ಆ್ಯಪ್ನಗರ

ನನಗೂ ಸೇರಿದಂತೆ 17 ಮಂದಿಗೂ ಸ್ಥಾನಮಾನ ನೀಡಬೇಕು, ಕೊಡದಿದ್ದರೆ ಮುಂದೆ ನೋಡೋಣ: ವಿಶ್ವನಾಥ್

ರಾಜ್ಯ ಬಿಜೆಪಿ ಸರಕಾರದ ಸಚಿವ ಸಂಪುಟ ವಿಸ್ತರಣೆ ಕಗ್ಗಂಟ್ಟಾಗಿ ಪರಿಣಮಿಸಿದೆ. ರಾಜೀನಾಮೆ ಕೊಟ್ಟ ಎಲ್ಲರಿಗೂ ಸಚಿವ ಸ್ಥಾನ ಕೊಡಬೇಕಾ ಮತ್ತು ಬಿಜೆಪಿಯ ಹಿರಿಯರಿಗೂ ಮಣೆ ಹಾಕಬೇಕಾ ಎಂಬ ತಲೆನೋವು ಬಿಎಸ್‌ ಯಡಿಯೂರಪ್ಪಗಿದೆ.

Vijaya Karnataka Web 25 Jan 2020, 7:06 pm
ಮೈಸೂರು: ನನಗೂ ಸೇರಿದಂತೆ 17 ಮಂದಿಗೂ ಸ್ಥಾನಮಾನ ನೀಡಬೇಕು. ಕೊಡದಿದ್ದರೆ ಮುಂದೆ ನೋಡೋಣ ಎಂದು ಮಾಜಿ ಸಚಿವ ಎಚ್‌ ವಿಶ್ವನಾಥ್‌ ತಿರುಗೇಟು ನೀಡಿದ್ದಾರೆ.
Vijaya Karnataka Web ಎಚ್‌ ವಿಶ್ವನಾಥ್‌
ಎಚ್‌ ವಿಶ್ವನಾಥ್‌


ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಎಚ್‌ ವಿಶ್ವನಾಥ್‌ ಮಾತನಾಡಿದರು.

ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ಮಾತಿನ ಮೇಲೆ ನಿಲ್ಲುವ ನಾಯಕ. ಕೊಟ್ಟ ಮಾತು ಉಳಿಸಿಕೊಳ್ಳುವ ವಿಶ್ವಾಸವಿದೆ. ನಿಮ್ಮಿಂದಲೇ ಸರ್ಕಾರ ಬಂದಿದೆ ಎಂದಿದ್ದಾರೆ. ಹೀಗಾಗಿ ರಾಜೀನಾಮೆ ಕೊಟ್ಟ ಎಲ್ಲ 17 ಮಂದಿಗೂ ಸ್ಥಾನಮಾನ ನೀಡಬೇಕು ಎಂಬುದು ನಮ್ಮ ಆಗ್ರಹ ಎಂದರು.

ನನಗೆ ಚುನಾವಣೆಯಲ್ಲಿ ಸ್ಪರ್ಧಿಸಬೇಡ ಎಂದು ಮುಖ್ಯಮಂತ್ರಿ ಹೇಳಿದ್ದು ಸತ್ಯ. ಆದರೆ ಸೋತರೆ ಸಚಿವ ಸ್ಥಾನ ಕೊಡೋದು ಕಷ್ಟ ಎಂದು ಹೇಳಿರಲಿಲ್ಲ. ಈಗ ನಾನು ಪಕ್ಷ ಸಂಘಟಿಸಿ ಉಪಚುನಾವಣೆಯಲ್ಲಿ 52 ಸಾವಿರ ಮತ ಪಡೆದುಕೊಂಡಿದ್ದೇನೆ. ಈಗ ನಾವು ಒಗ್ಗಟ್ಟಾಗೇ ಇದ್ದೇವೆ. ಸೋಮಶೇಖರ್ ಹೇಳಿದಂತೆ ಒಟ್ಟಿಗೆ ಸೇರಬಾರದೆಂದು ಇಲ್ಲ ಎಂದು ಟಾಂಗ್ ನೀಡಿದರು.

ಉಪಚುನಾವಣೆಯಲ್ಲಿ ಸೋತವರಿಗೆ ಈ ಹಿಂದೆಯೇ ಚುನಾವಣೆಗೆ ನಿಲ್ಲವುದು ಬೇಡ ಅಂತಾ ಸಿಎಂ ಬಿಎಸ್ ವೈ ಹೇಳಿದ್ದರು. ಅದರೂ ಕೆಲವರು ಮುಖ್ಯಮಂತ್ರಿಗಳ ಮಾತು ಕೇಳದೇ ಚುನಾವಣೆಗೆ ಸ್ಪರ್ಧೆ ಮಾಡಿದ್ದರು. ಹೀಗಾಗಿ ಸೋತವರಿಗೆ ಸಚಿವ ಸ್ಥಾನ ನೀಡುವ ಪರಮಾಧಿಕಾರ ಸಿಎಂಗೆ ಇದೆ ಎಂದು ಶಾಸಕ ಎಸ್.ಟಿ ಸೋಮಶೇಖರ್ ಹೇಳಿದ್ದರು.

ಇದಕ್ಕೆ ವಿಶ್ವನಾಥ್‌ ತಿರುಗೇಟು ನೀಡಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ