ಆ್ಯಪ್ನಗರ

ಮೈಸೂರಿನಲ್ಲಿ ಬೆಳ್ಳಂಬೆಳಗ್ಗೆ ಕಾಡಾನೆ ದಾಳಿ: ಎರಡು ಮನೆ ಜಖಂ, ವೃದ್ಧ ಸಾವು!

ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲೂಕಿನ ನೆಟ್ಟಕಲ್ಲಹುಂಡಿ ಗ್ರಾಮದಲ್ಲಿ ಗುರುವಾರ ಬೆಳ್ಳಂಬೆಳಗ್ಗೆ ಕಾಡಾನೆ ದಾಳಿ ನಡೆಸಿ ಎರಡು ಮನೆಗಳಿಗೆ ಹಾನಿ ಮಾಡಿದ್ದು, ವೃದ್ಧನೋರ್ವ ಸಾವನ್ನಪ್ಪಿರುವ ಘಟನೆ ನಡೆದಿದೆ.

Vijaya Karnataka Web 19 Nov 2020, 1:01 pm
ಮೈಸೂರು: ನವೆಂಬರ್ 19ರ ಗುರುವಾರ ಬೆಳ್ಳಂಬೆಳಗ್ಗೆ 6 ಗಂಟೆ ಸುಮಾರಿಗೆ ನಿದ್ದೆಯ ಮಂಪರಿನಲ್ಲಿದ್ದ ವೃದ್ಧ ಚಿರನಿದ್ರೆಗೆ ಜಾರಿದ್ದಾರೆ. ಹೌದು, ಮನೆಯ ಮೇಲೆ ಕಾಡಾನೆ ದಾಳಿ ಮಾಡಿದರ ಪರಿಣಾಮದಿಂದಾಗಿ ವೃದ್ಧ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲೂಕಿನ ನೆಟ್ಟಕಲ್ಲಹುಂಡಿ ಗ್ರಾಮದಲ್ಲಿ ನಡೆದಿದೆ.
Vijaya Karnataka Web ಮೈಸೂರು


ವೃದ್ಧ ದಂಪತಿ ಚಿನ್ನಪ್ಪ ಹಾಗೂ ಕೊಟ್ಟೂರಮ್ಮ ನೆಲೆಸಿರುವ ನೆಟ್ಟಕಲ್ಲಹುಂಡಿ ಗ್ರಾಮದ ಮನೆಯ ಮೇಲೆ ಕಾಡಾನೆ ದಾಳಿ ನಡೆಸಿದೆ. ಈ ವೇಳೆ ಚಿನ್ನಪ್ಪ (58) ಕಾಡಾನೆ ದಾಳಿಯಿಂದ ಮೃತಪಟ್ಟಿದ್ದರೆ, ಅವರ ಪತ್ನಿ ಕೊಟ್ಟೂರಮ್ಮಗೆ ಗಂಭೀರ ಗಾಯಗಳಾಗಿವೆ. ಕೂಡಲೇ ಗಾಯಾಳು ಕೊಟ್ಟೂರಮ್ಮನವರನ್ನು ಎಚ್.ಡಿ.ಕೋಟೆ ಸಾರ್ವಜನಿಕ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗಿದೆ.

ಈ ಕಾಡಾನೆ ದಾಳಿಯಿಂದ ಗ್ರಾಮದ ಎರಡು ಮನೆಗಳಿಗೆ ಸಂಪೂರ್ಣ ಹಾನಿಯಾಗಿದೆ. ಬೀಚನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ಸಂಭವಿಸಿದೆ. ಕಾಡಾನೆ ದಾಳಿಯಿಂದಾಗಿ ಸುತ್ತಮುತ್ತಲ ಗ್ರಾಮಸ್ಥರು ಕಂಗಾಲಾಗಿದ್ದು ಜನರು ಭಯದಲ್ಲಿ ಬದುಕುವಂತಾಗಿದೆ. ಹೀಗಾಗು ಅರಣ್ಯ ಇಲಾಖೆಯವರು ಸೂಕ್ತ ಕ್ರಮ ಕೈಗೊಂಡು ಇದಕ್ಕೆ ಸಮಸ್ಯೆಯನ್ನು ನಿವಾರಿಸಬೇಕೆಂದು ಗ್ರಾಮದ ಜನರು ಆಗ್ರಹಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ