ಆ್ಯಪ್ನಗರ

ಹುಡುಗರೂ ಸುರಕ್ಷಿತರಲ್ಲ! ದಿಲ್ಲಿಯಲ್ಲಿ 12 ವರ್ಷದ ಬಾಲಕನ ಮೇಲೆ ಸಾಮೂಹಿಕ ಅತ್ಯಾಚಾರ, ಭೀಕರ ಹಲ್ಲೆ

Delhi Gang Rape on Boy: ರಾಷ್ಟ್ರ ರಾಜಧಾನಿ ದಿಲ್ಲಿಯಲ್ಲಿ ಮತ್ತೊಂದು ಭಯಾನಕ ಘಟನೆ ನಡೆದಿದೆ, 12 ವರ್ಷದ ಬಾಲಕನ ಮೇಲೆ ನಾಲ್ವರು ಮಂದಿ ಸಾಮೂಹಿಕ ಅತ್ಯಾಚಾರ ಎಸಗಿ, ಮಾರಣಾಂತಿಕವಾಗಿ ಹಲ್ಲೆ ಮಾಡಿದ್ದಾರೆ. ದಿಲ್ಲಿಯಲ್ಲಿ ಬಾಲಕರೂ ಸುರಕ್ಷಿತರಲ್ಲ ಎಂದು ಮಹಿಳಾ ಆಯೋಗದ ಅಧ್ಯಕ್ಷೆ ಹೇಳಿದ್ದಾರೆ.

Edited byಅಮಿತ್ ಎಂ.ಎಸ್ | Vijaya Karnataka Web 25 Sep 2022, 6:03 pm

ಹೈಲೈಟ್ಸ್‌:

  • ರಾಷ್ಟ್ರ ರಾಜಧಾನಿಯಲ್ಲಿ ಬಾಲಕನ ಮೇಲೆ ಸಾಮೂಹಿಕ ಅತ್ಯಾಚಾರ
  • 12 ವರ್ಷದ ಬಾಲಕನನ್ನು ಅಮಾನುಷವಾಗಿ ಥಳಿಸಿದ ದುಷ್ಕರ್ಮಿಗಳು
  • ಪೊಲೀಸರಿಂದ ಸಮಗ್ರ ವರದಿ ಕೇಳಿದ ದಿಲ್ಲಿ ಮಹಿಳಾ ಆಯೋಗ

ಹೈಲೈಟ್ಸ್‌ ಮಾತ್ರವೇ ಓದಲು ಆ್ಯಪ್‌ ಡೌನ್‌ಲೋಡ್‌ ಮಾಡಿ
Vijaya Karnataka Web Crime scene
ಹೊಸದಿಲ್ಲಿ: ರಾಷ್ಟ್ರ ರಾಜಧಾನಿ ದಿಲ್ಲಿಯಲ್ಲಿ 12 ವರ್ಷದ ಬಾಲಕನ ಮೇಲೆ ನಾಲ್ವರಿಂದ ಸಾಮೂಹಿಕ ಅತ್ಯಾಚಾರದ ಘೋರ ಘಟನೆ ನಡೆದಿದೆ. ಅತ್ಯಾಚಾರದ ಬಳಿಕ ಅಪ್ರಾಪ್ತ ವಯಸ್ಸಿನ ಬಾಲಕನ ಮೇಲೆ ಬಡಿಗೆಗಳಿಂದ ಅಮಾನುಷವಾಗಿ ಥಳಿಸಿ, ಸಾವು ಬದುಕಿನ ಸ್ಥಿತಿಯಲ್ಲಿ ಬಿಟ್ಟುಹೋಗಿದ್ದಾರೆ. ಈ ಘಟನೆ ರಾಜಧಾನಿಯ ಜನರಲ್ಲಿ ಆಘಾತ ಮೂಡಿಸಿದೆ.
ಈ ಘಟನೆ ಬಗ್ಗೆ ಟ್ವೀಟ್ ಮಾಡಿರುವ ದಿಲ್ಲಿ ಮಹಿಳಾ ಆಯೋಗದ (ಡಿಸಿಡಬ್ಲ್ಯೂ) ಮುಖ್ಯಸ್ಥೆ ಸ್ವಾತಿ ಮಲಿವಾಲ್, "ದಿಲ್ಲಿಯಲ್ಲಿ ಬಾಲಕರು ಕೂಡ ಸುರಕ್ಷಿತರಲ್ಲ" ಎಂದು ಕಿಡಿಕಾರಿದ್ದಾರೆ.
Delhi Gang Rape: ದಿಲ್ಲಿಯಲ್ಲಿ ಭೀಕರ ಕೃತ್ಯ: ಚಲಿಸುವ ಕಾರಿನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ, ವಿಡಿಯೋ ಚಿತ್ರೀಕರಣ

ಈ ಘಟನೆಯನ್ನು ಮಹಿಳಾ ಆಯೋಗವು ಗಂಭೀರವಾಗಿ ಪರಿಗಣಿಸಿದ್ದು, ದಿಲ್ಲಿ ಪೊಲೀಸರಲ್ಲಿ ಎಫ್‌ಐಆರ್ ದಾಖಲಿಸಿದೆ ಎಂದು ಸ್ವಾತಿ ಮಲಿವಾಲ್ ತಿಳಿಸಿದ್ದಾರೆ.

"ದಿಲ್ಲಿಯಲ್ಲಿ, ಬಾಲಕಿಯರನ್ನು ಬಿಡಿ, ಬಾಲಕರು ಕೂಡ ಸುರಕ್ಷಿತರಲ್ಲ. ನಾಲ್ವರು ವ್ಯಕ್ತಿಗಳು 12 ವರ್ಷದ ಬಾಲಕನ ಮೇಲೆ ಕ್ರೂರವಾಗಿ ಅತ್ಯಾಚಾರ ಎಸಗಿದ್ದಾರೆ ಮತ್ತು ಬಡಿಗೆಗಳಿಂದ ಮಾರಣಾಂತಿಕವಾಗಿ ಥಳಿಸಿ ಅರ್ಧ ಸತ್ತ ಸ್ಥಿತಿಯಲ್ಲಿ ಬಿಟ್ಟು ಹೋಗಿದ್ದಾರೆ. ಈ ವಿಚಾರವಾಗಿ ನಮ್ಮ ತಂಡ ಎಫ್‌ಐಆರ್ ದಾಖಲು ಮಾಡಿದೆ" ಎಂದು ಸ್ವಾತಿ ತಿಳಿಸಿದ್ದಾರೆ.
Delhi Gangrape: ರೈಲ್ವೆ ನಿಲ್ದಾಣದಲ್ಲಿ ಉದ್ಯೋಗಿಗಳಿಂದ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ

ಈ ದಾರುಣ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಒಬ್ಬ ವ್ಯಕ್ತಿಯನ್ನು ಬಂಧಿಸಿದ್ದಾರೆ. ಉಳಿದ ಮೂವರು ಇನ್ನೂ ತಲೆಮರೆಸಿಕೊಂಡಿದ್ದಾರೆ. ಘಟನೆ ಕುರಿತಂತೆ ಮಹಿಳಾ ಆಯೋಗವು, ಆರೋಪಿಗಳ ಬಂಧನದ ಬಗ್ಗೆ, ಬಂಧನ ನಡೆಯದಿದ್ದರೆ ಅದಕ್ಕೆ ಕಾರಣ, ಇಡೀ ಪ್ರಕರಣದಲ್ಲಿ ತೆಗೆದುಕೊಂಡ ಕ್ರಮದ ಕುರಿದು ಸಮಗ್ರ ವರದಿಯನ್ನು ಸೆ. 28ರ ಒಳಗೆ ಸಲ್ಲಿಸುವಂತೆ ದಿಲ್ಲಿ ಪೊಲೀಸರಿಗೆ ನೋಟಿಸ್ ಜಾರಿ ಮಾಡಿದೆ.

ದಿಲ್ಲಿಯ ಸೀಲಾಂಪುರ ಪ್ರದೇಶದಲ್ಲಿ ಸೆ. 18ರಂದು ಈ ಭೀಕರ ಕೃತ್ಯ ಎಸಗಲಾಗಿದೆ. ತನ್ನ ಮಗನ ಮೇಲೆ ನಾಲ್ಕು ಮಂದಿ ಸೇರಿ ಅತ್ಯಾಚಾರ ನಡೆಸಿದ್ದಾರೆ. ಆತನ ಗುಪ್ತಾಂಗಕ್ಕೆ ರಾಡ್ ತುರುಕಿದ್ದಾರೆ. ಇಟ್ಟಿಗೆ ಮತ್ತು ರಾಡುಗಳಿಂದ ಬರ್ಬರವಾಗಿ ಥಳಿಸಿದ್ದಾರೆ ಎಂದು ಬಾಲಕನ ತಾಯಿ ದೂರು ನೀಡಿದ್ದಾರೆ.
ಗಣರಾಜ್ಯೋತ್ಸವದಂದು ರಾಜಧಾನಿಯಲ್ಲಿ ಕರಾಳ ಕೃತ್ಯ: ಮಹಿಳೆ ಮೇಲೆ ಅತ್ಯಾಚಾರ ಎಸಗಿ, ಬೀದಿಯಲ್ಲಿ ಮೆರವಣಿಗೆ

ವಿಪರೀತ ಗಾಯಗೊಂಡು ನೋವಿನಿಂದ ನರಳುತ್ತಿದ್ದ ಬಾಲಕ, ಸೆ. 22ರಂದು ತನ್ನ ಕುಟುಂಬಕ್ಕೆ ಈ ಭಯಾನಕ ಘಟನೆ ಬಗ್ಗೆ ತಿಳಿಸಿದ್ದಾನೆ. ಅದರ ಬಳಿಕ ಪೋಷಕರು ದಿಲ್ಲಿ ಪೊಲೀಸರಿಗೆ ಮಾಹಿತಿ ನೀಡಿದ್ದರು. ಅವರು ಬಾಲಕನನ್ನು ಆಸ್ಪತ್ರೆಗೆ ದಾಖಲು ಮಾಡಿದ್ದರು. ಆತನಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಬಾಲಕನ ಸ್ಥಿತಿ ಚಿಂತಾಜನಕವಾಗಿದೆ.
ಲೇಖಕರ ಬಗ್ಗೆ
ಅಮಿತ್ ಎಂ.ಎಸ್
ವಿಜಯ ಕರ್ನಾಟಕದ ಡಿಜಿಟಲ್ ವಿಭಾಗದಲ್ಲಿ ಪತ್ರಕರ್ತ. 2009ರಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯವಾಗಿದ್ದಾರೆ. ದಿನಪತ್ರಿಕೆಗಳು ಮತ್ತು ವೆಬ್‌ ಪೋರ್ಟಲ್‌ಗಳಲ್ಲಿ ವರದಿಗಾರಿಕೆ, ಸಿನಿಮಾ ವರದಿಗಾರಿಕೆ, ಡೆಸ್ಕ್ ಹಾಗೂ ಜಿಲ್ಲಾ ಕರೆಸ್ಪಾಂಡೆಂಟ್ ಆಗಿ ಕೆಲಸ ಮಾಡಿದ ಅನುಭವ ಇವರಿಗಿದೆ. ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳು ಪ್ರಮುಖ ಆಸಕ್ತಿಯ ವಿಭಾಗಗಳು. ಮಾನವಾಸಕ್ತಿಯ ಹಾಗೂ ಸ್ಫೂರ್ತಿದಾಯಕ ಕಥನಗಳನ್ನು ನಿರೂಪಿಸುವುದು ವೃತ್ತಿಯಲ್ಲಿನ ನೆಚ್ಚಿನ ಸಂಗತಿ. ಪ್ರವಾಸ, ಕ್ರಿಕೆಟ್, ಓದು, ಕೃಷಿ ಇತರೆ ಇವರ ಆಸಕ್ತಿ ಮತ್ತು ಹವ್ಯಾಸಗಳು.... ಇನ್ನಷ್ಟು ಓದಿ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ