ ಪ್ರದೇಶಕ್ಕೆ ನೀರು ಪೂರೈಕೆ ಸ್ಥಗಿತಗೊಂಡಿದ್ದು, ಕಾರ್ಖಾನೆಗಳ ಮಾಲೀಕರು ಸಂಕಷ್ಟಕ್ಕೆ ಸಿಲುಕಿದ್ದಾರೆ.

ಈ ನೀರೆತ್ತುವ ಕಾರಾರ‍ಯಗಾರದಿಂದ ಕಡಕೋಳ, ತಾಂಡ್ಯ,ಅಡಕನಹಳ್ಳಿ ಹಾಗೂ ಹಿಮ್ಮಾವು ಕೈಗಾರಿಕಾ ಪ್ರದೇಶದಲ್ಲಿರುವ ಕಾರ್ಖಾನೆಗಳಿಗೆ ನೀರು ಪೂರೈಸಲಾಗುತ್ತಿದೆ. ಜುಲೈ 8ರಿಂದ ಕಪಿಲಾ ನದಿಯಲ್ಲಿ ನೀರಿನ ಹರಿವು ಹೆಚ್ಚಾಗಿದ್ದರಿಂದ ಜುಲೈ 9ರಿಂದ ನೀರೆತ್ತುವ ಘಟಕದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದೆ. ನದಿಯೊಳಗೆ ಇರುವ ತೊಟ್ಟಿಯಲ್ಲಿ ಕಸಕಡ್ಡಿ ಸಿಲುಕಿರುವುದರಿಂದ ಪೈಪ್‌ಗಳ ಮೂಲಕ ನೀರೆತ್ತಲು ಸಾಧ್ಯವಾಗುತ್ತಿಲ್ಲ ಎಂದು ಕೆಐಡಿಬಿ ಅಧಿಕಾರಿಗಳು ತಿಳಿಸಿದ್ದಾರೆ.

ಶುಕ್ರವಾರ ಸ್ಥಳಕ್ಕೆ ಭೇಟಿ ನೀಡಿದ್ದ ಕೆಐಡಿಬಿ ಅಭಿವೃದ್ಧಿ ಅಧಿಕಾರಿ ರಾಮು ಸುದ್ದಿಗಾರರೊಂದಿಗೆ ಮಾತನಾಡಿ, ಕಳೆದ 15 ವರ್ಷಗಳಿಂದ ಕೈಗಾರಿಕಾ ಪ್ರದೇಶಕ್ಕೆ ಕಪಿಲಾ ನದಿಯಿಂದ ಪೂರೈಸಲಾಗುತ್ತಿದ್ದು , ಇದೇ ಮೊದಲ ಬಾರಿಗೆ 5ದಿನಗಳ ಕಾಲ ನೀರು ಪೂರೈಕೆ ಸ್ಥಗಿತಗೊಂಡಿದೆ. ನದಿಯಲ್ಲಿ ನೀರಿನ ಹರಿವು ಹೆಚ್ಚಾಗಿರುವುದರಿಂದ ದುರಸ್ತಿ ಕಾರ‍್ಯಕ್ಕೆ ಅಡ್ಡಿಯಾಗಿದೆ. 30 ಅಡಿ ಆಳದಲ್ಲಿರುವ ನೀರಿನ ತೊಟ್ಟಿಗೆ ಇಳಿದು ಕಸಕಡ್ಡಿಯನ್ನು ತೆರವುಗೊಳಿಸಲು ಹೆಚ್ಚುವರಿ ಸಿಬ್ಬಂದಿಯನ್ನು ಕರೆಸಲಾಗಿದ್ದು , ಶನಿವಾರದಿಂದ ನೀರು ಪೂರೈಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ಇದೇ ಸಂದರ್ಭ ಕಡಕೋಳ ಕೈಗಾರಿಕೆಗಳ ಒಕ್ಕೂಟದ ಕಾರ‍್ಯದರ್ಶಿ ಹರೀಶ್‌ ಮಾತನಾಡಿ, ಕಳೆದ ನಾಲ್ಕು ದಿನಗಳಿಂದ ನೀರು ಪೂರೈಕೆ ಸ್ಥಗಿತಗೊಂಡಿದ್ದರೂ ಕೆಐಡಿಬಿ ಅಧಿಕಾರಿಗಳು ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿಲ್ಲ . ಇದರಿಂದಾಗಿ ಕಾರ್ಖಾನೆಗಳು ಉತ್ಪಾದನೆ ಸ್ಥಗಿತಗೊಳಿಸುವ ಆತಂಕ ಎದುರಾಗಿದ್ದು , ನಾಳೆಯೊಳಗೆ ಕೈಗಾರಿಕಾ ಪ್ರದೇಶಕ್ಕೆ ನೀರು ಪೂರೈಸಲು ಕ್ರಮ ಕೈಗೊಳ್ಳದಿದ್ದಲ್ಲಿ ಕೆಐಡಿಬಿಗೆ ಬೀಗ ಜಡಿದು ಪ್ರತಿಭಟಿಸಲಾಗುವುದು ಎಂದು ಎಚ್ಚರಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ