ಆ್ಯಪ್ನಗರ

ಪತ್ನಿ, ಮಗಳ ಕತ್ತು ಕೊಯ್ದು ಆತ್ಮಹತ್ಯೆಗೆ ಯತ್ನ

ಪತ್ನಿ ಹಾಗೂ ಮಗಳ ಕತ್ತು ಕೊಯ್ದು ಹತ್ಯೆಗೈದು ವ್ಯಕ್ತಿ ಬಳಿಕ ತಾನೂ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಮೈಸೂರಿನ ವಿಜಯನಗರದ ನಾಲ್ಕನೇ ಹಂತದಲ್ಲಿ ಘಟನೆ ನಡೆದಿದೆ.

Vijaya Karnataka Web 25 May 2018, 1:56 pm
ಮೈಸೂರು: ಪತ್ನಿ ಹಾಗೂ ಮಗಳ ಕತ್ತು ಕೊಯ್ದು ಹತ್ಯೆಗೈದು ವ್ಯಕ್ತಿ ಬಳಿಕ ತಾನೂ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಮೈಸೂರಿನ ವಿಜಯನಗರದ ನಾಲ್ಕನೇ ಹಂತದಲ್ಲಿ ಘಟನೆ ನಡೆದಿದೆ.
Vijaya Karnataka Web kill.


ಸಾಫ್ಟ್ ವೇರ್ ಎಂಜಿನಿಯರ್ ಆಗಿರುವ ಪ್ರಜ್ವಲ್ (45) ಆರೋಪಿಯಾಗಿದ್ದು, ಪತ್ನಿ ಸಾಫ್ಟ್‌ವೇರ್‌ ಎಂಜಿನಿಯರ್‌ ಆವಿಯ (39) ಹಾಗೂ ಮಗಳು ಸಿಂಚನ (11) ಮೃತರು.

ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ದಂಪತಿ ಸಾಫ್ಟ್‌ವೇರ್‌ ಎಂಜಿನಿಯರ್‌ಗಳು. ಮೊನ್ನೆ ರಾತ್ರಿ ಪತ್ನಿ ಹಾಗೂ ಮಗಳ ಕತ್ತು ಕೊಯ್ದು ಪ್ರಜ್ವಲ್‌ ತಾನೂ ಕತ್ತು ಕೊಯ್ದುಕೊಂಡು ಒಂದು ರಾತ್ರಿ ಮೃತದೇಹಗಳ ಬಳಿ ಕಳೆದಿದ್ದು, ಈಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

ಗುರುವಾರ ದಂಪತಿಯ ವಿವಾಹ ವಾರ್ಷಿಕೋತ್ಸವ ಇತ್ತು. ಪತಿ ಪತ್ನಿಯರ ಮಧ್ಯೆ ತೀವ್ರ ಜಗಳವೂ ಆಗಿತ್ತು. ವಿವಾಹ ವಾರ್ಷಿಕೋತ್ಸವ ಆಚರಿಸುವ ಹಿಂದಿನ ದಿನ ಪ್ರಜ್ವಲ್‌ ಪತ್ನಿ ಮತ್ತು ಮಗಳನ್ನು ಹತ್ಯೆ ಮಾಡಿದ್ದಾನೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ