ಆ್ಯಪ್ನಗರ

ಲೋಕ ಸಮರ: ಇಂದು ವಿಕ ಸಂವಾದ

ಲೋಕಸಭಾ ಚುನಾವಣೆ-2019ರ ಅಂಗವಾಗಿ 'ವಿಜಯ ಕರ್ನಾಟಕ' ವತಿಯಿಂದ ಏ.10ರಂದು ಮೋದಿ ಮತ್ತು ಮಹಾಮೈತ್ರಿ ಲೋಕ ಸಮರ ಕುರಿತು ವಿಕ ಸಂವಾದ ಕಾರ್ಯಕ್ರಮ ನಡೆಯಲಿದೆ.

Vijaya Karnataka 10 Apr 2019, 5:00 am
ಮೈಸೂರು: ಲೋಕಸಭಾ ಚುನಾವಣೆ-2019ರ ಅಂಗವಾಗಿ 'ವಿಜಯ ಕರ್ನಾಟಕ' ವತಿಯಿಂದ ಏ.10ರಂದು ಮೋದಿ ಮತ್ತು ಮಹಾಮೈತ್ರಿ ಲೋಕ ಸಮರ ಕುರಿತು ವಿಕ ಸಂವಾದ ಕಾರ್ಯಕ್ರಮ ನಡೆಯಲಿದೆ.
Vijaya Karnataka Web world war todays vk conversation
ಲೋಕ ಸಮರ: ಇಂದು ವಿಕ ಸಂವಾದ


ಮೈಸೂರು ಹೋಟೆಲ್‌ ಮಾಲೀಕರ ಸಂಘದ ಸಹಯೋಗದಲ್ಲಿ ಮೈಸೂರು ನಗರದ ರಾಮಾನುಜ ರಸ್ತೆಯ ರಾಜೇಂದ್ರ ಕಲಾಮಂದಿರದ ಮಿನಿ ಸಭಾಂಗಣದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ.

ಮೈಸೂರು-ಕೊಡಗು ಅಭಿವೃದ್ಧಿಗೆ ನಮ್ಮ ಕೊಡುಗೆ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ಹಾಗೂ ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿ ಅಭ್ಯರ್ಥಿಗಳ ಪರ ಅವರ ಬೆಂಬಲಿತ ಪ್ರಮುಖ ಮುಖಂಡರು ವಿಕ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಲಿದ್ದಾರೆ.

ನಗರದ ನಾನಾ ಕ್ಷೇತ್ರಗಳ ಸಂಘ ಸಂಸ್ಥೆಗಳ ಪ್ರತಿನಿಧಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡು ತಮ್ಮ ಕ್ಷೇತ್ರದಲ್ಲಿ ಸದ್ಯ ಆಗಿರುವ, ಆಗಬೇಕಾದ ಕೆಲಸಗಳ ಕುರಿತು ತಮ್ಮ ಅಭಿಪ್ರಾಯ ವ್ಯಕ್ತಪಡಿಸುತ್ತಾರೆ.

ವಿಕ ಸಂವಾದಲ್ಲಿ ಶಾಸಕರಾದ ಎಸ್‌.ಎ.ರಾಮದಾಸ್‌, ಎಲ್‌.ನಾಗೇಂದ್ರ, ಧರ್ಮಸೇನಾ, ಮಾಜಿ ಶಾಸಕ ಎಂ.ಕೆ.ಸೋಮಶೇಖರ್‌, ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್‌, ಎಚ್‌.ಎ.ವೆಂಕಟೇಶ್‌, ಮುಖಂಡ ಕೆ.ವಿ.ಮಲ್ಲೇಶ್‌, ಜೆಡಿಎಸ್‌ ನಗರಾಧ್ಯಕ್ಷ ಕೆ.ಟಿ.ಚಲುವೇಗೌಡ ಸೇರಿದಂತೆ ಮತ್ತಿತರ ಮುಖಂಡರು ಪಾಲ್ಗೊಳ್ಳಲಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ