ಆ್ಯಪ್ನಗರ

ಯಡಿಯೂರಪ್ಪ ಯಾರಿಗೂ ಕೊಟ್ಟ ಮಾತು ತಪ್ಪಿಲ್ಲ

ಯಡಿಯೂರಪ್ಪ ಅವರು ಯಾರಿಗೂ ಕೊಟ್ಟ ಮಾತು ತಪ್ಪಿಲ್ಲ. ಇನ್ನು 6 ಸಚಿವ ಸ್ಥಾನ ಖಾಲಿ ಯಿದ್ದು, ಮೈಸೂರು ಭಾಗಕ್ಕೆ ಅವಕಾಶ ನೀಡ ಲಾಗುತ್ತದೆ ಎಂದು ಬಿಜೆಪಿ ಯುವ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಬಿ.ವೈ.ವಿಜಯೇಂದ್ರ ಹೇಳಿದರು.

Vijaya Karnataka 9 Feb 2020, 11:53 pm
ಮೈಸೂರು: ಯಡಿಯೂರಪ್ಪ ಅವರು ಯಾರಿಗೂ ಕೊಟ್ಟ ಮಾತು ತಪ್ಪಿಲ್ಲ. ಇನ್ನು 6 ಸಚಿವ ಸ್ಥಾನ ಖಾಲಿಯಿದ್ದು, ಮೈಸೂರು ಭಾಗಕ್ಕೆ ಅವಕಾಶ ನೀಡಲಾಗುತ್ತದೆ ಎಂದು ಬಿಜೆಪಿ ಯುವ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಬಿ.ವೈ.ವಿಜಯೇಂದ್ರ ಹೇಳಿದರು.
Vijaya Karnataka Web BY VIJAYENDRA


ಮೈಸೂರಿನಲ್ಲಿ ಭಾನುವಾರ ಮಾಧ್ಯಮದ ವರೊಂದಿಗೆ ಮಾತನಾಡಿ, ಎಚ್.ವಿಶ್ವನಾಥ್ ಹಾಗೂ ಎಂಟಿಬಿ ನಾಗರಾಜ್‌ಗೆ ಕೊಟ್ಟಿರುವ ಮಾತನ್ನು ಯಡಿಯೂರಪ್ಪ ಉಳಿಸಿಕೊಳ್ಳಲಿ ದ್ದಾರೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

ಬಿಜೆಪಿ ಸರಕಾರ ಎಷ್ಟು ದಿನ ಇರುತ್ತೋ ಅನ್ನೋ ಮಾಜಿ ಸಿಎಂ ಎಚ್.ಡಿ.ಕುಮಾರ ಸ್ವಾಮಿ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಕುಮಾರಸ್ವಾಮಿ ಹಗಲು ಕನಸು ಕಾಣುತ್ತಿ ದ್ದಾರೆ. ಮಂತ್ರಿಮಂಡಲ ವಿಸ್ತರಣೆ ಬಳಿಕ ಏನೇನೋ ಆಗುತ್ತೆ ಅಂದುಕೊಂಡಿದ್ದರು. ಆದರೆ, ಯಾವುದೇ ಸಮಸ್ಯೆಯಿಲ್ಲದೆ ಸಿಎಂ ಆಡಳಿತ ನಡೆಸುತ್ತಿದ್ದಾರೆ ಎಂದರು.

ಮಂತ್ರಿಮಂಡಲ ವಿಸ್ತರಣೆ ಬಗ್ಗೆ ಗೊಂದಲಗಳಿದ್ದವು. ಅವುಗಳನ್ನು ಅವರು ಸಮರ್ಥವಾಗಿ ನಿಭಾಯಿಸಿದ್ದಾರೆ. ಸದ್ಯ ಬಿಜೆಪಿಯಲ್ಲಿ ಯಾವುದೇ ಗೊಂದಲವಿಲ್ಲ. ಬಜೆಟ್ ಬಗ್ಗೆ ಯಾರು ತಲೆ ಕೆಡಿಸಿಕೊಂಡಿಲ್ಲ ಎಂಬ ಕಾಂಗ್ರೆಸ್ ನಾಯಕರ ಆರೋಪಕ್ಕೆ ಉತ್ತರಿಸಿ ಕಾಂಗ್ರೆಸ್ ಪಕ್ಷದ ಅಧ್ಯಕ್ಷರ ಆಯ್ಕೆಗೆ ಒಬ್ಬರ ಕಾಲು ಇನ್ನೊಬ್ಬರು ಎಳೆಯುತ್ತಿದ್ದಾರೆ. ಯಡಿಯೂರಪ್ಪನವರು ಬಜೆಟ್ ಬಗ್ಗೆ ಕೆಲಸ ಮಾಡುತ್ತಿಲ್ಲ ಎಂದರೆ ಅಪಹಾಸ್ಯವಾಗುತ್ತದೆ. ಈಗಾಗಲೇ ಬಜೆಟ್ ಪೂರ್ವಭಾವಿ ಸಭೆ ನಡೆಸುತ್ತಿದ್ದಾರೆ. ರಾಜ್ಯಕ್ಕೆ ಉತ್ತಮ ಬಜೆಟ್ ಕೊಡುತ್ತಾರೆ ಎಂದು ತಿಳಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ