ಆ್ಯಪ್ನಗರ

ಯುವಕ ಸಾವು, ವೈದ್ಯರ ನಿರ್ಲಕ್ಷ್ಯ ಆರೋಪ: ದೂರು

ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಯುವಕನೊಬ್ಬ ಶಸ್ತ್ರ ಚಿಕಿತ್ಸೆ ನಂತರ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ಆಸ್ಪತ್ರೆಯಲ್ಲಿ ನಡೆದಿದೆ.

Vijaya Karnataka 8 Jul 2019, 5:00 am
ಹುಣಸೂರು: ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಯುವಕನೊಬ್ಬ ಶಸ್ತ್ರ ಚಿಕಿತ್ಸೆ ನಂತರ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ಆಸ್ಪತ್ರೆಯಲ್ಲಿ ನಡೆದಿದೆ.
Vijaya Karnataka Web young mans death doctors neglect charge complaint
ಯುವಕ ಸಾವು, ವೈದ್ಯರ ನಿರ್ಲಕ್ಷ್ಯ ಆರೋಪ: ದೂರು


ಹುಣಸೂರು ತಾಲೂಕು ಕಟ್ಟೆಮಳಲವಾಡಿಯ ಸ್ವಾಮಿ-ಕುಸುಮ ದಂಪತಿಯ ಪುತ್ರ ನಿಶಾಂತ್‌(27) ಮೃತ. ತರಬೇತಿ ನಿರತ ವೈದ್ಯರ ನಿರ್ಲಕ್ಷ ್ಯ, ಅಸಮರ್ಪಕ ಚಿಕಿತ್ಸೆಯಿಂದಾಗಿ ಮೃತಪಟ್ಟಿದ್ದಾನೆ ಎಂದು ಸಂಬಂಧಿಕರು ಸುಳ್ಯ ಪೊಲೀಸರಿಗೆ ದೂರು ನೀಡಿದ್ದಾರೆ.

ನಿಶಾಂತ್‌ ಮೂಗಿನಲ್ಲಿ ದುರ್ಮಾಂಸ ಬೆಳೆದು ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದರು. ಚಿಕಿತ್ಸೆಗೆ ಕೊಡಗಿನ ಪಾಲಿಬೆಟ್ಟ ಬಳಿಯ ಚನ್ನಮ್ಮನಕೋಟೆ ನಿವಾಸಿ ತನ್ನ ಚಿಕ್ಕಪ್ಪನ ಪುತ್ರ ಶಶಿ ಎಂಬಾತನ ಜತೆ ಸುಳ್ಯದ ಆಸ್ಪತ್ರೆಗೆ ತೆರಳಿ, ಸೂಕ್ತ ಪರಿಶೀಲನೆ ನಂತರ ಶನಿವಾರ ಶಸ್ತ್ರ ಚಿಕಿತ್ಸೆಗೊಳಗಾಗಿದ್ದ. ಶಸ್ತ್ರ ಚಿಕಿತ್ಸೆ ವೇಳೆ ಹೋಗಿದ್ದ ಜ್ಞಾನ ಮರಳಿ ಬರಲೇ ಇಲ್ಲ. ಆತನಿಗೆ ಹೃದಯಾಘಾತವಾಗಿದೆ ಎಂದು ವೈದ್ಯರು ಮಾಹಿತಿ ನೀಡಿದ್ದರು.

''ಆಸ್ಪತ್ರೆಯಲ್ಲಿ ತರಬೇತಿ ನಿರತ ವೈದ್ಯ ವಿದ್ಯಾರ್ಥಿಗಳೇ ಅರವಳಿಕೆ ಚುಚ್ಚು ಮದ್ದು ಹಾಗೂ ಶಸ್ತ್ರ ಚಿಕಿತ್ಸೆ ನಡೆಸಿದ್ದರಿಂದಲೇ ನಿಶಾಂತ್‌ ಮೃತಪಟ್ಟಿದ್ದಾನೆ,'' ಎಂದು ಆತನ ಸಂಬಂಧಿಯೂ ಆದ ಶಶಿ ಸುಳ್ಯ ಪೊಲೀಸರಿಗೆ ದೂರು ನೀಡಿದ್ದಾರೆ. ಶವವನ್ನು ಮಂಗಳೂರಿನ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. ಭಾನುವಾರ ಸ್ವಗ್ರಾಮದಲ್ಲಿ ಅಂತ್ಯಕ್ರಿಯೆ ನಡೆಸಲಾಯಿತು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ