ಆ್ಯಪ್ನಗರ

ವಿಶ್ವನಾಥ್‌ ಒಬ್ಬಂಟಿಯಲ್ಲ, ನಾವು ಅವರೊಟ್ಟಿಗೆ ಇದ್ದೇವೆ: ಮೈಸೂರಲ್ಲಿ ಎಸ್‌ಟಿ ಸೋಮಶೇಖರ್‌ ಸ್ಪಷ್ಟನೆ

ಸಚಿವ ಸ್ಥಾನ ಸಿಗದಿದ್ದಕ್ಕೆ ಅಸಮಾಧಾನಗೊಂಡಿರುವ ಪರಿಷತ್‌ ಸದಸ್ಯ ಎಚ್‌ ವಿಶ್ವನಾಥ್‌ ಒಬ್ಬಂಟಿಯಲ್ಲ. ಅವರೊಂದಿಗೆ ನಾವಿದ್ದೇವೆ ಎಂದು ಸಚಿವ ಎಸ್‌ಟಿ ಸೋಮಶೇಖರ್‌ ಹೇಳಿದ್ದಾರೆ. ಬಿಎಸ್‌ ಯಡಿಯೂರಪ್ಪ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಕೆಲಸ ಮಾಡುತ್ತಿದ್ದಾರೆ. ಅವರು ಯಾರನ್ನೂ ದೂರ ಮಾಡಿಲ್ಲ ಎಂದರು.

Vijaya Karnataka Web 24 Jan 2021, 4:25 pm
ಮೈಸೂರು: ವಿಧಾನ ಪರಿಷತ್‌ ಸದಸ್ಯ ಎಚ್‌.ವಿಶ್ವನಾಥ್‌ ಒಬ್ಬಂಟಿಯಲ್ಲ. ಅವರ ಜತೆ ನಾವೆಲ್ಲಾ ಇದ್ದೇವೆ, ಅವರನ್ನು ನಾವ್ಯಾರು ದೂರ ಮಾಡಿಲ್ಲ ಎಂದು ಸಚಿವ ಎಸ್‌.ಟಿ.ಸೋಮಶೇಖರ್‌ ಹೇಳಿದರು.
Vijaya Karnataka Web ST Somashekar on H Vishwanath
ಎಸ್‌ಟಿ ಸೋಮಶೇಖರ್‌, ಎಚ್‌ ವಿಶ್ವನಾಥ್‌ (ಸಂಗ್ರಹ ಚಿತ್ರ)


ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಶ್ವನಾಥ್‌ ಕರೆಗೆ ನಾವೆಲ್ಲರೂ ಸ್ಪಂದಿಸುತ್ತಿದ್ದೇವೆ. ಸರಕಾರದ ಮಟ್ಟದಲ್ಲಿ ಅವರು ಕೇಳಿದ ಕೆಲಸಗಳನ್ನು ಮಾಡಿಕೊಡುತ್ತಿದ್ದೇವೆ. ಆದರೆ ಅವರು ತಾವು ಒಬ್ಬಂಟಿ ಎಂದು ಯಾಕೆ ಹೇಳಿದರೋ ಗೊತ್ತಿಲ್ಲ. ಈ ಬಗ್ಗೆ ವಿಶ್ವನಾಥ್‌ ಅವರ ಜತೆ ಮಾತನಾಡುವೆ ಎಂದರು.

ಮುಖ್ಯಮಂತ್ರಿ ಯಡಿಯೂರಪ್ಪ ಅವರು ಯಾರನ್ನೂ ದೂರ ಇಡುವವರಲ್ಲ. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಹೋಗುತ್ತಿದ್ದಾರೆ. ಅವರ ಮೇಲೆ ಮಾಡುವ ಆರೋಪಗಳು ಸುಳ್ಳು. ವಿಶ್ವನಾಥ್‌ ಯಾಕೆ ತಮ್ಮನ್ನು ಮುಖ್ಯಮಂತ್ರಿಗಳು ದೂರ ಮಾಡಿದ್ದಾರೆ ಎಂದು ಹೇಳಿಕೆ ನೀಡಿದ್ದಾರೋ ಗೊತ್ತಿಲ್ಲ ಎಂದರು.
ಮೈಸೂರು: ವಿಶ್ವನಾಥ್‌ ಒಕ್ಕಲಿಗರ ಋಣದಲ್ಲಿದ್ದಾರೆ..! ಯೋಗೇಶ್ವರ್‌ ವಿರುದ್ಧದ ಟೀಕೆಗೆ ಒಕ್ಕಲಿಗ ಮುಖಂಡರ‌ ಕಿಡಿಯಾರಿಗೂ ಅಸಮಾಧಾನ ಇಲ್ಲ
ಸಂಪುಟ ವಿಸ್ತರಣೆಯಿಂದ ಯಾರಿಗೂ ಅಸಮಾಧಾನ ಆಗಿಲ್ಲ. ಯಾವ ಪ್ರತ್ಯೇಕ ಸಭೆಯೂ ಇಲ್ಲ. ಊಟಕ್ಕೆ ಕರೆದಿದ್ದರೆ ಹೋಗಿರುತ್ತಾರೆ. ಅದು ಬಿಟ್ಟು ಬೇರೆ ಸಭೆಗಳು ನಡೆದಿಲ್ಲ. ಮುಖ್ಯಮಂತ್ರಿಗಳ ಸೂಚನೆಯಂತೆ ಮುಂದಿನ ತಾಲೂಕು ಪಂಚಾಯಿತಿ ಚುನಾವಣೆಗೆ ನಾವೆಲ್ಲರೂ ಕೆಲಸ ಮಾಡುತ್ತಿದ್ದೇವೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ವಾಸ್ತವ ಅರಿತು ವಿಶ್ವನಾಥ್‌ ತಾಳ್ಮೆ ಪ್ರದರ್ಶಿಸಬೇಕು: ಶಾಸಕ ಹರ್ಷವರ್ಧನ್‌ ಸಲಹೆಅಕ್ರಮ ಗಣಿಗಾರಿಕೆ ನಡೆಸಿದರೆ ಕ್ರಮಅಕ್ರಮ ಗಣಿಗಾರಿಕೆ ಯಾವುದೇ ಜಿಲ್ಲೆಯಲ್ಲಿ ನಡೆಯುತ್ತಿರಲಿ ಅದನ್ನು ಸಹಿಸಲಾಗದು ಎಂದು ಮುಖ್ಯಮಂತ್ರಿಗಳು ಹೇಳಿದ್ದಾರೆ. ಅನುಮತಿ ಪಡೆದು ಗಣಿಗಾರಿಕೆ ನಡೆಸಿದರೆ ಸಮಸ್ಯೆಯಾಗದು. ಅದು ಬಿಟ್ಟು ಬೇರೆ ಮಾರ್ಗದಲ್ಲಿ ಹೋದರೆ ಮುಲಾಜಿಲ್ಲದೆ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಸೋಮಶೇಖರ್‌ ಎಚ್ಚರಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ