ಆ್ಯಪ್ನಗರ

ಮತ್ತೆ ವರುಣಾ ಕ್ಷೇತ್ರದತ್ತ ನೋಟ ಬೀರಿದ್ದಾರಾ ವಿಜಯೇಂದ್ರ

ಸುತ್ತೂರಿಗೆ ಆಗಮಿಸಿದ ಬಿ.ವೈ.ವಿಜಯೇಂದ್ರರನ್ನು ಬಿಜೆಪಿ ಕರ‍್ಯಕರ್ತರು ಪಟಾಕಿ ಸಿಡಿಸಿ ಹೂಹಾರ ಹಾಕಿ ಆತ್ಮೀಯವಾಗಿ ಬರಮಾಡಿಕೊಂಡರು. ಸುತ್ತೂರು ಶ್ರೀ ಶಿವರಾತ್ರೀಶ್ವರ ಶಿವಯೋಗಿಗಳವರ ಗದ್ದುಗೆಗೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.

Vijaya Karnataka Web 4 Oct 2019, 8:57 pm
ನಂಜನಗೂಡು: ಕೇಂದ್ರ ಹಾಗೂ ರಾಜ್ಯದಲ್ಲಿ ಬಿಜೆಪಿ ನೇತೃತ್ವದ ಸರಕಾರ ಅಧಿಕಾರದಲ್ಲಿದ್ದು ಮತದಾರರ ನಿರೀಕ್ಷೆಗೆ ಪೂರಕವಾಗಿ ಕೆಲಸ ನಿರ್ವಹಿಸಲಾಗುತ್ತಿದೆ. ಹೀಗಾಗಿ ಪಕ್ಷದ ಕಾರ‍್ಯಕರ್ತರು ಮುಂಬರುವ ಗ್ರಾಮೀಣ ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ವರುಣಾ ಕ್ಷೇತ್ರದಲ್ಲಿ ಪಕ್ಷವನ್ನು ಬಲಗೊಳಿಸಲು ಮುಂದಾಗುವಂತೆ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಬಿ.ವೈ ವಿಜಯೇಂದ್ರ ತಿಳಿಸಿದರು.
Vijaya Karnataka Web ವಿಜಯೇಂದ್ರ
ವಿಜಯೇಂದ್ರ


ಅವರು ಶುಕ್ರವಾರ ತಾಲೂಕಿನ ವರುಣಾ ವಿಧಾನಸಭಾ ಕ್ಷೇತ್ರ ವ್ಯಾಪ್ತಿಗೆ ಸೇರಿದ ಸುತ್ತೂರು ಗ್ರಾಮದ ಮಂಗಳ ಮಂಟಪದಲ್ಲಿ ಏರ್ಪಡಿಸಿದ್ದ ವರುಣಾ ಕ್ಷೇತ್ರದ ಬಿಜೆಪಿ ಕಾರ್ಯಕರ್ತರ ಸಭೆಯನ್ನುದ್ದೇಶಿಸಿ ಮಾತನಾಡಿದರು.

ವರುಣಾ ಕ್ಷೇತ್ರ ರಾಜಕೀಯವಾಗಿ ನನಗೆ ಜನ್ಮ ನೀಡಿದ ಕ್ಷೇತ್ರವಾಗಿದ್ದು. ಇಲ್ಲಿ ಅಭಿವೃದ್ಧಿ ಕೆಲಸ ಕಾರ‍್ಯಗಳನ್ನು ಮನೆ ಮಗನಂತೆ ನಿರ್ವಹಿಸುವ ಮೂಲಕ ಇಲ್ಲಿನ ಜನರ ಋಣ ತೀರಿಸಲು ಪ್ರಾಮಾಣಿಕ ಪ್ರಯತ್ನ ನಡೆಸುತ್ತೇನೆ ಇನ್ನು ವರುಣಾ ಕ್ಷೇತ್ರ ವ್ಯಾಪ್ತಿಯಲ್ಲಿ ಹೆಚ್ಚಿನ ಸಂಖ್ಯೆಯ ವಿದ್ಯಾವಂತರಿದ್ದು ಅವರಿಗೆ ನೆರವಾಗುವಂತೆ ಕೈಗಾರಿಕೆಗಳು ಬಂದರೆ ಮಾತ್ರ ನಿರುದ್ಯೋಗ ಸಮಸ್ಯೆ ಬಗೆಹರಿಯಲು ಸಾಧ್ಯ ಎಂದು ವಿಜಯೇಂದ್ರ ತಿಳಿಸಿದರು.

ಈ ನಿಟ್ಟಿನಲ್ಲಿ ರಾಜ್ಯದ ಮುಖ್ಯಮಂತ್ರಿ ಯಡಿಯೂರಪ್ಪನವರ ಗಮನ ಸೆಳೆದು ಕ್ಷೇತ್ರ ವ್ಯಾಪ್ತಿಯಲ್ಲಿ ಹೆಚ್ಚು ಸಂಖ್ಯೆಯ ಕೈಗಾರಿಕೆ ಸ್ಥಾಪಿಸಲು ಶ್ರಮಿಸುವುದಾಗಿ ಭರವಸೆ ನೀಡಿದರು.

ಇನ್ನು ಬಿಜೆಪಿ ಪ್ರಧಾನ ಕರ‍್ಯದರ್ಶಿಯಾಗಿ ಪಕ್ಷ ಸಂಘಟನೆಯಲ್ಲಿ ಮಾತ್ರ ನನ್ನ ಸಾಮರ್ಥ್ಯ ತೋರಿದ್ದು ಸರಕಾರದ ಕಾರ‍್ಯವೈಖರಿಯಲ್ಲಿ ಯಾವುದೇ ರೀತಿಯ ಹಸ್ತಕ್ಷೇಪ ಅಥವಾ ಅಧಿಕಾರ ದುರುಪಯೋಗ ಮಾಡಿಕೊಳ್ಳುವುದಾಗಲೀ, ಪಕ್ಷಪಾತವಾಗಲಿ ಮಾಡುತ್ತಿಲ್ಲ ಎಂದು ವಿಜಯೇಂದ್ರ ಸ್ಪಷ್ಟಪಡಿಸಿದರು.

ವರುಣಾ ಕ್ಷೇತ್ರದಲ್ಲಿ ಮತ್ತೆ ವಿಜಯೇಂದ್ರ ತಮ್ಮ ಕಣ್ಣು ಬಿಟ್ಟಿದ್ದಾರಾ ಎಂಬ ಚರ್ಚೆ ಈಗ ಜೋರಾಗಿ ಸಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ