ಆ್ಯಪ್ನಗರ

ತಮಿಳುನಾಡಿಗೆ ನೀರು: ಸುತ್ತೂರಿನಲ್ಲಿ ಪ್ರತಿಭಟನೆ

ಕಬಿನಿ ಅಣೆಕಟ್ಟೆ ತುಂಬುವ ಮೊದಲೇ ತಮಿಳುನಾಡಿಗೆ ನೀರು ಹರಿಸಲು ಮುಂದಾಗಿರುವ ನೀರಾವರಿ ಇಲಾಖೆ ಅಧಿಕಾರಿಗಳ ಕ್ರಮವನ್ನು ವಿರೋಧಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಕಾರ‍್ಯಕರ್ತರು ಭಾನುವಾರ ಸುತ್ತೂರಿನಲ್ಲಿ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.

Vijaya Karnataka 22 Jul 2019, 5:00 am
ನಂಜನಗೂಡು : ಕಬಿನಿ ಅಣೆಕಟ್ಟೆ ತುಂಬುವ ಮೊದಲೇ ತಮಿಳುನಾಡಿಗೆ ನೀರು ಹರಿಸಲು ಮುಂದಾಗಿರುವ ನೀರಾವರಿ ಇಲಾಖೆ ಅಧಿಕಾರಿಗಳ ಕ್ರಮವನ್ನು ವಿರೋಧಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಕಾರ‍್ಯಕರ್ತರು ಭಾನುವಾರ ಸುತ್ತೂರಿನಲ್ಲಿ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.
Vijaya Karnataka Web water to tamil nadu protest
ತಮಿಳುನಾಡಿಗೆ ನೀರು: ಸುತ್ತೂರಿನಲ್ಲಿ ಪ್ರತಿಭಟನೆ


ಸುತ್ತೂರು ಗ್ರಾಮದ ಮುಖ್ಯರಸ್ತೆಯಲ್ಲಿರುವ ಕಪಿಲಾ ನದಿ ಸೇತುವೆ ಬಳಿ ಸಂಘಟಿತರಾದ ಕಾರ‍್ಯಕರ್ತರು ಸರಕಾರ ಹಾಗೂ ಕಾವೇರಿ ನೀರು ನಿರ್ವಹಣಾ ಮಂಡಳಿ ವಿರುದ್ಧ ಘೋಷಣೆಗಳನ್ನು ಕೂಗಿದರು.

ಈ ಸಂದರ್ಭ ಮಾತನಾಡಿದ ಪ್ರತಿಭಟನಾಕಾರರು ಕಬಿನಿ ಅಣೆಕಟ್ಟೆ ಭರ್ತಿಯಾಗದಂತೆ ನೋಡಿಕೊಳ್ಳುವ ವ್ಯವಸ್ಥಿತ ಷಡ್ಯಂತ್ರವನ್ನು ನೀರಾವರಿ ಇಲಖೆ ಅಧಿಕಾರಿಗಳು ನಡೆಸುತ್ತಿದ್ದಾರೆ. ಕಬಿನಿ ಅಚ್ಚುಕಟ್ಟು ಪ್ರದೇಶದ ಕೆರೆ ಕಟ್ಟೆಗಳು ಹಾಗೂ ನಾಲೆಗಳು ಒಣಗಿನಿಂತಿದ್ದು ಜನ ಹಾಗೂ ಜಾನುವಾರುಗಳು ಕುಡಿಯುವ ನೀರಿಗಾಗಿ ಪರಿತಪಿಸುತ್ತಿದ್ದಾರೆ ಹೀಗಾಗಿ ತಕ್ಷಣ ಕಬಿನಿ ಅಚ್ಚುಕಟ್ಟು ಪ್ರದೇಶದ ನಾಲೆಗಳಿಗೆ ನೀರು ಹರಿಸಲು ಅಧಿಕಾರಿಗಳು ತೀರ್ಮಾನ ಮಾಡಬೇಕಿತ್ತು. ಆದರೆ ಜಲಾಶಯ ಭರ್ತಿಯಾಗುವ ಮುನ್ನವೇ ನೀರನ್ನು ಹೆಚ್ಚಿನ ಪ್ರಮಾಣದಲ್ಲಿ ಹರಿಯಬಿಡುವ ಮೂಲಕ ಸ್ಥಳೀಯ ರೈತರ ಹಿತಾಸಕ್ತಿಯನ್ನು ಕಡೆಗಣಿಸಲಾಗುತ್ತಿದೆ ಇದೇ ಪರಿಸ್ಥಿತಿ ಮುಂದುವರಿದಲ್ಲಿ ಪ್ರತಿಭಟನೆಯನ್ನು ತೀವ್ರಗೊಳಿಸಲಾಗುವುದು ಎಂದು ಎಚ್ಚರಿಸಿದರು.

ಕೆಲ ಸಮಯ ಮುಖ್ಯರಸ್ತೆಯನ್ನು ಬಂದ್‌ ಮಾಡಿದ ಪ್ರತಿಭಟನಾಕಾರರ ಮನವೊಲಿಸಿ ರಸ್ತೆ ತೆರವು ಮಾಡಿಸುವಲ್ಲಿ ಯಶಸ್ವಿಯಾದ ಬಿಳಿಗೆರೆ ಠಾಣೆಯ ಪೊಲೀಸರು ವಾಹನಗಳ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು. ಪ್ರತಿಭಟನೆಯಲ್ಲಿ ರೈತ ಸಂಘದ ತಾಲೂಕು ಅಧ್ಯಕ್ಷ ಶಿರಮಳ್ಳಿ ಸಿದ್ದಪ್ಪ, ಪ್ರಧಾನಕಾರ‍್ಯದರ್ಶಿ ಹೆಜ್ಜಿಗೆ ಪ್ರಕಾಶ್‌, ಜಿಲ್ಲಾ ಉಪಾಧ್ಯಕ್ಷ ಗುರುಲಿಂಗ ಗೌಡ ಸೇರಿದಂತೆ ಸ್ಥಳಿಯ ಗ್ರಾಮಸ್ಥರು ಹಾಗೂ ರೈತ ಸಂಘದ ಕಾರ‍್ಯಕರ್ತರು ಭಾಗವಹಿಸಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ